ಪ್ರೀಮಿಯಂ ಬಾಸ್ಮತಿ ಅಕ್ಕಿಯ ಅತಿ ದೊಡ್ಡ ಸಂಸ್ಕರಣಾ ಘಟಕವಾದ ಬೆಸ್ಟ್ ಫುಡ್ಸ್ ಲಿಮಿಟೆಡ್ ಮೇಲೆ ಮಂಗಳವಾರ ಸಿಬಿಐ ದಾಳಿ ನಡೆಸಿದೆ. ಇದು ದೇಶದಲ್ಲೇ ಅತಿ ದೊಡ್ಡ ಸಂಸ್ಕರಣಾ ಘಟಕಗಳ ಪೈಕಿ ಒಂದಾಗಿದೆ. ಬೆಸ್ಟ್ ಫುಡ್ಸ್ ಲಿಮಿಟೆಡ್ ನ ಅಧ್ಯಕ್ಷರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಮೇಲೆ ಸಾವಿರ ಕೋಟಿಗೂ ಹೆಚ್ಚಿನ ಬ್ಯಾಂಕ್ ವಂಚನೆಯ ಆರೋಪ ಇದ್ದು, ಅವರ ಮನೆಗಳ ಮೇಲೂ ದಾಳಿ ನಡೆದಿದೆ.
ಸ್ಟೇಟ್ ಬ್ಯಾಂಕ್ ಇಂಡಿಯಾ ನೇತೃತ್ವದ ಬ್ಯಾಂಕ್ ಒಕ್ಕೂಟವು ಈ ಸಾಲವನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಶೋಧ ಕಾರ್ಯಾಚರಣೆ ನಾಲ್ಕು ಸ್ಥಳಗಳಲ್ಲಿ ಆರಂಭವಾಯಿತು. ಚಂಡೀಗಢ ಹಾಗೂ ದೆಹಲಿಯಲ್ಲಿನ ಕಂಪೆನಿ ಕಚೇರಿಗಳು, ಅಧ್ಯಕ್ಷ ಮೊಹಿಂದರ್ ಪಾಲ್ ಜಿಂದಾಲ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ದಿನೇಶ್ ಗುಪ್ತಾ ಅವರ ಕರ್ನಲ್ ನಲ್ಲಿನ ಮನೆಗಳಲ್ಲಿ ಶೋಧ ನಡೆಯಿತು.
ವಂಚನೆ, ಕ್ರಿಮಿನಲ್ ದುರುಪಯೋಗ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ದುರ್ನಡತೆ, ಫೋರ್ಜರಿ ಹೀಗೆ ವಿವಿಧ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಬೆಸ್ಟ್ ಫುಡ್ಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣಗಳನ್ನು ದಾಖಲಿಸಿದೆ. ಇನ್ನು ಏಪ್ರಿಲ್ 1, 2015ರಿಂದ ಮಾರ್ಚ್ 31, 2018ರ ಮಧ್ಯೆ ಪಡೆದ ಸಾಲವನ್ನು ಬೇರೆ ಕಡೆಗೆ ಬಳಸಿರುವ ಆರೋಪ ಇದೆ ಎಂದು ಹೇಳಿದ್ದಾರೆ.

ಸಿಬಿಐಗೆ ದೂರು ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬೆಸ್ಟ್ ಫುಡ್ಸ್ ಲಿಮಿಟೆಡ್ ನಿಂದ ಬೆಸ್ಟ್ ಒಂದೇ ಬ್ರ್ಯಾಂಡ್ ಆಗಿದ್ದು, ಬೆಸ್ಟ್ ಪ್ರೀಮಿಯಂ, ಬೆಸ್ಟ್ ಪ್ರೀಮಿಯಂ, ಬೆಸ್ಟ್ ಸೂಪರ್ ಪ್ರೀಮಿಯಂ ಹೀಗೆ ನಾನಾ ಹೆಸರಲ್ಲಿ ಭಾರತದಾದ್ಯಂತ ಮಾರಾಟ ಮಾಡಲಾಗುತ್ತಿತ್ತು ಎಂದಿದೆ.
ಕಂಪೆನಿಯಿಂದ ಸಾಲ ಹಿಂತಿರುಗಿಸದ ಕಾರಣಕ್ಕೆ ಸೆಪ್ಟೆಂಬರ್ 27, 2016ಕ್ಕೆ ನಾನ್ ಪರ್ಫಾರ್ಮಿಂಗ್ ಅಸೆಟ್ಸ್ ಆಗಿದ್ದು, 1006.46 ಕೋಟಿ ರುಪಾಯಿ ಬಾಕಿ ಉಳಿದಿದೆ. ಇನ್ನು ಫೊರೆನ್ಸಿಕ್ ಆಡಿಟ್ ವೇಳೆ ಬ್ಯಾಲೆನ್ಸ್ ಶೀಟ್ ನಲ್ಲಿ ವ್ಯತ್ಯಾಸ ಹಾಗೂ ಬ್ಯಾಂಕ್ ಹಣವನ್ನು ದುರುಪಯೋಗ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಆರೋಪಿಸಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications