ರಾಜ್ಯದಲ್ಲಿ ದಿನೇ ದಿನೇ ಚಳಿ (Cold) ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿಯಲ್ಲಿ ಜನ ಜೀವನ ಸಾಗಿಸುತ್ತಿದ್ದಾರೆ. ಅತ್ತ ಮಂಜಿನ ವಾತಾವರಣದಿಂದ ಚಾಲಕರು ಸುಸ್ತಾಗಿದ್ದಾರೆ. ಇನ್ನು ಚಳಿ ನಡುವೆಯೂ ಅಲ್ಲಲ್ಲಿ ಮಳೆ ಕೂಡಾ ಬೀಳುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಅತ್ತ ಚಳಿಯನ್ನೇ ತಡೆಯೋಕೆ ಆಗುತ್ತಿಲ್ಲ, ಈ ಮಧ್ಯೆ ಎರಡು ದಿನ ಮಳೆಯಾಗಲಿದೆ ಎಂಬ ಸೂಚನೆಯನ್ನೂ ಹವಾಮಾನ ಇಲಾಖೆ ಹೊರಡಿಸಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಈ ಲೇಖನದಲ್ಲಿದೆ ಓದಿ.
ಎಷ್ಟು ದಿನ ಮಳೆ?
ರಾಜ್ಯದ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಾತ್ರ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಜಿಲ್ಲೆಗಳಲ್ಲಿ ಒಣಹವೆ:
ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಇಲ್ಲೆಲ್ಲಾ ಮಳೆ:
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ ಎಂದು ಐಎಂಡಿ ಸೂಚನೆ ನೀಡಿದೆ. ಆದ್ದರಿಂದ ನಗರದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದ್ರೆ ತಕ್ಷಣ ಬರುವ ಸಾಧ್ಯತೆ ಇಲ್ಲ. ಆದ್ರೆ ಹವಾಮಾನ ಬದಲಾದರೆ, ವರುಣನ ಆಗಮನ ಪಕ್ಕಾ ಎಂದಿದ್ದಾರೆ ಹವಾಮಾನ ಇಲಾಖೆ.
ಕರಾವಳಿಯಲ್ಲಿ ಒಣ ಹವೆ:
ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಜಿಲ್ಲೆಗಳಲ್ಲೂ ಒಣ ಹವೆ ಮುಂದುವರೆಯುತ್ತದೆ. ಅಂದರೆ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು 33 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ಇನ್ನು ರಾತ್ರಿಯ ತಾಪಮಾನ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ ಎಂದು ಹೇಳಲಾಗಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿ, ಕಲಬುರ್ಗಿ ಜಿಲ್ಲೆಗಳಲ್ಲಿ ವಾತಾವರಣ ಸಾಮಾನ್ಯವಾಗಿದ್ದು, ರಾತ್ರಿ ವೇಳೆ ಹೆಚ್ಚು ತಂಪಾಗಿರುತ್ತದೆ ಎನ್ನಲಾಗಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಯಾವುದೇ ಮಳೆಯ ಸೂಚನೆ ನೀಡಲಾಗಿಲ್ಲ.
ಆದರೆ ಧಾರವಾಡ, ಬೀದರ್, ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 11.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಆದ್ದರಿಂದ ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಒಂದು ವೇಳೆ ಮಳೆಯೂ ಬರಬಹುದು. ಇನ್ನೆರಡು ದಿನ ಇದೇ ವಾತಾವರಣ ಮುಂದುವರೆಯಲಿದ್ದು, ತಾಪಮಾನವೂ ಸ್ವಲ್ಪ ಕಡಿಮೆ ಇರಲಿದೆ ಎಂದು ತಿಳಿಸಿದೆ.
ಜನರಿಗೆ ಸಲಹೆ:
ಚಳಿ ವಿಪರೀತವಾಗಿರುವುದರಿಂದ ಜನರೂ ಕೂಡಾ ಎಚ್ಚರಿಕೆಯಿಂದ ಇರಬೇಕು. ತಾಪಮಾನ ಇಳಿಕೆಯಾದಂತೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಅದಕ್ಕಾಗಿ ಆರೋಗ್ಯಕರ ಆಹಾರ ಸೇವನೆ, ಬಿಸಿ ನೀರು, ಬೆಚ್ಚಗಿನ ಬಟ್ಟೆ ಧರಿಸುವುದು, ಹೀಗೆ ಮುಂತಾದ ಮುನ್ನೆಚ್ಚರಿಕೆಗಳನ್ನು ವಹಿಸುವುದು ಮುಖ್ಯ.
More From GoodReturns

Karnataka Weather: ಕರ್ನಾಟಕದಲ್ಲಿ ಮಾರ್ಚ್ನಲ್ಲಿ ಹೆಚ್ಚಾಗಲಿದೆ ಬಿಸಿಲು! ಎಲ್ಲೆಲ್ಲಿ ಗೊತ್ತಾ?

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications