ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ (ಎಸ್.ಎ. ಬೋಬ್ಡೆ) ಅವರ ಮೋಟಾರ್ ಸೈಕಲ್ ಗಳ ಪ್ರೀತಿಯನ್ನು ಅವರೆಂದೂ ಮುಚ್ಚಿಟ್ಟಿಲ್ಲ. ನಾಗ್ಪುರ್ ಹೆದ್ದಾರಿಯಲ್ಲಿ ಬೋಬ್ಡೆ ಅವರು ಹಾರ್ಲೆ ಡೇವಿಡ್ಸನ್ ಬೈಕ್ ಓಡಿಸುತ್ತಿದ್ದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ದೊಡ್ಡ ಮಟ್ಟದಲ್ಲಿ ಹರಿದಾಡಿವೆ.
ನಾಗ್ಪುರದಲ್ಲಿ ಇರುವ ರಾಜ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಿಜೆಐ (ಭಾರತದ ಮುಖ್ಯ ನ್ಯಾಯಮೂರ್ತಿ) ಎಸ್.ಎ. ಬೋಬ್ಡೆ ಹಾರ್ಲೆ ಡೇವಿಡ್ಸನ್ ಬೈಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾರ್ಲೆ ಡೇವಿಡ್ಸನ್ "ಲಿಮಿಟೆಡ್ ಎಡಿಷನ್ CVO 2020"ಯಲ್ಲಿ ಬೋಬ್ಡೆ ಕೂತಿರುವ ಫೋಟೋ ಟ್ವಿಟ್ಟರ್ ನಲ್ಲಿ ಹಂಚಿಕೆ ಆಗಿದ್ದು, ಆ ನಂತರ ವೈರಲ್ ಆಗಿದೆ.
ಹಾರ್ಲೆ ಡೇವಿಡ್ಸನ್ ಲಿಮಿಟೆಡ್ ಎಡಿಷನ್ ಬೈಕ್
ಹಾರ್ಲೆ ಡೇವಿಡ್ಸನ್ "ಲಿಮಿಟೆಡ್ ಎಡಿಷನ್ CVO 2020" ಬೈಕ್ ಬೆಲೆ 51 ಲಕ್ಷ ರುಪಾಯಿ. 2000 ಸಿ.ಸಿ. ಸಾಮರ್ಥ್ಯದ ಈ ಬೈಕ್ V- ಟ್ವಿನ್ ಎಂಜಿನ್. ತೂಕ 400 ಕೇಜಿಗೂ ಹೆಚ್ಚಿಗೆ ಇದೆ. 2019ರ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ನೇಮಕ ಆಗುವ ಮುನ್ನ ಅವರು ನೀಡಿದ್ದ ಸಂದರ್ಶನವೊಂದರಲ್ಲಿ, ರಾಯಲ್ ಎನ್ ಫೀಲ್ಡ್ ಕಂಪೆನಿಯ ಬುಲೆಟ್ ಬೈಕ್ ತಮ್ಮ ಬಳಿ ಇತ್ತು, ಅದನ್ನು ಬಳಸುತ್ತಿದ್ದುದಾಗಿ ಹೇಳಿಕೊಂಡಿದ್ದರು.
ರಾಯಲ್ ಎನ್ ಫೀಲ್ಡ್ ಬುಲೆಟ್ ಓಡಿಸುತ್ತಿದ್ದರು
"ನನಗೆ ಬೈಕ್ ಓಡಿಸುವುದು ಇಷ್ಟ. ನಾನು ಬುಲೆಟ್ ಬಳಸುತ್ತಿದ್ದೆ" ಎಂದು ಅವರು ಹೇಳಿದ್ದರು. ಅವರ ವಿಶೇಷ ಆಸಕ್ತಿಗಳೇನು ಮತ್ತು ಇಷ್ಟದ ಮೋಟಾರ್ ಸೈಕಲ್ ಯಾವುದು ಎಂದು ಕೇಳಿದ್ದ ಪ್ರಶ್ನೆಗೆ ಅವರು ಈ ರೀತಿಯ ಉತ್ತರ ನೀಡಿದ್ದರು. ಮುಖ್ಯನ್ಯಾಯಮೂರ್ತಿ ಬೋಬ್ಡೆ ಅವರು ಸದ್ಯಕ್ಕೆ ಮಹಾರಾಷ್ಟ್ರದಲ್ಲಿನ ತಮ್ಮ ತವರೂರಿನಲ್ಲಿ ಇದ್ದಾರೆ.
ಟೆಸ್ಟ್ ಡ್ರೈವ್ ಮಾಡುವ ವೇಳೆ ಬಿದ್ದು ಗಾಯ
ಕಳೆದ ವರ್ಷ ಹಾರ್ಲೆ ಡೇವಿಡ್ಸನ್ ಹೈ ಎಂಡ್ ಬೈಕ್ ಟೆಸ್ಟ್ ಡ್ರೈವ್ ಮಾಡುವಾಗ ಅಪಘಾತಕ್ಕೆ ಈಡಾಗಿದ್ದರು. ಬೈಕ್ ನಿಂದ ಬಿದ್ದು, ಗಾಯ ಮಾಡಿಕೊಂಡಿದ್ದರು. ಆ ಕಾರಣಕ್ಕೆ ಕೋರ್ಟ್ ಕಲಾಪಗಳಿಂದಲೂ ಕೆಲ ಸಮಯ ದೂರ ಇರಬೇಕಾಯಿತು. ಜತೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಚರ್ಚೆಗಳಿಂದಲೂ ದೂರ ಉಳಿಯಬೇಕಾಯಿತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications