ನವದೆಹಲಿ, ಡಿಸೆಂಬರ್ 22: ಭಾರತದಲ್ಲಿ ಇಂಧನ ಮತ್ತು ರಸಗೊಬ್ಬರ ಬೆಲೆಗಳಿಂದಾಗಿ ಇಂದಿನ ದಿನಗಳಲ್ಲಿ ಹಣದುಬ್ಬರದ ಮೇಲೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಅನುದಾನಕ್ಕೆ ಪೂರಕ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಸಗಟು ಹಣದುಬ್ಬರವು 21 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದರು. ಈ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಲೋಕಸಭೆಗೆ ಹಿಂದಿರುಗಿಸಿತು, ಹೀಗಾಗಿ 2022-23ರ ಆರ್ಥಿಕ ಸಾಲಿನಲ್ಲಿ ಹೆಚ್ಚುವರಿ 3.25 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸರ್ಕಾರಕ್ಕೆ ಅಧಿಕಾರ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತು.
ದೇಶದಲ್ಲಿ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿದ ಚಿಲ್ಲರೆ ಹಣದುಬ್ಬರವು ಈ ವರ್ಷದ ಜನವರಿಯಿಂದ ರಿಸರ್ವ್ ಬ್ಯಾಂಕ್ನ ಮಟ್ಟದಲ್ಲಿ ಶೇಕಡಾ 6ಕ್ಕಿಂತ ಹೆಚ್ಚಾಗಿದ್ದು, ನವೆಂಬರ್ನಲ್ಲಿ ಶೇಕಡಾ 5.88ಕ್ಕೆ ಇಳಿದಿದೆ.

ಭಾರತೀಯ ಆರ್ಥಿಕತೆಗೆ ಬೆಂಬಲ:
ಪಿಎಲ್ಐನಂತಹ ಅನುಕೂಲಕರ ನೀತಿಗಳಿಂದಾಗಿ ಭಾರತದಲ್ಲಿ ಖಾಸಗಿ ಹೂಡಿಕೆಯ ಕ್ಯಾಪೆಕ್ಸ್ ನಡೆಯುತ್ತಿದೆ ಎಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೆಲವು ಉದಾಹರಣೆಗಳನ್ನು ಸಹ ಉಲ್ಲೇಖಿಸಿದ್ದಾರೆ. ಈ ಅನುದಾನಕ್ಕಾಗಿ ಪೂರಕ ಬೇಡಿಕೆಯು ಆಹಾರ ಭದ್ರತೆ, ರಸಗೊಬ್ಬರ ಅಗತ್ಯತೆಗಳು ಮತ್ತು ಭಾರತೀಯ ಆರ್ಥಿಕತೆಗೆ ಬೆಂಬಲವನ್ನು ಒದಗಿಸುವುದು ಎಂದು ಸಚಿವರು ಒತ್ತಿ ಹೇಳಿದರು.
ಲೋಕಸಭೆಯಲ್ಲಿ ಪೂರಕ ಬೇಡಿಕೆಗಳಿಗೆ ಅನುಮೋದನೆ:
ಈ ಅನುದಾನಕ್ಕಾಗಿ ಪೂರಕ ಬೇಡಿಕೆಗಳ ಮೂಲಕ ಹೆಚ್ಚುವರಿ ವೆಚ್ಚವನ್ನು ಪೂರೈಸಲು ತೆರಿಗೆ ಸಂಗ್ರಹದಲ್ಲಿ ಸರ್ಕಾರಕ್ಕೆ ಸಹಾಯವಾಗುತ್ತದೆ ಎಂದು ಅವರು ಹೇಳಿದರು. ಕಳೆದ 2022-23ರ ಆರ್ಥಿಕ ವರ್ಷದಲ್ಲಿ ಹೆಚ್ಚುವರಿ 3.25 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸರ್ಕಾರಕ್ಕೆ ಅಧಿಕಾರ ನೀಡುವ ಅನುದಾನಕ್ಕಾಗಿ ಪೂರಕ ಬೇಡಿಕೆಗಳನ್ನು ಲೋಕಸಭೆ ಅನುಮೋದಿಸಿತು.
ಅದೇ ರೀತಿ ಕಳೆದ ಮಾರ್ಚ್ 2022ರಲ್ಲಿ ಬ್ಯಾಂಕ್ಗಳ ಒಟ್ಟು ಎನ್ಪಿಎಗಳು 6 ವರ್ಷಗಳ ಕನಿಷ್ಠ 5.9 ಪಿಸಿಗೆ ಕುಸಿದಿದೆ ಎಂದು ಹಣಕಾಸು ಸಚಿವರು ಸದನಕ್ಕೆ ತಿಳಿಸಿದರು. ಕೋವಿಡ್ ಪರಿಣಾಮವನ್ನು ಎದುರಿಸಲು ಸರ್ಕಾರದ ಉದ್ದೇಶಿತ ವಿಧಾನವು ಆರ್ಥಿಕ ಹಿಂಜರಿತಕ್ಕೆ ಹೋಗದೆ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸಲು ಭಾರತಕ್ಕೆ ಸಹಾಯ ಮಾಡಿದೆ ಎಂದು ಅವರು ಹೇಳಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications