ದೆಹಲಿ ಸಂಪುಟವು ಡೀಸೆಲ್ ಮೇಲಿನ ವ್ಯಾಲ್ಯೂ ಆಡೆಡ್ ಟ್ಯಾಕ್ಸ್ (VAT) ಅನ್ನು 30ರಿಂದ 16.75 ಪರ್ಸೆಂಟ್ ಗೆ ಇಳಿಸಲು ನಿರ್ಧಾರ ಮಾಡಿದೆ. ಇದರಿಂದ ಡೀಸೆಲ್ ಪ್ರತಿ ಲೀಟರ್ ಗೆ 8.36 ರುಪಾಯಿ ಇಳಿಕೆ ಆಗಲಿದೆ. 82 ರುಪಾಯಿ ಇರುವ ಲೀಟರ್ ಡೀಸೆಲ್ ಬೆಲೆ 73.64ಕ್ಕೆ ಇಳಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ತಿಳಿಸಿದ್ದಾರೆ.
ದೆಹಲಿ ಆರ್ಥಿಕತೆಯನ್ನು ಮುನ್ನಡೆಸುವಲ್ಲಿ ಡೀಸೆಲ್ ಬೆಲೆ ಇಳಿಕೆ ಪ್ರಮುಖ ಹೆಜ್ಜೆ ಎಂದಿದ್ದಾರೆ. ಇನ್ನು ಉದ್ಯೋಗ ಪೋರ್ಟಲ್ ನಲ್ಲಿ 7577 ಕಂಪೆನಿಗಳು ನೋಂದಣಿ ಆಗಿದ್ದು, 2,04,785 ಉದ್ಯೋಗಗಳ ಜಾಹೀರಾತು ನೀಡಲಾಗಿದೆ. ದೆಹಲಿ ಸರ್ಕಾರಿ ಉದ್ಯೋಗ ಪೋರ್ಟಲ್ ಆರಂಭಿಸಿದ ನಾಲ್ಕು ದಿನಗಳೊಳಗೆ 3,22,865 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ದೆಹಲಿಯ ವರ್ತಕರು, ಕೈಗಾರಿಕೋದ್ಯಮಿಗಳು, ಉದ್ಯಮಿಗಳು ಕೈ ಜೋಡಿಸಿ. ಆ ಮೂಲಕ ದೆಹಲಿ ಆರ್ಥಿಕತೆಯನ್ನು ಮರಳಿ ಹಳಿಗೆ ತರಲು ಸಹಕರಿಸಿ ಎಂದು ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ದೆಹಲಿ ಆರ್ಥಿಕ ಪುನಶ್ಚೇತನದ ಕಡೆ ಗಮನ
ದೆಹಲಿಯ ಎರಡು ಕೋಟಿ ಜನರು ಕೊರೊನಾವನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಆದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕು. ಒಂದು ವೇಳೆ ನಾವು ನಿರ್ಲಕ್ಷ್ಯ ತೋರಿದರೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತವೆ. ನಾವೀಗ ದೆಹಲಿ ಆರ್ಥಿಕತೆಯ ಪುನಶ್ಚೇತನದ ಕಡೆಗೆ ಗಮನ ನೀಡಬೇಕು. ಏಕೆಂದರೆ, ಕಾರ್ಖಾನೆ- ವ್ಯಾಪಾರ, ವ್ಯವಹಾರ ಮುಚ್ಚಿರುವುದರಿಂದ ಹಲವರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ಅವರು ಹೇಳಿದ್ದಾರೆ.
ದೆಹಲಿಯ ಜನ ದೊಡ್ಡ್ ಸವಾಲನ್ನು ಸ್ವೀಕರಿಸಿದ್ದಾರೆ. ಆದರೆ ಜತೆಗೆ ಆರ್ಥಿಕತೆ ಪುನಶ್ಚೇತನಕ್ಕೆ ದೊಡ್ಡ ಹೆಜ್ಜೆ ಇಡಬೇಕಾಗಿದೆ. ಈ ಆರ್ಥಿಕ ಸವಾಲನ್ನು ನಾವು ಸ್ವೀಕರಿಸಿ, ಗೆಲ್ಲುತ್ತೇವೆ. ಈ ದಿನ ನಡೆದ ಸಂಪುಟ ಸಭೆಯಲ್ಲಿ ಪ್ರಮುಖ ತೀರ್ಮಾನ ತೆಗೆದುಕೊಂಡಿದ್ದೇವೆ. ಆರ್ಥಿಕತೆ ಮುನ್ನಡೆಸಲು ಇದು ಮುಖ್ಯ ಹೆಜ್ಜೆ ಆಗುತ್ತದೆ ಎಂದು ನಂಬಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ಸಮಸ್ಯೆಗಳನ್ನು ಬಗೆಹರಿಸುವ ಭರವಸೆ
ಡೀಸೆಲ್ ಬೆಲೆ ಇಳಿಕೆಗಾಗಿ ಕೈಗಾರಿಕೋದ್ಯಮಿಗಳು, ವರ್ತಕರು, ಉದ್ಯಮಿಗಳು ಬೇಡಿಕೆ ಇಟ್ಟಿದ್ದರು. ಏಕೆಂದರೆ ಇದರಿಂದ ಜನರ ಬಜೆಟ್ ಮೇಲೆ ಪರಿಣಾಮ ಆಗುತ್ತಿತ್ತು. ಈಗ ಡೀಸೆಲ್ ಬೆಲೆ ಇಳಿಸಿರುವುದರಿಮ್ದ ದೆಹಲಿ ಆರ್ಥಿಕತೆ ಮೇಲೆ ಪರಿಣಾಮ ಆಗುತ್ತದೆ ಎಂದು ನಾನು ನಂಬುತ್ತೇನೆ ಎಂಬ ಮಾತನ್ನಾಡಿದ್ದಾರೆ.
ಮಳಿಗೆಗಳ ಮಾಲೀಕರು, ವರ್ತಕರು, ಕೈಗಾರಿಕೋದ್ಯಮಿಗಳು ತಮ್ಮ ಕಾರ್ಖಾನೆ ಹಾಗೂ ಅಂಗಡಿಗಳ ಬಾಗಿಲು ತೆರೆಯುವಂತೆ ಮನವಿ ಮಾಡಲು ಬಯಸುತ್ತೇನೆ. ಅಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ಮತ್ತೆ ಕೆಲಸ ಶುರು ಆಗಲಿ. ಮುಂಬರುವ ದಿನಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವು ಕೈಗಾರಿಕೋದ್ಯಮಿಗಳು ಮತ್ತು ವರ್ತಕರ ಜತೆ ಚರ್ಚೆ ನಡೆಸಲಿದ್ದೇನೆ. ಅವರ ಸಮಸ್ಯೆಗಳನ್ನು ಬಗೆಹರಿಸಲಿದ್ದೇನೆ ಎಂದು ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications