ಮುಂಬೈ, ಜೂನ್ 25: ಯೆಸ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಹಗರಣದ ಕುರಿತು ಗುರುವಾರ ಸಿಬಿಐ ತನ್ನ ಮೊದಲ ಚಾರ್ಜ್ಶೀಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಎಂಟು ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್ಶೀಟ್ ದಾಖಲಿಸಿದೆ.
ಇತರ ಆರೋಪಿಗಳಲ್ಲಿ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಮತ್ತು ಪ್ರವರ್ತಕರಾದ ಕಪಿಲ್ ವಾಧವನ್, ಧೀರಜ್ ವಾಧವನ್ ಸೇರಿದ್ದಾರೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
100 ಪುಟಗಳ ಚಾರ್ಜ್ಶೀಟ್
100 ಪುಟಗಳ ಚಾರ್ಜ್ಶೀಟ್ನಲ್ಲಿ ಎಂಟು ಜನರ ವಿರುದ್ಧದ ಆರೋಪಗಳು ಮೋಸ, ವಂಚನೆ, ಪಿತೂರಿ, ಭ್ರಷ್ಟಾಚಾರ ಮತ್ತು ಸಾಲ ನೀಡುವ ಮಾನದಂಡಗಳ ಉಲ್ಲಂಘನೆಯನ್ನು ಒಳಗೊಂಡಿದೆ ಎಂದು ಸಿಬಿಐ ತಿಳಿಸಿದೆ.
ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ
ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರು ಕಪಿಲ್ ಮತ್ತು ಧೀರಜ್ ವಾಧವನ್ ಅವರೊಂದಿಗೆ ಡಿಎಚ್ಎಫ್ಎಲ್ಗೆ ಹೆಚ್ಚಿನ ಸಾಲವನ್ನು ನೀಡಿದ್ದಕ್ಕಾಗಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. ವೈಯಕ್ತಿಕ ಹಿತಾಸಕ್ತಿಗಾಗಿ ಬ್ಯಾಂಕ್ ಹೆಚ್ಚಿನ ಮೌಲ್ಯದ ಸಾಲಗಳನ್ನು ವಿಸ್ತರಿಸಿದೆ ಎಂದು ಆರೋಪಿಸಲಾಗಿದೆ.
ಮಾರ್ಚ್ 7 ರಂದು ಪ್ರಕರಣ
ಹಗರಣದ ಕುರಿತಂತೆ ಸಿಬಿಐ ಮಾರ್ಚ್ 7 ರಂದು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿತ್ತು. 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ ಡಿಎಚ್ಎಫ್ಎಲ್ನ ಅಲ್ಪಾವಧಿಯ ಡಿಬೆಂಚರ್ಗಳಲ್ಲಿ 3,700 ಕೋಟಿ ರುಪಾಯಿ ಹೂಡಿಕೆ ಮಾಡಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಯಾಗಿ, ವಾಧವಾನ್, ರಾಣಾ ಕಪೂರ್ ಮತ್ತು ಅವರ ಕುಟುಂಬ ಸದಸ್ಯರಿಗೆ ಡೊಯಿಟ್ ಅರ್ಬನ್ ವೆಂಚರ್ಸ್ ಲಿಮಿಟೆಡ್ಗೆ ಸಾಲ ರೂಪದಲ್ಲಿ 600 ಕೋಟಿ ರುಪಾಯಿ ಕಿಕ್ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.
5,050 ಕೋಟಿ ರುಪಾಯಿಯ ಹಗರಣ
ಮಾರ್ಚ್ 9 ರಂದು ರಾಣಾ ಕಪೂರ್ ಅವರನ್ನು ಸಿಬಿಐ ಬಂಧಿಸಿತ್ತು. ಏಪ್ರಿಲ್ನಲ್ಲಿ ಕಪಿಲ್ ವಾಧವನ್, ಧೀರಜ್ ವಾಧವನ್ ಅವರನ್ನು ಸಿಬಿಐ ಏಪ್ರಿಲ್ನಲ್ಲಿ ಬಂಧಿಸಿತ್ತು. ಈಗಾಗಲೇ ಪ್ರಕರಣದ ಮನಿ ಲಾಂಡರಿಂಗ್ ಕುರಿತಂತೆ ಇಡಿ ತನಿಖೆ ನಡೆಸಿ ಮೇ 6 ರಂದು ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟಾರೆ ಯೆಸ್ ಬ್ಯಾಂಕ್ನಲ್ಲಿ 5,050 ಕೋಟಿ ರುಪಾಯಿಯ ಹಗರಣ ನಡೆದಿದೆ ಎಂದು ಸಿಬಿಐ ಹೇಳಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications