ಇ-ಕಾಮರ್ಸ್ ವೇದಿಕೆ ಫ್ಲಿಫ್ಕಾರ್ಟ್ನಲ್ಲಿ ಆಸಿಡ್ ಅನ್ನು ಮಾರಾಟ ಮಾಡಲಾಗುತ್ತಿದ್ದು, ಸೆಂಟ್ರಲ್ ಕನ್ಸ್ಯೂಮರ್ ಪ್ರೊಟೆಕ್ಷನ್ ಅಥಾರಿಟಿ (ಸಿಸಿಪಿಎ) ಇದನ್ನು ಪ್ರಶ್ನೆ ಮಾಡಿದೆ. ಹಾಗೆಯೇ ಮುಂದಿನ 7 ದಿನಗಳಲ್ಲಿ ಈ ಬಗ್ಗೆ ಉತ್ತರವನ್ನು ನೀಡುವಂತೆ ಸೂಚಿಸಲಾಗಿದೆ.
ದೆಹಲಿಯಲ್ಲಿನ ದ್ವಾರಕದಲ್ಲಿ ಹುಡುಗಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಆಸಿಡ್ ದಾಳಿಯನ್ನು ನಡೆಸಿದ ಯುವಕನು ಫ್ಲಿಫ್ಕಾರ್ಟ್ನಲ್ಲಿ ಈ ಆಸಿಡ್ ಅನ್ನು ಖರೀದಿ ಮಾಡಿದ್ದಾನೆ ಎಂದು ಆರೋಪ ಮಾಡಲಾಗಿದೆ. ಈ ಹಿಂದೆ ದೆಹಲಿ ಮಹಿಳಾ ಆಯೋಗ ಪ್ಲಾಟ್ಫಾರ್ಮ್ನಲ್ಲಿ ಯುವಕನಿಗೆ ಆಸಿಡ್ ಮಾರಾಟ ಮಾಡಿರುವುದಕ್ಕೆ ಫ್ಲಿಫ್ಕಾರ್ಟ್ ವಿರುದ್ಧ ನೋಟಿಸ್ ಜಾರಿ ಮಾಡಿತ್ತು.
ಫ್ಲಿಫ್ಕಾರ್ಟ್ನಲ್ಲಿ ಆಸಿಡ್ ಅನ್ನು ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ಸುದ್ದಿ ಕೇಳಿಬರುತ್ತಿದ್ದಂತೆ ದೆಹಲಿ ಪೊಲೀಸರು ಕೂಡಾ ನೋಟಿಸ್ ಅನ್ನು ಜಾರಿ ಮಾಡಿದ್ದಾರೆ. ಇನ್ನು ನೋಟಿಸ್ನಲ್ಲಿ, "ದೆಹಲಿಯಲ್ಲಿ ಆಸಿಡ್ ದಾಳಿಯು ನಡೆದಿದ್ದು, ಈ ದಾಳಿಗೆ ಫ್ಲಿಫ್ಕಾರ್ಟ್ನಿಂದ ಆಸಿಡ್ ಅನ್ನು ಖರೀದಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ," ಎಂದು ನೋಟಿಸ್ನಲ್ಲಿ ಉಲ್ಲೇಖ ಮಾಡಲಾಗಿದೆ.

ನೋಟಿಸ್ನಲ್ಲಿ ಏನಿದೆ?
ಮಾಧ್ಯಮದ ವರದಿಯನ್ನು ಆಧಾರಿಸಿ ಸಿಸಿಪಿಎ ನೋಟಿಸ್ನಲ್ಲಿ ಉಲ್ಲೇಖಿಸಿದ್ದು, "ಫ್ಲಿಫ್ಕಾರ್ಟ್ನಲ್ಲಿ ಆಸಿಡ್ ಸುಲಭ ಹಾಗೂ ಯಾವುದೇ ನಿರ್ಬಂಧವಿಲ್ಲದೆ ಲಭ್ಯವಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ. ಈ ರೀತಿ ಸುಲಭವಾಗಿ ಆಸಿಡ್ ಲಭ್ಯವಾಗುವುದು ಅತೀ ಆತಂಕಕಾರಿಯಾಗಿದೆ, ಗ್ರಾಹಕರಿಗೆ ಅಸುರಕ್ಷಿತವಾಗಿದೆ," ಎಂದು ಹೇಳಿದೆ. ಏಳು ದಿನದಲ್ಲಿ ಉತ್ತರ ನೀಡುವಂತೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಹಾಗೆಯೇ ಸಂಬಂಧಿತ ದಾಖಲೆಗಳನ್ನು ನೀಡುವಂತೆ ತಿಳಿಸಲಾಗಿದೆ.
ಇಬ್ಬರು ಮಾಸ್ಕ್ ಹಾಕಿದ ಯುವಕರು ಹುಡುಗಿಯ ಮೇಲೆ ಬುಧವಾರ ಆಸಿಡ್ ದಾಳಿ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮನೆಯಿಂದ ಶಾಲೆಗೆ ಹುಡುಗಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧನ ಮಾಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications