ಸರ್ಕಾರಿ ಸ್ವಾಮ್ಯದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸಿನ ತೊಂದರೆಯ ಕಾರಣದಿಂದಾಗಿ ತನ್ನ 13 ಪ್ರತಿಶತ ಶಾಖೆಗಳನ್ನು ಮುಚ್ಚಲು ಯೋಜಿಸುತ್ತಿದೆ. ಹಲವಾರು ವರ್ಷಗಳಿಂದ ಆರ್ಥಿಕ ಒತ್ತಡದಲ್ಲಿರುವ ಬ್ಯಾಂಕ್, ತನ್ನ ಶಾಖೆಗಳ ಸಂಖ್ಯೆಯನ್ನು 600 ರಷ್ಟು ಕಡಿಮೆ ಮಾಡಲು ಪ್ರಯತ್ನಿಸುತ್ತಿದೆ ಎಂದು ರಾಯಿಟರ್ಸ್ ವರದಿಯು ಉಲ್ಲೇಖ ಮಾಡಿದೆ.
ರಾಯಿಟರ್ಸ್ ಪರಿಶೀಲಿಸಿದ ಡಾಕ್ಯುಮೆಂಟ್ ಪ್ರತಿಯ ಪ್ರಕಾರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2023 ರ ಅಂತ್ಯದ ವೇಳೆಗೆ ಅದರ ಶಾಖೆಗಳ ಗಾತ್ರದಲ್ಲಿ ಗಮನಾರ್ಹವಾದ ಕಡಿತವನ್ನು ಮಾಡಲಿದೆ. ನಷ್ಟದಲ್ಲಿರುವ ಬ್ಯಾಂಕುಗಳನ್ನು ಮುಚ್ಚಲು ಅಥವಾ ವಿಲೀನ ಮಾಡಲು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನಿರ್ಧರಿಸಿದೆ ಎಂದು ವರದಿಯು ಉಲ್ಲೇಖ ಮಾಡಿದೆ.
ಹೆಸರು ಹೇಳಲು ನಿರಾಕರಿಸಿದ ಸರ್ಕಾರಿ ಮೂಲಗಳು ಈ ಬಗ್ಗೆ ರಾಯಿಟರ್ಸ್ಗೆ ಮಾಹಿತಿ ನೀಡಿದೆ ಎಂದು ವರದಿ ಉಲ್ಲೇಖಿಸಿದೆ. ಬ್ಯಾಂಕ್ ತನ್ನ ಹಣಕಾಸು ವ್ಯವಹಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಿಯಲ್ ಎಸ್ಟೇಟ್ನಂತಹ ಪ್ರಮುಖವಲ್ಲದ ಆಸ್ತಿಗಳ ಮಾರಾಟದತ್ತ ಗಮನಹರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

100 ವರ್ಷದ ಇತಿಹಾಸ ಹೊಂದಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
100 ವರ್ಷಗಳಿಗಿಂತಲೂ ಹಳೆಯದಾದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 4,594 ಶಾಖೆಗಳ ಜಾಲವನ್ನು ಹೊಂದಿದೆ. ಶಾಖೆಗಳನ್ನು ಮುಚ್ಚುವ ಯೋಜನೆ ಈ ಹಿಂದೆ ನಡೆದಿಲ್ಲ. ಆದರೆ ಹಲವಾರು ಬ್ಯಾಂಕುಗಳನ್ನು ಸರ್ಕಾರ ಇತ್ತೀಚೆಗೆ ಕೆಲವು ವರ್ಷಗಳಿಂದ ವಿಲೀನ ಮಾಡುತ್ತಾ ಬಂದಿದೆ. ಹಾಗೆಯೇ ಬ್ಯಾಂಕುಗಳ ಖಾಸಗೀಕರಣ ಮಾಡಿದೆ.
"2017 ರಿಂದ ಲಾಭದಲ್ಲಿನ ಕೊರತೆಯ ನಡುವೆ ಆರ್ಬಿಐನ ಪಿಸಿಎಯಿಂದ ಹೊರಬರಲು ಬ್ಯಾಂಕ್ ಹೆಣಗಾಡುತ್ತಿದೆ. ಮಾನವಶಕ್ತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಹೆಣಗಾಡುತ್ತಿದೆ," ಎಂದು ರಾಯಿಟರ್ಸ್ ಮೇ 4 ರಂದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಚೇರಿಯಿಂದ ಇತರ ಶಾಖೆಗಳು ಮತ್ತು ಇಲಾಖೆಗಳಿಗೆ ಕಳುಹಿಸಲಾದ ದಾಖಲೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
ಡಿಸೆಂಬರ್ ತ್ರೈಮಾಸಿಕದಲ್ಲಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2.82 ಶತಕೋಟಿ ಲಾಭವನ್ನು ಗಳಿಸಿದೆ. ಆದರೆ ಇದಕ್ಕೂ ಮುಂಚಿನ ಇದೇ ತ್ರೈಮಾಸಿಕದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 1.66 ಶತಕೋಟಿ ರೂಪಾಯಿಗಳ ಲಾಭವನ್ನು ಪಡೆದಿದೆ. ಬ್ಯಾಂಕ್ ಅನ್ನು ಜೂನ್ 2017 ರಲ್ಲಿ ಪಿಸಿಎ ಚೌಕಟ್ಟಿನ ಅಡಿಗೆ ತರಲಾಗಿದೆ. ಆ ತ್ರೈಮಾಸಿಕದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 7.50 ಶತಕೋಟಿ ರೂಪಾಯಿಗಳ ನಷ್ಟವನ್ನು ದಾಖಲಿಸಿತ್ತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications