ನಾಳೆ ಅಂದರೆ ಜನವರಿ 31 ಹಾಗೂ ಫೆಬ್ರವರಿ 1ರಂದು ಹಲವಾರು ಬ್ಯಾಂಕ್ ನೌಕರರ ಸಂಘಗಳು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ ನಡೆಸಲಿವೆ. ಇದರಿಂದಾಗಿ ಭಾರತದಾದ್ಯಂತ ವಿಶೇಷವಾಗಿ ಪಿಎಸ್ಯು ಬ್ಯಾಂಕುಗಳಲ್ಲಿ ಬ್ಯಾಕಿಂಗ್ ಸೇವೆ ಮೇಲೆ ಪರಿಣಾಮ ಬೀರಲಿದೆ.
ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆ (UFBU) ತಿಂಗಳ ಕೊನೆಯಲ್ಲಿ ಮತ್ತು ಫೆಬ್ರವರಿ ಆರಂಭದಲ್ಲಿ ಎರಡು ದಿನಗಳ ಕಾಲ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಅಂದು ಕೂಡ ಬ್ಯಾಂಕ್ ಮುಷ್ಕರವಿರಲಿದೆ. ವೇತನ ಪರಿಷ್ಕರಣೆ ಕುರಿತು ಭಾರತೀಯ ಬ್ಯಾಂಕುಗಳ ಸಂಘ(ಐಬಿಎ)ಯೊಂದಿಗೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ.

ಸತತ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಗ್ರಾಹಕರಿಗೆ ತೊಂದರೆಯಾಗದಿರುವಂತೆ ಸೂಕ್ತ ಬದಲಿ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತಿಳಿಸಿದೆ. ಇನ್ನು ಬಹುತೇಕ ಬ್ಯಾಂಕುಗಳು ಎರಡು ದಿನಗಳ ಕಾಲ ಸೇವೆಯಲ್ಲಿ ಪರಿಣಾಮ ಬೀರಬಹುದು ಎಂದು ಈಗಾಗಲೇ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ.
2017ರ ನವಂಬರ್ 01ರಿಂದ ಬಗೆಹರಿಯದೇ ಉಳಿದಿರುವ ವೇತನ ಪರಿಷ್ಕರಣೆ ಬೇಡಿಕೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಒತ್ತಾಯಿಸಿ ಮಾರ್ಚ್ ತಿಂಗಳಲ್ಲೂ ಸಹ ಮೂರು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘಟನೆ, ಭಾರತೀಯ ಬ್ಯಾಂಕ್ ನೌಕರರ ಫೆಡರೇಷನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ನೌಕರರ ಫೆಡರೇಶನ್, ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್, ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ ಮತ್ತು ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಒಕ್ಕೂಟಗಳನ್ನು ಈ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು (UFBU) ಒಳಗೊಂಡಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!



Click it and Unblock the Notifications