ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಹಾಗೂ ಗೂಗಲ್ ಸಂಸ್ಥೆಯು ತಮ್ಮ ಹೆಚ್ಚಿನ ಉದ್ಯೋಗಿಗಳಿಗೆ ಈ ವರ್ಷಾಂತ್ಯದವರೆಗೂ ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಮ್) ಮಾಡುವ ಅವಕಾಶ ನೀಡಲು ಮುಂದಾಗಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ ಏಪ್ರಿಲ್ನಲ್ಲಿ ತನ್ನ ಹೆಚ್ಚಿನ ಉದ್ಯೋಗಿಗಳು ಮೇ ಅಂತ್ಯದವರೆಗೆ ದೂರದಿಂದಲೇ ಕೆಲಸ ಮಾಡುವ ಅಗತ್ಯವಿರುತ್ತದೆ ಎಂದು ಹೇಳಿದ್ದರು. ಅಲ್ಲದೆ ಅಲ್ಪ ಪ್ರಮಾಣದ ಉದ್ಯೋಗಿಗಳಿಗೆ ಮಾತ್ರ ಬೇಗನೆ ಕಚೇರಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು.
ವರ್ಷ ಪೂರ್ತಿ ಮನೆಯಿಂದಲೇ ಕೆಲಸಕ್ಕೆ ಶೀಘ್ರದಲ್ಲೇ ಆದೇಶ?
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಫೇಸ್ ಬುಕ್ ಜಗತ್ತಿನಾದ್ಯಂತ ತನ್ನ ಕಚೇರಿಗಳನ್ನು ಜುಲೈ ತಿಂಗಳಿಗೂ ಮುನ್ನ ತೆರೆಯದೇ ಇರುವುದಕ್ಕೆ ನಿರ್ಧರಿಸಿದೆ. ಜು.06 ರಿಂದ ತನ್ನ ಕಚೇರಿಗಳನ್ನು ತೆರೆಯಲಿರುವ ಫೇಸ್ ಬುಕ್ ಮಾರ್ಚ್ ನಿಂದ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದ್ದು ಶೀಘ್ರವೇ ಸಿಇಒ ಮಾರ್ಕ್ ಝುಕರ್ಬರ್ಗ್ ಸಂಸ್ಥೆಯ ಪುನಾರಂಭದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.
ಪ್ರಸ್ತುತ 48,268 ಜನರಿಗೆ ಫೇಸ್ ಬುಕ್ ಉದ್ಯೋಗ ನೀಡಿದೆ. ಫೇಸ್ ಬುಕ್ ಈಗಾಗಲೇ ವ್ಯಕ್ತಿಗಳು ಉಪಸ್ಥಿತರಾಗಿದ್ದುಕೊಂಡು ನಡೆಸುವ ಸಭೆಗಳನ್ನು ರದ್ದುಗೊಳಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವಷ್ಟೇ ಸಭೆಗಳನ್ನು ನಡೆಸುತ್ತಿದೆ.
ಸಣ್ಣ ಪ್ರಮಾಣದಲ್ಲಿ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸ
ಶೇಕಡವಾರು ಸಣ್ಣ ಪ್ರಮಾಣದಲ್ಲಿ ಫೇಸ್ಬುಕ್ ತನ್ನ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಬಹುದು ಎಂದು ಜುಕರ್ಬರ್ಗ್ ಹೇಳಿದ್ದಾರೆ. ಇವರು ಅಗತ್ಯ ಕಾರ್ಯಗಳಲ್ಲಿ ಕೆಲಸ ಮಾಡುವ ನೌಕರರು ಮತ್ತು ಭಯೋತ್ಪಾದನೆ ನಿಗ್ರಹ ಅಥವಾ ಆತ್ಮಹತ್ಯೆ ಮತ್ತು ಸ್ವಯಂ-ಹಾನಿ ತಡೆಗಟ್ಟುವಲ್ಲಿ ಕೆಲಸ ಮಾಡುವ ವಿಷಯ ವಿಮರ್ಶಕರು ಮತ್ತು ಸಂಕೀರ್ಣ ಯಂತ್ರಾಂಶದಲ್ಲಿ ಕೆಲಸ ಮಾಡುವ ಎಂಜಿನಿಯರ್ಗಳನ್ನು ಒಳಗೊಂಡಿರುತ್ತಾರೆ
ಗೂಗಲ್ನಿಂದಲೂ ಇದೇ ನಿರ್ಧಾರ ಸಾಧ್ಯತೆ
ಫೇಸ್ಬುಕ್ನ ಹೊರತಾಗಿ, ಗೂಗಲ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಈ ವರ್ಷದ ಕೊನೆಯವರಗೂ ಕೆಲಸ ಮಾಡಲು ಅವಕಾಶ ನೀಡುತ್ತದೆ ಎಂದು ಕೇಳಿಬಂದಿದೆ. ಫೇಸ್ಬುಕ್ನಂತೆಯೇ, ಗೂಗಲ್ ತನ್ನ ಉದ್ಯೋಗಿಗಳಿಗೆ ಕನಿಷ್ಠ ಜೂನ್ 1 ರವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುತ್ತದೆ ಎಂದು ಹೇಳಿದೆ.
ವರದಿಯ ಪ್ರಕಾರ, ಆಲ್ಫಾಬೆಟ್ ಇಂಕ್ ಸಿಇಒ ಸುಂದರ್ ಪಿಚೈ ಅವರು ಸಾಂಕ್ರಾಮಿಕ ರೋಗದಿಂದಾಗಿ ದೂರದಿಂದಲೇ ಕೆಲಸ ಮಾಡಲು ಸಮರ್ಥವಾಗಿರುವ ಎಲ್ಲ ಗೂಗಲರ್ಗಳು 2020 ರ ಅಂತ್ಯದವರೆಗೂ ಇದನ್ನು ಮುಂದುವರಿಸಬಹುದು ಎಂದು ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications