ಬೆಂಗಳೂರಿನಲ್ಲಿ ಹೆಬ್ಬಾಳ-ಸರ್ಜಾಪುರ ಮೆಟ್ರೋ ಮಾರ್ಗ ಉದ್ದಕ್ಕೂ ಡಿಪೋ ನಿರ್ಮಾಣಕ್ಕೆ ಈಗಾಗಲೇ ಭೂಮಿ ಗುರುತಿಸಲಾಗಿದೆ, ಸಧ್ಯದಲ್ಲೇ ಈ ಭುಮಿಯನ್ನ ಪ್ರಾಧಿಕಾರ ಸ್ವಾಧಿನಪಡಿಸಿಕೊಳ್ಳಿದೆ. ಬೆಂಗಳೂರಿನಲ್ಲಿ ಅತ್ಯಂತ ವಾಹನ ದಟ್ಟಣೆಯನ್ನ ಎದುರಿಸುತ್ತಿದ್ದ ನಗರಗಳೆಂದರೆ ಅವು ಹೆಬ್ಬಾಳ ಮತ್ತು ಸರ್ಜಾಪುರ ರಸ್ತೆಗಳು. ಈಗ ಈ ಭಾಗದಲ್ಲಿ ಮೆಟ್ರೋ ಸೇವೆಯನ್ನ ಹೆಚ್ಚಿಸುವ ಮೂಲಕ ಜನರಿಗೆ BMRCL ನೆರವಾಗಲಿದೆ. ಇನ್ನು ಈ ಡಿಪೋ ನಿರ್ಮಾಣಕ್ಕೆ ಎಷ್ಟು ಖರ್ಚಾಗಲಿದೆ ಗೊತ್ತಾ? ಇಲ್ಲಿ ತಿಳಿಯಿರಿ.
ಹೆಬ್ಬಾಳ- ಸರ್ಜಾಪುರ ಮಾರ್ಗದಲ್ಲಿ ಡಿಪೋ ನಿರ್ಮಾಣಕ್ಕಾಗಿ ಸರ್ಜಾಪುರ ವೃತ್ತದ ಹಿಂದೆ 55.69 ಎಕರೆ ಎಕರೆ ಖಾಸಗಿ ಜಮೀನನ್ನು ಈಗಾಗಲೇ ಗುರುತಿಸಲಾಗಿದೆ. ಹೀಗಾಗಿ ಯಾವುದೇ ವಿಳಂಬವಿಲ್ಲದೇ ನಮ್ಮ ಮೆಟ್ರೋಗೆ ಭೂಮಿಯನ್ನು ಹಸ್ತಾಂತರಿಸುವಂತೆ ಪ್ರಾಧಿಕಾರ ಸಿಎಂ ಸಿದ್ದರಾಮಯ್ಯ ಅವರನ್ನ ಒತ್ತಾಯಿಸಿದ್ದಾರೆ.

ಈ ಡಿಪೋ ನಿರ್ಮಾಣಕ್ಕೆ ಗುರುತಿಸಲಾದ ಈ ಖಾಸಗಿ ಭೂಮಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿದ್ದಾಗಿದೆ. ಇನ್ನು ಈ ಭೂಮಿಯಲ್ಲಿ ಮುಖ್ಯ ಭಾಗವನ್ನ ಬಳಸಿಕೊಂಡು ಡಿಪೋ ನಿರ್ಮಾಣ ಮಾಡಲಿದೆ ಎಂದು BMRCL ತಿಳಿಸಿದೆ. ಹಾಗೆ ಇನ್ನುಳಿದ ಸುಮಾರು 6.65 ಎಕರೆ ಭೂಮಿಯನ್ನು ಸಿಬ್ಬಂದಿಗಳಿಗಾಗಿ ವಸತಿ ಗೃಹಗಳನ್ನ ನಿರ್ಮಿಸಲು ಬಳಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.
ಈ ಡಿಪೋ ನಿರ್ಮಾಣಕ್ಕೆ ಎಷ್ಟು ಖರ್ಚಾಗಬಹುದು?
ಹೆಬ್ಬಾಳ- ಸರ್ಜಾರಪುರ ಮೆಟ್ರೋ ಮಾರ್ಗ 36 ಕಿ.ಮೀ ಉದ್ದವನ್ನ ಹೊಂದಿದ್ದು, ಈ ಮಾರ್ಗಗಳಿಗೆ ಸೇವೆ ಒದಗಿಸುವ ಸಲುವಾಗಿ ಈ ಡಿಪೋ ನಿರ್ಮಾಣಕ್ಕೆ ಪ್ರಾಧಿಕಾರ ಮುಂದಾಗಿದೆ. ಈ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಸೇರಿದ ಈ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಲು ಸುಮಾರು 1,224 ಕೋಟಿ ರೂ. ವೆಚ್ಚವಾಗಲಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಇನ್ನು ಈ ಹೆಬ್ಬಾಳ-ಸರ್ಜಾಪುರ ಮಾರ್ಗ ಡಿಪೋ ನಿರ್ಮಾನ ಅಲ್ಲದೆ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹೆಬ್ಬಾಳದಲ್ಲಿ 45 ಎಕರೆ ಭೂಮಿಯನ್ನು ಬಹು-ಮಾದರಿ ಸಾರಿಗೆ ಕೆಂದ್ರದ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಜಾನದಲ್ಲಿ ಒಂದು ಬಾಗವನ್ನ ಮೆಟ್ರೋದ ದೈನಂದಿನ ಕಾರ್ಯಾಚರಣೆಯನ್ನು ಬೆಂಬಲಿಸಲು ಸ್ಟೇಬ್ಲಿಂಗ್ ಯಾರ್ಡ್ಗಾಗಿ ಬಳಸಲಾಗುವುದು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಅಲ್ಲದೆ ಸಧ್ಯಕ್ಕೆ ಈ ಭೂಮಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶದಲ್ಲಿದ್ದು, ಸಾರಿಗೆ ಸಂಸ್ಥೆಯು ಈ ಭುಮಿಯ ಪ್ರತಿ ಎಕರೆಗೆ 12.1 ಕೋಟಿ ರೂ. ಪಾವತಿಸಲು ಮುಂದಾಗಿದೆ. ಆದ್ರೆ ಈ ಭೂಮಿಯನ್ನ ಸುಮಾರು ಎರಡು ದಶಕಗಳ ಹಿಂದೆಯೇ ಸ್ವಾಧೀನಪಡಿಸಿಕೊಳ್ಳಲಾಗಿದೆ ಆದ್ರೂ ಕೂಡ ಅಲ್ಲಿನ ಭೂ ಮಾಲೀಕರಿಗೆ ಯಾವುದೇ ಪರಿಹಾರವನ್ನ ನೀಡಿಲ್ಲ.
ಈ ಹಿಂದೆ ಕೂಡ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಭೂಮಿ ನೀಡಿದ ಕಾಸಗಿ ಏಜೆನ್ಸುಗಳಿಗೆ ನೇರರವಾಗಿ ಹಣ ನೀಡುವಂತೆ ಸೂಚನೆಯನ್ನ ನೀಡಿದ್ದರು. ಇದದ ನಂತರ ಮತ್ತೆ ಸಂಸದೆ ಶೋಭಾ ಕರಂದ್ಲಾಜೆ ಅವರು ವಿಳಂಬ ಮಾಡದೆ ಕೆಐಎಡಿಬಿ ಭೂಮಿಯನ್ನ ನಮ್ಮ ಮೆಟ್ರೊಗೆ ಹಸ್ತಾಂತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ತಿಳಿಸಿದ್ದರು.
ನಂತರ ಹೆಬ್ಬಾಳದಲ್ಲಿರುವ 45 ಎಕರೆ ಜಾಗವನ್ನು ಬಿಎಂಆರ್ಸಿಎಲ್ಗೆ ವರ್ಗಾಯಿಸುವಂತೆ ಆರಿನ್ ಕ್ಯಾಪಿಟಲ್ ಅಧ್ಯಕ್ಷ ಟಿ.ವಿ.ಮೋಹನ್ ದಾಸ್ ಪೈ ಅವರು ಮುಖ್ಯಮಂತ್ರಿಯವರನ್ನ ಒತ್ತಾಯಿಸಿದ್ದರು.
ಈ 45 ಎಕರೆ ಭೂಮಿಯನ್ನ ನಮ್ಮ ಮೆಟ್ರೋಗೆ ನೀಡುವ ಮೂಲಕ ಬೆಂಗಳೂರಿಗೆ ಅಂದರೆ ನಮಗೆಲ್ಲರಿಗೂ ಉತ್ತಮ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸಹಾಯ ಮಾಡಿ. ಬೇರೆ ಯಾರಿಗೂ ಅಲ್ಲ. ಸಿದ್ದರಾಮಯ್ಯ ಅವರೇ ನಿಮ್ಮ ಪರಂಪರೆ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಒಟ್ನಲ್ಲಿ, ಈ 36-ಕಿಮೀ ಮೆಟ್ರೋ ಮಾರ್ಗ ನಿರ್ಮಾಣಕ್ಕೆ 28,405 ಕೋಟಿ ವೆಚ್ಚವಾಗಲಿದೆ ಎನ್ನಲಾಗ್ತಿದೆ. ಇದರಲ್ಲಿ ಜಮೀನು ಸ್ವಾಧೀನದ ವೆಚ್ಚ ಕೂಡ ಒಳಗೊಂಡಿದ್ದು, ಇದಕ್ಕೆ ಸುಮಾರು 8,080 ಕೋಟಿ ರೂ. ಖರ್ಚಾಗಲಿದೆ. ಅಲ್ಲದೆ ಈ ಯೋಜನೆಗಾಗಿ ಬಿಎಂಆರ್ಸಿಎಲ್ಗೆ ಸುಮಾರು 161.65 ಎಕರೆ ಭೂಮಿಯ ಅವಶ್ಯಕತೆಯಿದೆ ಎನ್ನಲಾಗ್ತಿದೆ. ಇನ್ನು ಈ ಯೋಜನೆಯ ಕುರಿತಾಗಿ ರಾಜ್ಯ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಬಿಎಂಆರ್ಸಿಎಲ್ ಜೊತೆ ಅಧಿಕಾರಿಗಳೊಬ್ಬರು ಮಾತನಾಡಿದ್ದು, ಭೂಸ್ವಾಧೀನಕ್ಕಾಗಿ ಕೇಂದ್ರ ತನ್ನ ಅಂತಿಮ ತೀರ್ಮಾನ ತಿಳಿಸುವ ಮುನ್ನ ನಾವು ಈ ಮಾರ್ಗ ಮೆಟ್ರೋ ನಿರ್ಮಾನದ ಪೂರ್ವ ನಿರ್ಮಾಣ ಚಟುವಟಿಕೆಗಳನ್ನ ಆರಂಭ ಮಾಡಬಹುದು ಎಂದು ವರದಿಯಲ್ಲಿ ತಿಳಿಸಿದ್ದಾರೆ.
ಹೆಬ್ಬಾಳ-ಸರ್ಜಾಪುರ ಮೆಟ್ರೋ ಮಾರ್ಗ
ಹೆಬ್ಬಾಳ-ಸರ್ಜಾಪುರ ಮೆಟ್ರೋ ಲೈನ್ ಭಾರತದಲ್ಲಿನ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಜಾಲದ ಪ್ರಸ್ತಾವಿತ ವಿಸ್ತರಣೆಯಾಗಿದ್ದು, ನಗರದ ಪ್ರಮುಖ ಪ್ರದೇಶಗಳ ನಡುವೆ ಸಂಪರ್ಕವನ್ನು ಸುಧಾರಿಸಲು ವಿನ್ಯಾಸಗೊಳಿಸಲಾಗಿದೆ. ಈ ಮಾರ್ಗವು 2 ನೇ ಹಂತದ ವಿಸ್ತರಣೆ ಯೋಜನೆಯ ಭಾಗವಾಗಿದೆ ಮತ್ತು ಬೆಂಗಳೂರಿನ ಉತ್ತರ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸುವ ಗುರಿಯನ್ನು ಹೊಂದಿದೆ.
ಹೆಬ್ಬಾಳ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಸರ್ಜಾಪುರದಂತಹ ನಿರ್ಣಾಯಕ ಸ್ಥಳಗಳನ್ನು ಒಳಗೊಂಡಿದೆ. ಇದು ಸಾರ್ವಜನಿಕ ಸಾರಿಗೆ ಆಯ್ಕೆಗಳನ್ನು ಹೆಚ್ಚಿಸುತ್ತದೆ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರಿಗೆ ರಸ್ತೆ ಪ್ರಯಾಣಕ್ಕೆ ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿ ಪರ್ಯಾಯವನ್ನು ಒದಗಿಸುತ್ತದೆ. ಸುಸ್ಥಿರ ನಗರ ಚಲನಶೀಲತೆಯನ್ನು ಪ್ರೋತ್ಸಾಹಿಸುವ ಸಂದರ್ಭದಲ್ಲಿ ವಸತಿ ಮತ್ತು ವಾಣಿಜ್ಯ ಕೇಂದ್ರಗಳೆರಡಕ್ಕೂ ಉತ್ತಮ ಪ್ರವೇಶವನ್ನು ಒದಗಿಸುವ ಮೂಲಕ ನಗರದ ಮೂಲಸೌಕರ್ಯಕ್ಕೆ ಈ ಮಾರ್ಗವು ಮಹತ್ವದ ಬೆಳವಣಿಗೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications