ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿಂದ ವಿಪರೀತ ಚಳಿಯಾಗಿದೆ (Cold). ಅದರಲ್ಲೂ ತುಂತುರು ಮಳೆ, ಇನ್ನೂ ಕೆಲವೆಡೆ ಒಣಹವೆ ವಿಪರೀತವಾಗಿತ್ತು. ಇದೀಗ ಹವಾಮಾನ ಭಾರತೀಯ ಹವಾಮಾನ ಇಲಾಖೆ, ಜನವರಿ 5, 2026 ರ ಹವಾಮಾನ ವರದಿ ಬಿಡುಗಡೆ ಮಾಡಿದೆ. ಆ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವು ಕಡೆ ಚಳಿ ಇರಲಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾ, ಕರ್ನಾಟಕದಲ್ಲಿ ಬಹುತೇಕ ಒಣ ಹವೆ ಇರಲಿದೆ. ಸದ್ಯ ಯಾವುದೇ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿಲ್ಲ. ಅದರಲ್ಲೂ ಒಳನಾಡಿನ ಜಿಲ್ಲೆಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಅದರಲ್ಲೂ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇತ್ತೀಚೆಗೆ ಒಣಹವೆ ಮುಂದುವರೆದಿದೆ. ಆದ್ದರಿಂದ ಇಂದೂ ಕೂಡಾ ಈ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಒಣಹವೆ ಇರಲಿದೆ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.
ಕರಾವಳಿ ಜಿಲ್ಲೆಗಳ ವಾತಾವರಣ
ಕರಾವಳಿ ಜಿಲ್ಲೆಗಳಲ್ಲೂ ಚಳಿ ಕಡಿಮೆಯಾಗಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರ, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನ ವಾತಾವರಣ
ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿರಲಿದೆ. ವರದಿ ಪ್ರಕಾರ, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳದ ಹವಾಮಾನ:
ರಾಜ್ಯದಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದೆ. ಇದರ ಆಧಾರದ ಮೇಲೆ, ಮುಂದಿನ ದಿನಗಳವರೆಗೆ ಯಾವುದೇ ಮಳೆ ಅಲರ್ಟ್ ಇರುವುದಿಲ್ಲ. ಆದ್ದರಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಚಳಿಗಾಲ ತೀವ್ರವಾಗಿರಲಿದೆ ಮತ್ತು ಬಯಲು ಪ್ರದೇಶಗಳಲ್ಲಿ ಶೀತಗಾಳಿಯಾಗಲಿದೆ ಎಂದು ವರದಿಯಾಗಿದೆ.
ಇನವನು ಮುನ್ನಾರ್ನಲ್ಲಿ ತಾಪಮಾನ ಡಿಗ್ರಿ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿರಲಿದೆ. ಇಂದಿನಿಂದ 8ನೇ ತಾರೀಖಿನವರೆಗೆ, ದಕ್ಷಿಣ ತಮಿಳುನಾಡು ಕರಾವಳಿ, ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಕನ್ಯಾಕುಮಾರಿ ಪ್ರದೇಶದಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಮತ್ತು ಕೆಲವೊಮ್ಮೆ ಗಂಟೆಗೆ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
More From GoodReturns

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!

Sugarcane Farmers: ಕರ್ನಾಟಕದ ಕಬ್ಬು ಬೆಳೆಗಾರರಿಗೆ ಗುಡ್ನ್ಯೂಸ್…ಸರ್ಕಾರದಿಂದ 300 ಕೋಟಿ ರೂ. ಪರಿಹಾರ ಬಿಡುಗಡೆ!



Click it and Unblock the Notifications