ಭಾರತದಲ್ಲಿ ಗ್ರಾಹಕರ ವಿಶ್ವಾಸವು ಐದು ವರ್ಷಕ್ಕೆ ಹೋಲಿಸಿದರೆ ಕನಿಷ್ಠ ಮಟ್ಟಕ್ಕೆ ತಲುಪಿದೆ. ಅಂದ ಹಾಗೆ ಐದು ವರ್ಷದ ಹಿಂದೆ ಅಂದರೆ ಅದು ನರೇಂದ್ರ ಮೋದಿ ಅವರು ಮೊದಲನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ವರ್ಷ. ಗ್ರಾಹಕರ ವಿಶ್ವಾಸ ಸೂಚ್ಯಂಕವು ಸೆಪ್ಟೆಂಬರ್ ನಲ್ಲಿ 89.4 ಇತ್ತು. ಅದು ನವೆಂಬರ್ ನಲ್ಲಿ 85.7ಕ್ಕೆ ಕುಸಿದಿದೆ.
ನೂರು ಎಂಬ ಸಂಖ್ಯೆಯು ಆಶಾವಾದ ಮತ್ತು ನಿರಾಶಾವಾದದ ಮಧ್ಯೆ ಗೆರೆ ಇದ್ದಂತೆ. ಏಷ್ಯಾದ ಮೂರನೇ ಅತಿ ದೊಡ್ಡ ಆರ್ಥಿಕತೆ ಭಾರತ. ಇಲ್ಲಿನ ಆರ್ಥಿಕ ಹಿಂಜರಿತದ ಸನ್ನಿವೇಶದಲ್ಲಿ ಗ್ರಾಹಕರ ವಿಶ್ವಾಸಾರ್ಹ ಸೂಚ್ಯಂಕದಲ್ಲೂ ಇಳಿಕೆಯಾಗಿದೆ. ಕಳೆದ ಕೆಲ ಸಮಯದಿಂದಲೇ ಈ ಸಮಸ್ಯೆ ಇದ್ದು, ಬ್ಯಾಂಕಿಂಗ್ ವಲಯದ ಮೇಲೆ ಬಿಕ್ಕಟ್ಟಿನ ಛಾಯೆ ಮೂಡಿಸಿದೆ. ಇದರಿಂದ ಸಾಲ ನೀಡುವುದು ಕೂಡ ಕಷ್ಟವಾಗಿದೆ.
ಗ್ರಾಹಕರ ಬಳಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ರೀತಿ ಗ್ರಾಹಕ ಬಳಕೆಯೇ ದೇಶದ ಆರ್ಥಿಕತೆಯ 60% ಇದೆ. ಇವೆಲ್ಲ ಕಾರಣವೂ ಸೇರಿ ಜಿಡಿಪಿ ಬೆಳವಣಿಗೆ ದರವು ಸೆಪ್ಟೆಂಬರ್ ಅಂತ್ಯದ ತ್ರೈಮಾಸಿಕಕ್ಕೆ ಆರು ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ 13 ದೊಡ್ಡ ನಗರಗಳಲ್ಲಿ ಮತ್ತು 5,334 ಕುಟುಂಬಗಳ ಸಮೀಕ್ಷೆ ನಡೆಸಲಾಗಿತ್ತು. ಸಾಮಾನ್ಯ ಆರ್ಥಿಕ ಸನ್ನಿವೇಶದಲ್ಲಿ ಗ್ರಾಹಕರ ಮನಸ್ಥಿತಿ, ನಿರೀಕ್ಷೆ, ಉದ್ಯೋಗ, ಮತ್ತು ಆದಾಯ- ಖರ್ಚು ಹೊರತುಪಡಿಸಿ ಒಟ್ಟಾರೆ ದರದ ಪರಿಸ್ಥಿತಿ ಬಗ್ಗೆ ಸಮೀಕ್ಷೆ ಮಾಡಲಾಗಿದೆ.
ಕಳೆದ ವರ್ಷಕ್ಕಿಂತ ಈ ವರ್ಷ ದರ ಏರಿಕೆ ಆಗಿದೆ ಮತ್ತು ಮುಂದಿನ ವರ್ಷಗಳಲ್ಲೂ ಬೆಲೆ ಜಾಸ್ತಿ ಆಗಬಹುದು. ಭವಿಷ್ಯದಲ್ಲಿ ಹಣದುಬ್ಬರದ ಒತ್ತಡ ಕಾಡಬಹುದು ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಬಹಳ ಮಂದಿ ಹೇಳಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications