ಕೊರೊನಾವೈರಸ್ನಿಂದಾಗಿ ವಿಶ್ವದಾದ್ಯಂತ ಎಲ್ಲಾ ಉದ್ಯಮಗಳು ಬಂದ್ ಆಗಿವೆ. ಇದರ ಜೊತೆಗೆ ಈಗಾಗಲೇ ಅಂತರರಾಷ್ಟ್ರೀಯ ವಿಮಾನ ಸಂಚಾರವು ರದ್ದಾಗಿದೆ. ಕೆಲವು ತುರ್ತು ವಿಮಾನಗಳ ಸಂಚಾರದ ಹೊರತು ಭಾರತವೂ ಕೂಡ ವಿಮಾನ ಸಂಚಾರ ರದ್ದು ಮಾಡಿದೆ. ಇದರಿಂದ ಜಾಗತಿಕವಾಗಿ ನಾಗರಿಕ ವಿಮಾನ ಯಾನ ಸಂಸ್ಥೆಗಳು ಕೋಟ್ಯಂತರ ರುಪಾಯಿ ನಷ್ಟವನ್ನು ಅನುಭವಿಸಿವೆ.
ಏರ್ಟ್ರಾಫಿಕ್ ಸಂಬಂಧಪಟ್ಟಂತೆ ಅಂತಾರಾಷ್ಟ್ರೀಯ ವಿಮಾನ ಪ್ರಯಾಣದಲ್ಲಿ 50 ಪರ್ಸೆಂಟ್ರಷ್ಟು ಕುಸಿತವಾಗಿದೆ. ಇನ್ನು ಫ್ಲೈಟ್ ರಾಡರ್ ಸಂಸ್ಥೆ ನೀಡಿರುವ ಅಂಕಿ -ಅಂಶದಲ್ಲಿ ಕೇವಲ ವಾಣಿಜ್ಯೇತರ ವಿಮಾನಯಾನ ಸಂಸ್ಥೆಗಳ ಮಾಹಿತಿ ಮಾತ್ರ ಉಲ್ಲೇಖವಾಗಿದ್ದು, ವಾಣಿಜ್ಯ ವಿಮಾನಗಳ ಕಾರ್ಯಾಚರಣೆ ಕುರಿತಾದ ಅಂಕಿ-ಅಂಶ ಇದರಲ್ಲಿ ಒಳಗೊಂಡಿಲ್ಲ. ಒಂದು ವೇಳೆ ಎಲ್ಲ ವಾಣಿಜ್ಯ ಸಂಸ್ಥೆಗಳ ಮಾಹಿತಿ ಸಿಕ್ಕಲ್ಲಿ ನಷ್ಟದ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.

ಇನ್ನು ಲಾಕ್ಡೌನ್ ಜಾರಿಯಲ್ಲಿದ್ದು, ಪ್ರಯಾಣಿಕರು ಇಲ್ಲದಿದ್ದರೂ ಸಾವಿರಾರು ವಿಮಾನಗಳು ಹಾರಾಟ ನಡೆಸುತ್ತಿವೆ. ಅಂತಾರಾಷ್ಟ್ರೀಯ ಮಾರ್ಗವಾಗಿ ಹಾರಾಡುವ ಕೆಲ ವಿಮಾನಗಳು ಪರವಾನಗಿ ಉಳಿಸಿಕೊಳ್ಳಲು ನಿರ್ದಿಷ್ಟ ಪ್ರಮಾಣದಲ್ಲಿ ಹಾರಾಟ ನಡೆಸಬೇಕೆಂಬ ನಿಯಮವೇ ಇದಕ್ಕೆ ಕಾರಣ. ಈಗ ಯುರೋಪಿಯನ್ ಒಕ್ಕೂಟ ಪ್ರಾಂತ್ಯದಲ್ಲಿ ನಿಯಮವನ್ನು ಸಡಿಲಿಸಿದ್ದು, ಮಾರ್ಗಗಳನ್ನು ರದ್ದುಗೊಳಿಸಿದೆ. ಆದರೂ ಹಲವು ದೇಶಗಳಲ್ಲಿ ದೇಶಿ ವಿಮಾನ ಸಂಚಾರ ಸಂಪೂರ್ಣವಾಗಿ ರದ್ದುಗೊಳ್ಳದ ಕಾರಣ ಸಾವಿರರಾರು ವಿಮಾನಗಳು ಹಾರಾಡುತ್ತಿವೆ.
ವಿಮಾನಯಾನ ಸಂಚಾರ ರದ್ದಿನಿಂದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದರೂ ಪರಿಸರಕ್ಕೆ ಅನುಕೂಲವಾಗಿದೆ. ಏಕೆಂದರೆ, ವಿಮಾನ ಯಾನ ರದ್ದಿನಿಂದ ಹಸಿರು ಅನಿಲ ಉತ್ಪಾದನೆ ಪ್ರಮಾಣ ಬಹಳಷ್ಟು ಇಳಿಕೆಯಾಗಿದೆ. ಕೋವಿಡ್-19 ವೈರಸ್ ಆವರಿಸಿಕೊಳ್ಳುವ ಮೊದಲು ವಿಮಾನ ಸಂಚಾರದಿಂದ ವಾಯು ಮಾಲಿನ್ಯ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿತ್ತು. ಒಂದು ಅಂದಾಜಿನಲ್ಲಿ ಹೇಳುವುದಾದರೆ 1990 ರಿಂದ 2019 ರಷ್ಟೊತ್ತಿಗೆ ವಾಯು ಮಾಲಿನ್ಯ ಮಟ್ಟ ದ್ವಿಗುಣಗೊಂಡಿತ್ತು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications