ಈಗ ಆಧಾರ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ಸಹ ನೀವು ಪರಿಶೀಲಿಸಬಹುದು. ಆಧಾರ್ ಸಂಖ್ಯೆಯ ಬಳಕೆ ಕುರಿತು ಇಲ್ಲಿ ತಿಳಿಯಿರಿ.
ಬೆಂಗಳೂರು, ಫೆಬ್ರುವರಿ 05: ದೇಶದ ಎಲ್ಲ ಕ್ಷೇತ್ರಗಳಲ್ಲಿ ಡಿಜಿಟಲ್ ವ್ಯವಸ್ಥೆ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಆಧಾರ್ ಕಾರ್ಡ್ ಎಲ್ಲಿರಿಗೂ ಅತ್ಯಗತ್ಯ ಗುರುತಿನ ದಾಖಲೆ ಆಗಿದೆ. ಈಗ ಆಧಾರ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ಸಹ ನೀವು ಪರಿಶೀಲಿಸಬಹುದು.
ಅಚ್ಚರಿ ಎನಿಸಿದರೂ ಇದು ಸತ್ಯ. ಬ್ಯಾಂಕಿಂಗ್ ಮತ್ತು ಸರ್ಕಾರಿ ಕಾರ್ಯಕ್ರಮಗಳಿಗೆ ಪ್ರವೇಶ ಸೇರಿದಂತೆ ಎಲ್ಲಾ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ಆಧಾರ್ ಕಾರ್ಡ್ ಸಂಖ್ಯೆಯನ್ನು ಎಲ್ಲೆಲ್ಲಿ ಕಾನೂನುಬದ್ಧವಾಗಿ ಕಡ್ಡಾಯಗೊಳಿಸಲಾಗಿದೆಯೋ ಅಲ್ಲಿ ನಿರಾತಂಕವಾಗಿ ಬಳಬಹುದು. ಆಧಾರ್ ಜೊತೆ ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆಗಳು ಮತ್ತು ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲಾಗಿದೆ. ಇದು ಬ್ಯಾಂಕ್ ಖಾತೆಯಲ್ಲಿನ ಹಣ ತಿಳಿಯಲು ಸಹಾಯ ಮಾಡುತ್ತದೆ.
ಅಷ್ಟೇ ಅಲ್ಲದೇ ವಾಹನಗಳು, ಎಲ್ಐಸಿ ಸೇರಿದಂತೆ ಮುಂತಾದ ವಿಮಾ ಯೋಜನೆ, ಪ್ರತಿ ಬ್ಯಾಂಕ್ ಖಾತೆಗಳಗೂ ಸಂಪರ್ಕ ಮಾಡಲಾಗಿದೆ. ಇದರಿಂದ ಆಧಾರ್ ಸಂಖ್ಯೆ ನಮೂದಿಸಿದರೆ ಆ ವ್ಯಕ್ತಿಯ ಹೆಸರು, ಹುಟ್ಟಿದ ದಿನಾಂಕ, ಲಿಂಗ, ವಿಳಾಸ ಹಾಗೂ ಫೋಟೊ ಸಹ ಕಾಣಿಸುತ್ತದೆ.

ನೀವು ಆಧಾರ್ ಸಂಖ್ಯೆ ಒಂದದ್ದರೆ ಸಾಕು, ಹತ್ತಿರ ಎಟಿಎಂ, ಬ್ಯಾಂಕ್ ಶಾಖೆಗೆ ಹೋಗದೇ ಬ್ಯಾಂಕ್ ಬ್ಯಾಲೇನ್ಸ ತಿಳಿಯಬಹುದು. ನಿಮ್ಮ ನಿಮ್ಮ ಮೊಬೈಲ್ನಲ್ಲಿ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ *99*99*1# ಅನ್ನು ಡಯಲ್ ಮಾಡಿ ನಂತರ 12 ಅಂಕಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಿ ಖಾತೆಯಲ್ಲಿನ ಹಣದ ಮಾಹಿತಿ ತಿಳಿದುಕೊಳ್ಳಬಹುದು. ಇಲ್ಲಿ ಒಂದೇ ನಂಬರ್ ಬ್ಯಾಂಕ್ ಖಾತೆಗೂ ಹಾಗೂ ಆಧಾರ್ ಕಾರ್ಡ್ಗು ಲಿಂಕ್ ಆಗಿರಬೇಕು.
ಬ್ಯಾಂಕ್ ಖಾತೆಯಲ್ಲಿನ ಬಾಕಿ ಹಣ ಪರಿಶೀಲಿಸುವುದರ ಜೊತೆಗೆ, ಆಧಾರ್ ಕಾರ್ಡ್ನ ಬಳಕೆದಾರರು ಹಣ ಸಹ ವರ್ಗಾಯಿಸಲು ಅವಕಾಶ ಇದೆ. ಜೊತೆಗೆ ಪ್ಯಾನ್ ಕಾರ್ಡ್ ಪಡೆಯಲುಬಹುದು.

ಮೊದಲು ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಪರದೆಯ ಮೇಲೆ ಬ್ಯಾಂಕ್ ಬ್ಯಾಲೆನ್ಸ್ನೊಂದಿಗೆ UIDAI ನಿಂದ ನೀವು ಫ್ಲಾಶ್ SMS ಅನ್ನು ಸ್ವೀಕರಿಸುತ್ತೀರಿ. ಬಳಿಕ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ), ನಿಮ್ಮ ಫೋನ್ ಸಂಖ್ಯೆಯನ್ನು ನಿಮ್ಮ ಆಧಾರ್ಗೆ ಲಿಂಕ್ ಮಾಡುವುದು, ಮಾಹಿತಿ ನವೀಕರಣ, ಮನೆ ಬಾಗಿಲಿಗೆ ಸೇವೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ಕೇಂದ್ರ ಮೂಲಗಳು ತಿಳಿಸಿವೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



Click it and Unblock the Notifications