ಇ ಕಾಮರ್ಸ್ ಕಂಪೆನಿಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಗಳಲ್ಲಿ ನೀಡುವ ರಿಯಾಯಿತಿ ದರಗಳ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ಕೆಲವು ನಿರ್ದಿಷ್ಟ ಬ್ರ್ಯಾಂಡ್ ನವರು ಎಕ್ಸ್ ಕ್ಲೂಸಿವ್ ಆಗಿ ಈ ವೆಬ್ ಸೈಟ್ ಗಳ ಮೂಲಕವಷ್ಟೇ ಮಾರಾಟ ಮಾಡುತ್ತವೆ. ಅವುಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗುತ್ತದೆ ಎಂಬ ಆರೋಪ ಎದುರಾಗಿದೆ.
ಭಾರತ ಸ್ಪರ್ಧಾತ್ಮಕ ಆಯೋಗವು ಸೋಮವಾರದಂದು ಈ ಬಗ್ಗೆ ಆದೇಶ ಹೊರಡಿಸಿದೆ. "ಮೇಲ್ನೋಟಕ್ಕೆ ಈ ಬಗ್ಗೆ ವ್ಯಕ್ತವಾಗಿರುವ ಅಭಿಪ್ರಾಯದ ಬಗ್ಗೆ ತನಿಖೆ ಅಗತ್ಯ ಇದೆ" ಎನ್ನಲಾಗಿದೆ. ಇನ್ನು ಅರವತ್ತು ದಿನದೊಳಗೆ ಈ ಬಗ್ಗೆ ವರದಿ ಸಲ್ಲಿಸುವಂತೆ ಇಂಥ ಪ್ರಕರಣಗಳ ವಿಚಾರಣೆ ನಡೆಸುವ ಡೆರೆಕ್ಟರ್ ಜನರಲ್ ಗೆ ಸೂಚಿಸಲಾಗಿದೆ.
ಈ ವಾರ ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. "ಅಮೆಜಾನ್ ವಿರುದ್ಧ ಬಂದಿರುವ ಆರೋಪವನ್ನು ಬಗೆಹರಿಸಿಕೊಳ್ಳಲು ಇರುವ ಅವಕಾಶವನ್ನು ಸ್ವಾಗತಿಸುತ್ತೇವೆ. ನಮ್ಮ ನಿಯಮಾವಳಿ ಪಾಲನೆ ಬಗ್ಗೆ ಭರವಸೆ ಇದೆ. ಸಿಸಿಐಗೆ (ಸ್ಪರ್ಧಾತ್ಮಕ ಆಯೋಗ) ಸಹಕಾರ ನೀಡುತ್ತೇವೆ" ಎಂದು ಅಮೆಜಾನ್ ನಿಂದ ತಿಳಿಸಲಾಗಿದೆ.

ವಾಲ್ ಮಾರ್ಟ್ ಮಾಲೀಕತ್ವದ ಫ್ಲಿಪ್ ಕಾರ್ಟ್, ಆದೇಶವನ್ನು ಪರಿಶೀಲಿಸುತ್ತಿದ್ದೇವೆ. ಜಾರಿಯಲ್ಲಿ ಇರುವ ಕಾನೂನು ಅನುಸರಿಸುತ್ತಿದ್ದೇವೆ ಎಂದು ಹೇಳಿದೆ. ದೆಹಲಿ ವ್ಯಾಪಾರ್ ಮಹಾಸಂಘ್ ನ ದೂರಿನ ಅನ್ವಯ ಈ ಆದೇಶವನ್ನು ಹೊರಡಿಸಲಾಗಿದೆ. ಬಿಗ್ ಬಿಲಿಯನ್ ಡೇ ಮತ್ತಿತರ ಸಂದರ್ಭಗಳಲ್ಲಿ ಅಮೆಜಾನ್, ಫ್ಲಿಪ್ ಕಾರ್ಟ್ ನಿಂದ ಭಾರೀ ರಿಯಾಯಿತಿ ನೀಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
ಎರಡು ವರ್ಷಗಳ ಹಿಂದೆ ಫ್ಲಿಪ್ ಕಾರ್ಟ್ ನಲ್ಲಿ ಎಕ್ಸ್ ಕ್ಲೂಸಿವ್ ಆಗಿ ಅರವತ್ತೇಳು ಮೊಬೈಲ್ ಫೋನ್ ಮತ್ತು ಅಮೆಜಾನ್ ನಲ್ಲಿ ನಲವತ್ತೈದು ಮೊಬೈಲ್ ಮಾರಾಟ ಮಾಡಲಾಗಿದೆ. ಇದರಿಂದ ಎಕ್ಸ್ ಕ್ಲೂಸಿವ್ ಬ್ರ್ಯಾಂಡ್, ಮಾರಾಟಗಾರರು, ಹೆಚ್ಚಿನ ರಿಯಾಯಿತಿ ಮತ್ತು ಆದ್ಯತೆ ಲಿಸ್ಟಿಂಗ್ ನೀಡಿದಂತಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications