ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಿನಲ್ಲಿದ್ದಾರೆ. ಇತ್ತ ಇದೇ ಸಮಯದಲ್ಲಿ ಅವರ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರ ಕೂಡ ರಿಲೀಸ್ ಹಂತದಲ್ಲಿದೆ. ಈ ಚಿತ್ರವು ನಾಡಿದ್ದು (ಡಿಸೆಂಬರ್ 11ರಂದು) ದರ್ಶನ್ ಅವರ ಅನುಪಸ್ಥಿತಿಯಲ್ಲೇ ರಿಲೀಸ್ ಆಗ್ತಿದೆ. ರಿಲೀಸ್ಗೂ ಮುನ್ನವೇ ಚಿತ್ರದ ಹವಾ ಜೋರಾಗಿದೆ. ಮೊದಲ ಹಂತದಲ್ಲಿ ಕರ್ನಾಟಕದಲ್ಲೇ ಬುಕಿಂಗ್ ತೆರೆಯಲಾಗಿದೆ. ಬುಕ್ಮೈಶೋಯಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಸುಮಾರು 250 ಪ್ರದರ್ಶನಗಳು ಕಾಣಿಸಿಕೊಂಡಿವೆ. ಈ ಪ್ರದರ್ಶನಗಳಲ್ಲಿ ಹೆಚ್ಚಿನವು ಸಿಂಗಲ್ ಸ್ಕ್ರೀನ್ಗಳಾಗಿದ್ದು, ಮಲ್ಟಿಪ್ಲೆಕ್ಸ್ಗಳಲ್ಲಿ ಕೂಡ ಜೋರಾಗಿದೆ ಹವಾ.

ಇನ್ನು ಚಿತ್ರಕ್ಕೆ ಇರುವ ಹುಮ್ಮಸ್ಸಿನಿಂದ ಬೆಳಗಿನ ವಿಶೇಷ ಪ್ರದರ್ಶನಗಳ ಟಿಕೆಟ್ ಬೆಲೆಗಳು ಸಾಕಷ್ಟು ಹೆಚ್ಚಾಗಿವೆ. ಹಲವು ಸಿಂಗಲ್ ಸ್ಕ್ರೀನ್ಗಳು ಬೆಳಗಿನ ಶೋಗೆ 400 ರಿಂದ 600 ರೂ. ವರೆಗೆ ದರ ನಿಗದಿಪಡಿಸಿದ್ದರೆ, ಸ್ವಾಗತ್ ಶಂಕರನಾಗ್ ಚಿತ್ರಮಂದಿರದಲ್ಲಿ ಟಿಕೆಟ್ ಬೆಲೆ 900 ರೂ. ತಲುಪಿದೆ. ಸಾಮಾನ್ಯ ಪ್ರದರ್ಶನಗಳ ದರ ಮಾತ್ರ 200-250 ರೂ. ಮದ್ಯದಲ್ಲಿದೆ. ಅಭಿಮಾನಿಗಳ ಉದ್ವೇಗ ನೋಡಿದರೆ, ಇದು ನಿಜಕ್ಕೂ ಚಿತ್ರಮಂದಿರಗಳಿಗೆ ಹಬ್ಬದ ಸಮಯ," ಎಂದು ಬೆಂಗಳೂರಿನ ಪ್ರಮುಖ ಸಿಂಗಲ್ ಸ್ಕ್ರೀನ್ ವ್ಯವಸ್ಥಾಪಕ ರಾಮಮೂರ್ತಿ ತಿಳಿಸಿದ್ದಾರೆ. ಹಲವು ಚಿತ್ರಮಂದಿರಗಳು ದರ್ಶನ್ ಅವರ ದೊಡ್ಡ ಕಟ್ಔಟ್ಗಳಿಂದ ಅಲಂಕೃತಗೊಂಡಿವೆ.
ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಾರು ನಗರಗಳಲ್ಲಿ ಕೂಡ ಆನ್ಲೈನ್ ಬುಕಿಂಗ್ ಆರಂಭವಾಗಿದೆ. ವ್ಯಾಪಾರ ವಲಯದ ಪ್ರಕಾರ, ಈ ಚಿತ್ರ ಹಲವು ಹೊಸ ದಾಖಲೆಗಳನ್ನು ಬರೆಯುವ ಸಾಧ್ಯತೆ ಇದೆ. "ಈ ವಾರ ಹೆಚ್ಚಿನ ಸ್ಪರ್ಧೆ ಇಲ್ಲದ ಕಾರಣ, 'ದಿ ಡೆವಿಲ್' ರಾಜ್ಯದಾದ್ಯಂತ ಬಾಕ್ಸ್ಆಫೀಸ್ನಲ್ಲಿ ಬಲವಾದ ಆರಂಭ ಪಡೆಯುವುದು ಖಚಿತ," ಎಂದು ವ್ಯಾಪಾರ ವಿಶ್ಲೇಷಕರು ತಿಳಿಸಿದ್ದಾರೆ.
ರೇಣುಕಾ ಸ್ವಾಮಿ ಪ್ರಕರಣದ ಹಿನ್ನೆಲೆಯಾಗಿ ದರ್ಶನ್ ಜೈಲಿನಲ್ಲಿರುವ ಸಮಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿರುವುದರಿಂದ, ಸಿನಿಮಾದ ಪ್ರಚಾರಕ್ಕೆ ಅವರು ಹಾಜರಾಗಿಲ್ಲ. ಆದರೂ ಅವರ ಅಭಿಮಾನಿಗಳ ಕ್ರೇಜ್ ಯಾವುದೇ ರೀತಿಯ ಕಡಿಮೆಯಾಗಿಲ್ಲ. "ದರ್ಶನ್ ಪ್ರಚಾರಕ್ಕೆ ಬರದಿದ್ದರೂ, ಈ ಚಿತ್ರ ದೊಡ್ಡ ಯಶಸ್ಸು ಪಡೆಯಲಿದೆ ಎಂದು ವಿಶ್ವಾಸವಿದೆ," ಎಂದು ಬಾಲಾಜಿ ಥಿಯೇಟರ್ನೊಬ್ಬ ಅಭಿಮಾನಿ ತಿಳಿಸಿದ್ದಾರೆ.
ಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ರಚನಾ ರೈ, ಮಹೇಶ್ ಮಂಜ್ರೇಕರ್, ಶರ್ಮಿಳಾ ಮಾಂಡ್ರೆ, ಅಚ್ಯುತ್ ಕುಮಾರ್, ರೋಜರ್ ನಾರಾಯಣ್, ಶೋಭರಾಜ್ ಸೇರಿದಂತೆ ಹಲವಾರು ಕಲಾವಿದರು ನಟಿಸಿದ್ದಾರೆ. ಸಂಗೀತ ಬಿ. ಅಜನೀಶ್ ಲೋಕನಾಥ್ ಅವರದ್ದು, ಛಾಯಾಗ್ರಹಣ ಸುಧಾಕರ್ ಎಸ್. ರಾಜ್ ಅವರದ್ದು.
ಒಟ್ಟಾರೆ ನೋಡಿದರೆ, 'ದಿ ಡೆವಿಲ್' ಇದೀಗ ಕನ್ನಡ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲೊಂದು. ಮುಂಗಡ ಬುಕಿಂಗ್ನಷ್ಟೇ ನೋಡಿದರೂ, ಚಿತ್ರದ ಸುತ್ತಲಿನ ಉತ್ಸಾಹ ಎಷ್ಟು ದೊಡ್ಡದಿದೆ ಎಂಬುದು ಸ್ಪಷ್ಟವಾಗುತ್ತದೆ.
(ಹಕ್ಕುತ್ಯಾಗ: ವ್ಯಕ್ತಿಗತ ವಿಶ್ಲೇಷಕರ ಅಥವಾ ಘಟಕಗಳ ಅಭಿಪ್ರಾಯಗಳು ಮತ್ತು ಶಿಫಾರಸುಗಳು ಮಾತ್ರ ಇಲ್ಲಿ ಸೂಚಿಸಲಾಗಿದೆ ಮತ್ತು ಅವು Goodreturns.in ಅಥವಾ Greynium Information Technologies Private Limited (ಒಟ್ಟಿಗೆ "ನಾವು" ಎಂದು ಉಲ್ಲೇಖಿಸಲಾಗಿದೆ) ಅವರ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಯಾವುದೇ ವಿಷಯದ ನಿಖರತೆ, ಪೂರ್ಣತೆ ಅಥವಾ ನಂಬಿಕಾರ್ಹತೆಯನ್ನು ನಾವು ಖಚಿತಪಡಿಸುವುದಿಲ್ಲ, ಸಮರ್ಥಿಸುತ್ತಿಲ್ಲ ಅಥವಾ ಹೊಣೆಗಾರರಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ_SECURITIES_ ಖರೀದಿ ಅಥವಾ ಮಾರಾಟವನ್ನು ಪ್ರೇರೇಪಿಸುವುದಿಲ್ಲ. ಎಲ್ಲಾ ಮಾಹಿತಿಯು ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರ ನೀಡಲಾಗಿದ್ದು, ಯಾವುದೇ ಹೂಡಿಕೆ ನಿರ್ಧಾರಗಳನ್ನು ಕೈಗೊಳ್ಳುವ ಮೊದಲು ಲೈಸೆನ್ಸ್ ಪಡೆದ ಹಣಕಾಸು ಸಲಹೆಗಾರರಿಂದ ಸ್ವತಃ ಪರಿಶೀಲಿಸುವುದು ಅಗತ್ಯ.)
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications