ದೇಶದ ವಿವಿಧ ಮಾರುಕಟ್ಟೆಗಳಲ್ಲಿಈರುಳ್ಳಿ ರೀಟೇಲ್ ದರ ಕೆಜಿಗೆ 75ರಿಂದ 100 ರೂ. ದಾಟಿದೆ. ಕೇಂದ್ರ ಸರ್ಕಾರವು ಈರುಳ್ಳಿ ರಫ್ತು ನಿರ್ಬಂಧಿಸಿ, ಆಮದು ಹೆಚ್ಚಿದ್ದರಿಂದ ಚಿಲ್ಲರೆ ಹಾಗೂ ಹೋಲ್ಸೇಲ್ ಮಾರಾಟಗಾರರು ಈರುಳ್ಳಿ ಸಂಗ್ರಹ ಮಾಡುವುದರ ಮೇಲೆ ಮಿತಿ ಹೇರಿದೆ. ಆದರೆ ಈಗ ಬೆಲೆ ಏರಿಕೆ ತಡೆಯುವ ಉದ್ದೇಶದಿಂದ ಈರುಳ್ಳಿ ದಾಸ್ತಾನು ಮೇಲೆ ಸರ್ಕಾರ ಮಿತಿ ವಿಧಿಸಿದೆ.
ಅಗತ್ಯವಸ್ತುಗಳ ಕಾಯ್ದೆಗೆ ಒಳಪಡುವ ಪಟ್ಟಿಯಿಂದ ಈರುಳ್ಳಿಯನ್ನು ಇತ್ತೀಚೆಗೆ ಕೈ ಬಿಡಲಾಗಿತ್ತು. ಚಿಲ್ಲರೆ ಮಾರಾಟಗಾರರು 20 ಕ್ವಿಂಟಲ್ ಹಾಗೂ ಸಗಟು ಮಾರಾಟಗಾರರು 250 ಕ್ವಿಂಟಲ್ ಈರುಳ್ಳಿ ಸಂಗ್ರಹ ಮಿತಿ ನಿಗದಿಯಾಗಿದೆ. ಆದರೆ, ಈರುಳ್ಳಿ ದರ ಹೆಚ್ಚಳದಂತೆ ಪೂರೈಕೆಯಲ್ಲಿ ಉಂಟಾದ ವ್ಯತ್ಯಾಸದಿಂದ ಕೃತಕ ಅಭಾವ ಉಂಟಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈರುಳ್ಳಿ ದಾಸ್ತಾನು ಮೇಲೆ ನಿಯಂತ್ರಣಕ್ಕೆ ಮುಂದಾಗಿದೆ.
ಗ್ರಾಹಕ ವ್ಯವಹಾರ ಸಚಿವಾಲಯದ ಮಾಹಿತಿಯಂತೆ, ಮುಂಬೈನಲ್ಲಿ ರೀಟೇಲ್ ಈರುಳ್ಳಿ ದರ 86/ಕೆ.ಜಿ, ಚೆನ್ನೈಯಲ್ಲಿ 83/ಕೆ.ಜಿ, ಕೋಲ್ಕತಾ 70/ಕೆ.ಜಿ ಹಾಗೂ ದೆಹಲಿಯಲಿ 55/ಕೆ.ಜಿ ರು ನಷ್ಟಿದೆ. ಕಾದಿಟ್ಟ ದಾಸ್ತಾನಿಂದ ಸುಮಾರು 8,000 ಟನ್ ಈರುಳ್ಳಿ ಪಡೆಯಲು ಅಸ್ಸಾಂ, ಆಂಧ್ರಪ್ರದೇಶ, ಬಿಹಾರ, ಚಂದೀಗಢ, ಹರ್ಯಾಣ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳು ಮುಂದಾಗಿವೆ ಎಂದು ಸಚಿವಾಲಯದ ಕಾರ್ಯದರ್ಶಿ ಲೀನಾ ನಂದನ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಅತಿದೊಡ್ಡ ದಾಸ್ತಾನು ಕೇಂದ್ರದಿಂದ ಪ್ರತಿ ರಾಜ್ಯಕ್ಕೆ 25-26 ಪ್ರತಿ ಕೆಜಿಯಂತೆ ಪೂರೈಕೆ ಮಾಡಲಾಗುತ್ತಿದೆ. 2019-20 ರಾಬಿ ಬೆಳೆಯಲ್ಲಿ ಸುಮಾರು 1,00,000 ಟನ್ ದಾಸ್ತಾನು ಮಾಡಲಾಗಿದೆ. ಈ ಪೈಕಿ 30,000 ಕಾದಿಟ್ಟ ದಾಸ್ತಾನು ಇದೆ. ದೇಶದೆಲ್ಲೆಡೆ ಮಂಡಿಗಳಿಗೆ ಖಾರೀಫ್ ಬೆಳೆ ಬರಲು ಆರಂಭಿಸಿದ್ದು, ಇನ್ನು 37 ಲಕ್ಷ ಟನ್ ದಾಸ್ತಾನು ಗುರಿ ಇದೆ. ಹೀಗಾಗಿ, ಕ್ರಮೇಣ ದರ ತಗ್ಗುವ ನಿರೀಕ್ಷೆಯಿದೆ.(ಪಿಟಿಐ)
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications