ಕರ್ನಾಟಕ (Karnataka) ಸೇರಿ ದೇಶದ ಬಹುತೇಕ ಪ್ರದೇಶಗಳಲ್ಲಿ ಚಳಿ ವಾತಾವಾರಣ ಇನ್ನೂ ಇದೆ. ಕೆಲವೆಡೆ ತುಸು ಕಡಿಮೆಯಾದರೂ, ಬೆಳಗ್ಗಿನ ಸಮಯದಲ್ಲಿ ಭಾರೀ ಚಳಿಯಿರುತ್ತದೆ (Cold). ಇದೀಗ ಕರ್ನಾಟಕದ ಹವಾಮಾನ ಇಂದು ಹೇಗಿದೆ ಗೊತ್ತಾ? ಕರ್ನಾಟಕದಲ್ಲಿ ಕಳೆದೊಂದು ತಿಂಗಳಿಂದ ತೀವ್ರ ಚಳಿ ಇದೆ. ದಟ್ಟವಾದ ಮಂಜು, ವಿಪರೀತ ಚಳಿಯಿಂದಾಗಿ ಕೆಲವು ಪ್ರದೇಶಗಳಂತೂ ಚಳಿಯಿಂದ ಗಢ ಗಢ ನಡುಗುತ್ತಿದೆ. ಆದ್ರೆ ಇದೀಗ ಚಳಿ ಪ್ರಮಾಣ ಕೆಲವೆಡೆ ಕಮ್ಮಿಯಾಗಿದ್ದು, ಮುಂದಿನ ದಿನಗಳಲ್ಲಿ ಬಿಸಿಲು (Summer) ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದಾದ್ಯಂತ ಹವಾಮಾನದಲ್ಲಿ ಬದಲಾವಣೆಯಾಗಲಿದೆ. ಅಂದರೆ ಇನ್ಮೇಲೆ ಚಳಿ ವಾತಾವರಣ ಕಡಿಮೆಯಾಗಿ, ಹೆಚ್ಚಿನ ಜಿಲ್ಲೆಗಳಲ್ಲಿ ಶುಷ್ಕ ಮತ್ತು ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ವರದಿ ಪ್ರಕಾರ, ತಾಪಮಾನ 30 ಡಿಗ್ರಿ ಸೆಲ್ಸಿಯಸ್ನಿಂದ 34 ಡಿಗ್ರಿ ಸೆಲ್ಸಿಯಸ್ವರೆಗೆ ಇರಬಹುದು ಎಂದು ವರದಿಯಾಗಿದೆ.
ಚಳಿ ಅಲ್ಲ, ಹೆಚ್ಚಾಯ್ತು ಬಿಸಿಲು!
ಇದುವರೆಗೆ ಚಳಿಯಿಂದ ನಡುಗುವಂತೆ ಮಾಡಿದ್ದ ಹವಾಮಾನ, ಇನ್ಮೇಲೆ ಬಿಸಿಲಿನಿಂದ ಬೇಯುವಂತೆ ಮಾಡಲಿದೆ. ಕರಾವಳಿ ಜಿಲ್ಲೆಗಳಲ್ಲೂ ಹವಾಮಾನ ಸ್ವಲ್ಪ ತೇವಾಂಶದಿಂದ ಕೂಡಿರಲಿದ್ದು, ಉತ್ತರ ಒಳನಾಡಿನ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಇಂದು ಹೆಚ್ಚಿರಲಿದೆ ಎಂದು ವರದಿಯಾಗಿದೆ.
ಮಳೆ ಸೂಚನೆ ಇಲ್ಲ
ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಸದ್ಯದ ಮಟ್ಟಿಗೆ ಮಳೆ ಸೂಚನೆ ಇಲ್ಲ. ಆದರೆ ಬೆಳಗ್ಗಿನ ಸಮಯದಲ್ಲಿ ಚಳಿ, ಮಧ್ಯಾಹ್ನದ ಸಂದರ್ಭದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ತಾಪಮಾನ 35 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ. ಇನ್ನು ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಗ್ಗಿನ ವೇಳೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಹಿತಕರವಾದ ಹವಾಮಾನ ಇರಲಿದೆ ಎಂದು ಹೇಳಲಾಗಿದೆ.
ಈ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಹೆಚ್ಚಳ
ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ ಈ ಜಿಲ್ಲೆಗಳಲ್ಲಿ ತಾಪಮಾನ 34 ಡಿಗ್ರಿ ಸೆಲ್ಸಿಯಸ್ನಿಂದ 35 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪುವ ಸಾಧ್ಯತೆ ಇದೆ.
ಮುಂದಿನ ವಾರದಿಂದಲೇ ಭಾರೀ ಬಿಸಿಲು
ಕರ್ನಾಟಕದಲ್ಲಿ ಮುಂದಿನ ವಾರದಿಂದಲೇ ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಬೆಳಗ್ಗಿನ ವೇಳೆ ಚಳಿ ಹೆಚ್ಚಿದ್ದರೆ, ಮಧ್ಯಾಹ್ನದ ವೇಳೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಈ ಬಾರಿ ಕರ್ನಾಟಕ ಬಿಸಿಲಿನಿಂದ ಪಕ್ಕಾ ಸುಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಾಮಾನ್ಯವಾಗಿ ಪ್ರತೀ ವರ್ಷ ರಾಜ್ಯದಲ್ಲಿ ಮಾರ್ಚ್, ಮೇ ವೇಳೆಯಲ್ಲಿ ಬೇಸಿಗೆ ಕಾಲ ಬರುತ್ತದೆ. ಆದ್ರೆ ಈ ಬಾರಿ ನಿರೀಕ್ಷೆಗೂ ಮೊದಲೇ ಬೇಸಿಗೆ ಆರಂಭವಾಗುವ ಸೂಚನೆಯಿದೆ. ಆದ್ದರಿಂದ ಜನರು ಮೊದಲೇ ಎಚ್ಚೆತ್ತುಕೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Education Rules: ಹೊಸ ಶಿಕ್ಷಣ ನೀತಿ ವಿರುದ್ಧ ಪೋಷಕರ ಆಕ್ರೋಶ! ವಯಸ್ಸು ಸಡಿಲಿಕೆಗೆ ಆಗ್ರಹ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications