ನವದೆಹಲಿ, ಜೂನ್ 24: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ವ್ಯಾಪ್ತಿಗೆ ಸಹಕಾರಿ ಬ್ಯಾಂಕುಗಳನ್ನು ತರುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬುಧವಾರ ಸುಗ್ರಿವಾಜ್ಞೆ ಮೂಲಕ ಒಪ್ಪಿಗೆ ನೀಡಿದೆ.
ಈ ವರ್ಷದ ಆರಂಭದಲ್ಲಿ ಫೆಬ್ರವರಿಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಹಕಾರಿ ಬ್ಯಾಂಕುಗಳನ್ನು ಆರ್ಬಿಐ ಮೇಲ್ವಿಚಾರಣೆಗೆ ಒಳಪಡಿಸುವ ಸರ್ಕಾರದ ಉದ್ದೇಶವನ್ನು ಘೋಷಿಸಿದ್ದರು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು ಮಾಡಲಾಗುವುದು ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಈ ಬ್ಯಾಂಕುಗಳನ್ನು ಆರ್ಬಿಐ ನಿಗದಿತ ಬ್ಯಾಂಕುಗಳ ಮಾದರಿಯಲ್ಲಿಯೇ ಮೇಲ್ವಿಚಾರಣೆ ಮಾಡುತ್ತದೆ. ಠೇವಣಿದಾರರಿಗೆ ರಕ್ಷಣೆ ನೀಡುತ್ತದೆ ಮತ್ತು ದುರುಪಯೋಗಕ್ಕೆ ಜಾಗವನ್ನು ಕಡಿಮೆ ಮಾಡುತ್ತದೆ ಎನ್ನಲಾಗಿದೆ.
1,540 ಸಹಕಾರಿ ಬ್ಯಾಂಕು
ಈ ಮೂಲಕ ಎಲ್ಲಾ ನಗರ ಸಹಕಾರಿ ಮತ್ತು ಮಲ್ಟಿಸ್ಟೇಟ್ ಸಹಕಾರಿ ಬ್ಯಾಂಕುಗಳನ್ನು ಭಾರತದ ರಿಸರ್ವ್ ಬ್ಯಾಂಕ್ ಮೇಲ್ವಿಚಾರಣೆಯಲ್ಲಿ ತರಲಾಗುತ್ತಿದೆ. ದೇಶಾದ್ಯಂತ 1,540 ಸಹಕಾರಿ ಬ್ಯಾಂಕುಗಳ 8 ಕೋಟಿಗೂ ಹೆಚ್ಚು ಖಾತೆದಾರರಿಂದ 5 ಲಕ್ಷ ಕೋಟಿ ರೂ ಇನ್ಮುಂದೆ ಆರ್ಬಿಐ ವ್ಯಾಪ್ತಿಗೆ ಬರುತ್ತದೆ. ಈ ಕ್ರಮವು ಠೇವಣಿದಾರರಿಗೆ ಈ ಬ್ಯಾಂಕುಗಳಲ್ಲಿ ತಮ್ಮ ಉಳಿತಾಯ ಸುರಕ್ಷಿತವಾಗಿದೆ ಎಂಬ ಭರವಸೆ ನೀಡುತ್ತದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಸಿಇಒಗಳ ನೇಮಕಕ್ಕೆ ಆರ್ಬಿಐನಿಂದ ಪೂರ್ವಾನುಮತಿ
ಹೊಸ ಕಾನೂನಿನ ಪ್ರಕಾರ ಇನ್ಮುಂದೆ ಸಹಕಾರಿ ಬ್ಯಾಂಕುಗಳಲ್ಲಿ ಸಿಇಒಗಳ ನೇಮಕಕ್ಕೆ ಬ್ಯಾಂಕಿಂಗ್ ನಿಯಂತ್ರಕ ಪ್ರಾಧಿಕಾರ ಹಾಗೂ ಆರ್ಬಿಐನಿಂದ ಪೂರ್ವಾನುಮತಿ ಬೇಕಾಗುತ್ತದೆ ಎಂದು ಸುಗ್ರಿವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.
ಬ್ಯಾಂಕುಗಳ ಹೊಣೆಗಾರಿಕೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ
ಸಾರ್ವಜನಿಕ ಹಣವನ್ನು ಹೊಂದಿರುವ ಈ ಬ್ಯಾಂಕುಗಳ ಹೊಣೆಗಾರಿಕೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ. ದುರುಪಯೋಗ ಮತ್ತು ಭ್ರಷ್ಟಾಚಾರದ ಸುತ್ತಲಿನ ವಿವಾದಗಳಲ್ಲಿ ಹೆಚ್ಚಾಗಿ ಸಿಲುಕಿರುವ ಸಹಕಾರಿ ವಲಯದ ಬ್ಯಾಂಕುಗಳಿಗೆ ಕಾಯಕಲ್ಪ ನೀಡಲು ಆರ್ಬಿಐ ವ್ಯಾಪ್ತಿಗೆ ತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಹಣಕಾಸು ವ್ಯವಸ್ಥೆಯ ಸ್ಥಿರತೆ
ವ್ಯಾಪಕ ಭ್ರಷ್ಟಾಚಾರ, ಸಾಲಗಳ ದುರುಪಯೋಗ ಇತ್ಯಾದಿಗಳ ಮೂಲಕ ಬ್ಯಾಂಕುಗಳಲ್ಲಿ ವಂಚನೆ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ಹೇಳಿದೆ. ಆರ್ಬಿಐ ವ್ಯಾಪ್ತಿಗೆ ತರುತ್ತಿರುವುದರ ಪರಿಣಾಮವಾಗಿ ಠೇವಣಿಗಳ ನಂಬಿಕೆ ಮತ್ತು ದೇಶದ ಹಣಕಾಸು ವ್ಯವಸ್ಥೆಯ ಸ್ಥಿರತೆ ಕಂಡುಬರುತ್ತದೆ ಎನ್ನಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications