ಆಧಾರ್ ಇಲ್ಲದಂತೆ ಉದ್ಯಮಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ನೋಂದಣಿ ಆಗಬೇಕು ಎಂದಾದಲ್ಲಿ ಸ್ಥಳ ಪರಿಶೀಲನೆಯನ್ನು ಮಾಡಲೇಬೇಕು ಎಂದು ಸಿಬಿಐಸಿ (ಸೆಂಟ್ರಲ್ ಬೋರ್ಡ್ ಆಫ್ ಇನ್ ಡೈರೆಕ್ಟ್ ಟ್ಯಾಕ್ಸಸ್ ಅಂಡ್ ಕಸ್ಟಮ್ಸ್) ಹೊಸ ನಿಯಮಾವಳಿಗಳು ತಿಳಿಸಿವೆ.
ಹೊಸದಾಗಿ ಜಿಎಸ್ ಟಿ ನೋಂದಣಿ ಮಾಡಬೇಕು ಎಂದಿದ್ದಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ ಗಳನ್ನು ರೂಪಿಸಲಾಗಿದೆ. ಉದ್ಯಮ ನೋಂದಣಿಗೆ ಆಧಾರ್ ಖಾತ್ರಿಗೊಳಿಸದಿದ್ದಲ್ಲಿ ಅಥವಾ ವಿಫಲವಾಗಿದ್ದಲ್ಲಿ ಆವರಣದ ಪರಿಶೀಲನೆ ನಡೆಸಬೇಕು. ಒಂದು ವೇಳೆ ಕಷ್ಟವಾದಲ್ಲಿ ಅಧಿಕಾರಿಗಳು ಹೆಚ್ಚುವರಿ ದಾಖಲಾತಿಗಳನ್ನು ಕೇಳಬಹುದು.
ಜಿಎಸ್ ಟಿ ನೋಂದಣಿಗೂ ಮುನ್ನ ಆ ಸಂಸ್ಥೆಯ ಸಾಚಾತನ ಖಾತ್ರಿ ಪಡಿಸುವ ಸಲುವಾಗಿ ಹಾಗೂ ನಕಲಿ ಇನ್ ವಾಯ್ಸ್ ಗಳನ್ನು ಪರಿಶೀಲಿಸಲು ಮತ್ತು ಟ್ಯಾಕ್ಸ್ ಕ್ರೆಡಿಟ್ ಗಳ ವಂಚನೆಗಳನ್ನು ತಡೆಯುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಇನ್ನು ಹೊಸದಾಗಿ ವ್ಯಾಪಾರ ಮಾಡುವವರಿಗೆ ಸಮಸ್ಯೆ ಆಗಬಾರದು ಎಂಬ ಕಡೆಯೂ ಗಮನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ಇನ್ ವಾಯ್ಸ್ ಗಳು ಹಾಗೂ ತೆರಿಗೆ ಕ್ರೆಡಿಟ್ ಗಳ ವಂಚನೆಯು ಜಿಎಸ್ ಟಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ದೇಶದಾದ್ಯಂತ ನಡೆದ ಕಾರ್ಯಾಚರಣೆಯಲ್ಲಿ ಜಿಎಸ್ ಟಿ ಗುಪ್ತಚರ ವಿಭಾಗದವರು 994 ಪ್ರಕರಣಗಳನ್ನು 3161 ಸಂಸ್ಥೆಗಳ ವಿರುದ್ಧ ದಾಖಲಿಸಿ, 92 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬ್ಯಾಂಕ್ ಗಳಿಂದ ಸಾಲ ಪಡೆಯುವ ಸಲುವಾಗಿ ಆಗದಂಥ ವ್ಯವಹಾರಗಳನ್ನು ಸಹ ತೋರಿಸುವಂಥ ಪದ್ಧತಿ ಇದೆ. ಜಿಎಸ್ ಟಿ ಹಾಗೂ ಆದಾಯ ತೆರಿಗೆ ತಪ್ಪಿಸಲು ಮತ್ತು ಕಂಪೆನಿಯಿಂದ ಅನುದಾನವನ್ನು ಬೇರೆಡೆ ಹರಿಸುವುದಕ್ಕೆ ನಕಲಿ ಇನ್ ವಾಯ್ಸ್ ಬಳಸಲಾಗುತ್ತದೆ. ಇದರ ಜತೆಗೆ ಜಿಎಸ್ ಟಿ ರೀಫಂಡ್ ಅನ್ನು ತಪ್ಪಾದ ದಾರಿಯಲ್ಲಿ ಬಳಸಲು ಸಹ ಇದನ್ನು ಉಪಯೋಗಿಸಲಾಗುತ್ತದೆ. ಇದನ್ನು ತಡೆಯುವ ಉದ್ದೇಶ ಸರ್ಕಾರಕ್ಕೆ ಇದ್ದು, ಅದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications