ಕೇಂದ್ರ ಸರ್ಕಾರವು ಮೇ 13ರಂದು ಹೊರಡಿಸಲಾದ ಗೋಧಿ ರಫ್ತು ನಿಷೇಧದ ಆದೇಶವನ್ನು ಸಡಿಲಗೊಳಿಸಿದೆ. ಕಸ್ಟಮ್ಸ್ ಇಲಾಖೆಯ ವ್ಯವಸ್ಥೆಗಳಲ್ಲಿ ನೋಂದಾಯಿಸಲಾದ ಮತ್ತು ಮೇ 13 ರ ಮೊದಲು ಪರೀಕ್ಷೆಗೆ ಹಸ್ತಾಂತರಿಸಲಾದ ರಫ್ತು ಸರಕುಗಳನ್ನು ಅನುಮತಿಸಲು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಮೇ 17 ರಂದು ತಿಳಿಸಿದೆ.
ಈಜಿಪ್ಟ್ ಸರ್ಕಾರವು ಅನುಮತಿ ನೀಡುವಂತೆ ಮಾಡಿದ ಮನವಿಯ ನಂತರ ಈಜಿಪ್ಟ್ಗೆ ಹೋಗುವ ಗೋಧಿ ರವಾನೆಗೆ ಸರ್ಕಾರವು ಅನುಮತಿ ನೀಡಿತು. ಇದು ಈಗಾಗಲೇ ಕಾಂಡ್ಲಾ ಬಂದರಿನಲ್ಲಿ ರವಾನೆಗೆ ಸಿದ್ದವಾಗುತ್ತಿದೆ. 61,500 ಮೆಟ್ರಿಕ್ ಟನ್ ಗೋಧಿ ರವಾನೆಯ ಬಹುಭಾಗವನ್ನು ಈಗಾಗಲೇ ಈಜಿಪ್ಟ್ಗೆ ಸಾಗಿಸಲು ಸಿದ್ಧ ಮಾಡಲಾಗಿದೆ.
ಸರ್ಕಾರವು ಈಗ ರಫ್ತುದಾರರಿಗೆ ಬಾಕಿ 17,160 ಮೆಟ್ರಿಕ್ ಟನ್ಗಳನ್ನು ಸಾಗಾಟ ಮಾಡಲು ಅನುಮತಿ ನೀಡಿದೆ. ಆದ್ದರಿಂದ ಸಂಪೂರ್ಣ ರವಾನೆಯು ಕಾಂಡ್ಲಾದಿಂದ ಈಜಿಪ್ಟ್ಗೆ ಆಗಲಿದೆ. ಈ ಎಲ್ಲಾ ಬೆಳವಣಿಗೆಯ ನಂತರ ಈಗ ಕೇಂದ್ರ ಸರ್ಕಾರವು ಗೋಧಿ ರಫ್ತಿನ ಮೇಲಿನ ನಿರ್ಬಂಧವನ್ನು ಕೊಂಚ ಸಡಿಲಿಕೆ ಮಾಡಿದೆ.

ಕಳೆದ ವಾರದ ನಿಷೇಧದ ಆದೇಶದ ಹಿಂದಿನ ಉದ್ದೇಶವನ್ನು ಪುನರುಚ್ಚರಿಸಿದ ಸಚಿವಾಲಯವು, ಆಹಾರದ ಕೊರತೆಯನ್ನು ಎದುರಿಸುತ್ತಿರುವ ಇತರ ದೇಶಗಳಿಗೆ ಸಹಾಯ ಮಾಡುವುದರಿಂದ ಪೂರೈಕೆದಾರರಾಗಿ ಭಾರತದ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲಿದೆ. ಹಾಗೆಯೇ ಭಾರತದ ಆಹಾರ ಭದ್ರತೆಯನ್ನು ಕೂಡಾ ಖಚಿತಪಡಿಸಲಾಗುತ್ತದೆ. ಹಣದುಬ್ಬರ ನಿಯಂತ್ರಣ ಮಾಡಲಾಗುತ್ತದೆ ಎಂದು ಸರ್ಕಾರವು ಭರವಸೆ ನೀಡಿದೆ. ಗೋಧಿ ಸರಬರಾಜು ಸಂಗ್ರಹಣೆಯನ್ನು ತಡೆಗಟ್ಟಲು ಗೋಧಿ ಮಾರುಕಟ್ಟೆಗೆ ಸ್ಪಷ್ಟ ನಿರ್ದೇಶನವನ್ನು ನೀಡುವ ಗುರಿಯನ್ನು ಈ ಆದೇಶವು ಹೊಂದಿದೆ ಎಂದು ಸಚಿವಾಲಯ ಸೇರಿಸಿದೆ.
bದೇಶದ ಒಟ್ಟಾರೆ ಆಹಾರ ಭದ್ರತೆಯನ್ನು ನಿರ್ವಹಿಸಲು ಸರ್ಕಾರವು ಗೋಧಿ ರಫ್ತನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿತ್ತು. ದೇಶದಲ್ಲಿ ಆಹಾರ ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿ ಸರ್ಕಾರವು "ನಿಷೇಧಿತ" ವರ್ಗದ ಅಡಿಯಲ್ಲಿ ಗೋಧಿ ರಫ್ತನ್ನು ತಂದಿತ್ತು.
ಮೇ ಅಥವಾ ಅದಕ್ಕೂ ಮೊದಲು ಐಎಲ್ಒಸಿ ಅಥವಾ ರಫ್ತಿನ ಒಪ್ಪಂದ ನಡೆದಿದ್ದರೆ ಮಾತ್ರ ಮೇ 13ರ ಒಳಗೆ ರಫ್ತಿಗೆ ಅವಕಾಶ ನೀಡಲಾಗುವುದು. ಇಲ್ಲವಾದರೆ ಗೋಧಿ ರಫ್ತಿಗೆ ಅವಕಾಶವಿಲ್ಲ ಎಂದು ಅಧಿಸೂಚನೆಯಲ್ಲಿ ಉಲ್ಲೇಖ ಮಾಡಲಾಗಿತ್ತು. ಈಗ ಕಸ್ಟಮ್ಸ್ ಇಲಾಖೆಯ ವ್ಯವಸ್ಥೆಗಳಲ್ಲಿ ನೋಂದಾಯಿಸಲಾದ ಮತ್ತು ಮೇ 13 ರ ಮೊದಲು ಪರೀಕ್ಷೆಗೆ ಹಸ್ತಾಂತರಿಸಲಾದ ರಫ್ತು ಸರಕುಗಳನ್ನು ಅನುಮತಿಸಲು ಸರ್ಕಾರ ಆದೇಶಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications