ಮೈಕೊರೆಯುವ ಚಳಿಯಲ್ಲಿ ರಾಜ್ಯದ ಜಿಲ್ಲೆಗಳು ಗಢ ಗಢ ಅಂತ ನಡುಗುತ್ತಿದೆ. ದಿನ ಹೋದಂತೆ ಚಳಿ ಕೂಡಾ ವಿಪರೀತವಾಗುತ್ತಿದೆ. ಇದೀಗ ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಚಳಿ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಹಾಗಿದ್ರೆ ಎಲ್ಲೆಲ್ಲಿ ಗರಿಷ್ಠ ತಾಪಮಾನ ಇರಲಿದೆ? ಎಲ್ಲೆಲ್ಲಿ ಶೀತಗಾಳಿ ಜೊತೆಗೆ ಚಳಿ ವಿಪರೀತವಾಗಲಿದೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ರಾಜ್ಯದಲ್ಲಿ ಚಳಿಯ ನಡುವೆ ಕೆಲವು ಪ್ರದೇಶಗಳಲ್ಲಿ ಮಳೆ ಕೂಡಾ ಆಗುತ್ತಿದೆ. ಅಲ್ಲದೇ ಹವಾಮಾನ ಇಲಾಖೆ ಕೂಡಾ ಮಳೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ ಸಾಧ್ಯತೆ
ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಲಘು ಮಳೆಯಾಗಬಹುದು ಜೊತೆಗೆ ಮಂಜು ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಇನ್ನು ತಾಪಮಾನ ನೋಡುವುದಾದ್ರೆ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರು ಬಿಟ್ಟು ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಶೀತಗಾಳಿ
ಇನ್ನು ಕಲಬುರಗಿ, ಬಾಗಲಕೋಟೆ, ಬೀದರ್, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಭಾಗಗಳಲ್ಲಿ ತಾಪಮಾನದ ಪ್ರಮಾಣ ಸಾಮಾನ್ಯವಾಗಿ ಹೋಲಿಸಿದ್ರೆ ಇಂದು ಕಡಿಮೆ ಇರಲಿದೆ ಎಂದು ಹೇಳಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 33 ರಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಇನ್ನು ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ್ಲಿ ಒಣ ಹವೆ ಮುಂದುವರೆಯಲಿದೆ. ಆದರೆ ರಾತ್ರಿಯ ವೇಳೆ ಚಳಿ ಹೆಚ್ಚಾಗಲಿದೆ.
ಈ ಜಿಲ್ಲೆಗಳಲ್ಲಿ ಮಳೆಯಬ್ಬರ ಶುರು
ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯೇ ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೇ ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ ನಿನ್ನೆ ಬಿದ್ದಿದೆ. ಇದೀಗ ಚಿಕ್ಕ ಮಗಳೂರು ಮಂದಿ ಮೊದಲ ಮಳೆಯಲ್ಲೇ ಖುಷಿಗೊಂಡಿದ್ದು, ಕಾಫಿ ಬೆಳೆಗಾರರಿಗೆ ಸ್ವಲ್ಪ ಸಂಕಷ್ಟ ಎದುರಾಗಿದೆ. ಇನ್ನು ನಿನ್ನೆ ಬೆಳಗಾವಿಯಲ್ಲೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲೂ ಭಾರೀ ಮಳೆಯಾಗಿದೆ. ಅದರಲ್ಲೂ ವಿಶೇಷವಾಗಿ ಪುಣ್ಯ ಕ್ಷೇತ್ವಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಘಿದೆ ಎಂದು ವರದಿಯಾಗಿದೆ.
ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಸೂಚನೆ ನೀಡಿದೆ. ಚಳಿಯಾಗಲಿ, ಮಳೆಯಾಗಲಿ ಜನರು ಮಾತ್ರ ಎಚ್ಚರಿಕೆಯಿಂದ ಇದ್ದರೆ ಒಳ್ಳೆಯದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications