ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕೌನ್ಸಿಲ್ಗೆ ತೆರಿಗೆ ದರಗಳ ಬಗ್ಗೆ ಶಿಫಾರಸ್ಸು ಮಾಡುವ ರಾಜ್ಯ ಸಚಿವರ ಸಮಿತಿಯ ನೇತೃತ್ವವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಹಿಸಿಕೊಳ್ಳಲಿದ್ದಾರೆ. ಜಿಎಸ್ಟಿ ವ್ಯವಸ್ಥೆಯ ಸುಧಾರಣೆಗಳ ಕುರಿತಾಗಿ ಇರುವ ಸಚಿವರ ಸಮಿತಿಯನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮುನ್ನಡೆಸಲಿದ್ದಾರೆ ಎಂದು ಎರಡು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.
ತೆರಿಗೆ ದರಗಳ ಬಗ್ಗೆ ಸರಿಯಾದ ನಿರ್ಧಾರವನ್ನು ಕೈಗೊಳ್ಳಲು, ತೆರಿಗೆ ರಚನೆಯನ್ನು ಸರಳಗೊಳಿಸಲು, ಸರಕು ಮತ್ತು ಸೇವೆಗಳ ವರ್ಗೀಕರಣಕ್ಕೆ ಸಂಬಂಧಿಸಿದ ವಿವಾದಗಳ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳಲು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆದಾಯ ಸಂಗ್ರಹವನ್ನು ಹೆಚ್ಚಿಸಲು ಬೇಕಾದ ಅಗತ್ಯ ಸಲಹೆಗಳನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸಚಿವರ ಸಮಿತಿಯು ನೀಡಲಿದೆ.
ಇನ್ನು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸಚಿವರ ಸಮಿತಿಯು ತಕ್ಷಣಕ್ಕೆ ಜಾರಿಗೆ ತರಬಹುದಾದದ ಬದಲಾವಣೆಗಳ ಬಗ್ಗೆಯೂ ಸಲಹೆಯನ್ನು ನೀಡಲಿದೆ. ಹಾಗೆಯೇ ಮುಂಬರುವ ದಿನಗಳಲ್ಲಿ ಜಿಎಸ್ಟಿ ವಿಚಾರದಲ್ಲಿ ತರಬಹುದಾದ ಬದಲಾವಣೆಗಳ ಬಗ್ಗೆ ಒಂದು ಕಣ್ಣೋಟವನ್ನು ಸಲಹೆಯಾಗಿ ನೀಡಲಿದೆ. ಆದೇಶದ ಪ್ರಕಾರ ಈ ಸಮಿತಿಯು ತನ್ನ ವರದಿಯನ್ನು ನೀಡಲು ಎರಡು ತಿಂಗಳುಗಳ ಸಮಯಾವಕಾಶವನ್ನು ನೀಡಲಾಗಿದೆ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಈ ಸಮಿತಿಯಲ್ಲಿ ಬಿಹಾರ ಉಪಮುಖ್ಯಮಂತ್ರಿ ತಾರಕಿಶೋರ್ ಪ್ರಸಾದ್, ಕೇರಳ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ, ಪಶ್ಚಿಮ ಬಂಗಾಳ ಹಣಕಾಸು ಸಚಿವ ಅಮಿತ್ ಮಿತ್ರಾ, ಗೋವಾ ಸಂಚಾರ, ಪಂಚಾಯತ್ ರಾಜ್ ಹಾಗೂ ವಸತಿ ಸಚಿವ ಮೌವಿನ್ ಗೊಡಿನ್ಹೋ, ರಾಜಸ್ಥಾನ ನಗರ ಅಭಿವೃದ್ಧಿ ಹಾಗೂ ವಸತಿ ಸಚಿವ ಶಾಂತಿ ಕುಮಾರ್ ಧಾರಿವಾಲ ಹಾಗೂ ಉತ್ತರ ಪ್ರದೇಶ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಇರಲಿದ್ದಾರೆ ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ.
ಈ ತಿಂಗಳ ಆರಂಭದಲ್ಲಿ ಜಿಎಸ್ಟಿ ಕೌನ್ಸಿಲ್ನ 45 ನೇ ಸಭೆಯಲ್ಲಿ ನಿರ್ಧರಿಸಿದಂತೆ ಎರಡು ಸಮಿತಿಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಸಮಿತಿಯು "GST ಅಡಿಯಲ್ಲಿ ವಿನಾಯಿತಿ ಪಡೆದ ಸರಕು ಮತ್ತು ಸೇವೆಗಳ ಪೂರೈಕೆಯನ್ನು ಪರಿಶೀಲಿಸುತ್ತದೆ." ತೆರಿಗೆ ಆಧಾರವನ್ನು ವಿಸ್ತರಿಸಲು ಮತ್ತು ಇನ್ಪುಟ್ ತೆರಿಗೆ ಕ್ರೆಡಿಟ್ ಸರಪಳಿಯನ್ನು ಮುರಿಯುವುದನ್ನು ತೊಡೆದುಹಾಕಲು, ಆದೇಶವು ಉಲ್ಲೇಖ ಮಾಡಿದೆ.
ಅಜಿತ್ ಪವಾರ್ ನೇತೃತ್ವದ ಜಿಎಸ್ಟಿ ವ್ಯವಸ್ಥೆಯ ಸುಧಾರಣೆಗಳ ಕುರಿತ ಎರಡನೇ ಸಮಿತಿಯು ಒಟ್ಟು ಏಳು ಸದಸ್ಯರನ್ನು ಹೊಂದಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲ, ಆಂಧ್ರಪ್ರದೇಶದ ಹಣಕಾಸು ಮತ್ತು ಯೋಜನಾ ಸಚಿವ ಬುಗ್ಗನಾ ರಾಜೇಂದ್ರನಾಥ್, ಅಸ್ಸಾಂ ಹಣಕಾಸು ಸಚಿವ ಅಜಂತ ನಿಯೋಗ್, ಛತ್ತೀಸ್ಗಢದ ವಾಣಿಜ್ಯ ತೆರಿಗೆ ಸಚಿವ ಟಿ.ಎಸ್. ಸಿಂಗ್ ದೇವ್, ಒಡಿಶಾ ಹಣಕಾಸು ಮತ್ತು ಅಬಕಾರಿ ಸಚಿವ ನಿರಂಜನ್ ಪುರಿ ಮತ್ತು ತಮಿಳುನಾಡು ಹಣಕಾಸು ಮತ್ತು ಮಾನವ ಸಂಪನ್ಮೂಲ ನಿರ್ವಹಣೆ ಸಚಿವ ಪಳನಿವೇಲ್ ತ್ಯಾಗ ರಾಜನ್ ಅಜಿತ್ ಪವಾರ್ ನೇತೃತ್ವದ ಸಮಿತಿಯಲ್ಲಿ ಇರಲಿದ್ದಾರೆ ಎಂದು ಆದೇಶವು ತಿಳಿಸಿದೆ.
ಈ ಸಮಿತಿಯು ತೆರಿಗೆ ವಂಚನೆಯ ಸಾಧ್ಯತೆಯ ಬಗ್ಗೆ ಪತ್ತೆ ಹಚ್ಚಲಿದೆ, ತೆರಿಗೆ ಸೋರಿಕೆಯನ್ನು ನಿವಾರಿಸಲು ವ್ಯಾಪಾರ ಪ್ರಕ್ರಿಯೆಗಳು, ಐಟಿ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಸೂಚನೆ ನೀಡುತ್ತದೆ. ಇದು ಕೇಂದ್ರ ಮತ್ತು ರಾಜ್ಯ ತೆರಿಗೆ ಆಡಳಿತಗಳ ನಡುವೆ ಉತ್ತಮ ಸಮನ್ವಯದ ಮಾರ್ಗಗಳನ್ನು ಸೂಚಿಸುತ್ತದೆ. "ಐಟಿ ವ್ಯವಸ್ಥೆಗಳು ಸ್ಥಿರಗೊಂಡಿವೆ ಎಂದು ಕೌನ್ಸಿಲ್ ಒಪ್ಪಿಕೊಂಡಿದೆ. ಜಿಎಸ್ಟಿ ಐಟಿ ವ್ಯವಸ್ಥೆಯಲ್ಲಿ ಐಟಿ ಆಧಾರಿತ ತಪಾಸಣೆ ಮತ್ತು ಸಮತೋಲನವನ್ನು ಪರಿಚಯಿಸುವ ಅವಶ್ಯಕತೆಯಿದೆ," ಎಂದು ಆದೇಶದಲ್ಲಿ ತಿಳಿಸಲಾಗಿದೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications