ಕೊರೊನಾವೈರಸ್ನಿಂದಾಗಿ ವಿಶ್ವದ ಆರ್ಥಿಕತೆಯು ದಿನೇ ದಿನೇ ಕಳೆಗುಂದುತ್ತಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳೇ ವೈರಸ್ ಕಾಟ ತಾಳಲಾಗದೆ ಲಾಕ್ಡೌನ್ ಆಗಿದೆ. ಭಾರತ ಕೂಡ ಏಪ್ರಿಲ್ 15ರವರೆಗೆ ಲಾಕ್ಡೌನ್ ಆಗಿದೆ.
ಹೀಗೆ ಜಗತ್ತೇ ಕೊರೊನಾ ಸೋಂಕಿನಿಂದ ಕಂಗೆಟ್ಟಿರುವುದು ದೊಡ್ಡ ಮಟ್ಟದ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಹೀಗಾಗಿಯೇ ವಿಶ್ವದ ಆರ್ಥಿಕತೆಯು ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದ
ತೀವ್ರವಾದ ಹಾನಿಯನ್ನು ಎದುರಿಸುತ್ತಿದ್ದು ಈಗಾಗಲೇ ಆರ್ಥಿಕ ಹಿಂಜರಿತವನ್ನು ಪ್ರವೇಶಿಸಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.

"ನಾವು 2020 ಮತ್ತು 2021 ರ ಬೆಳವಣಿಗೆಯ ನಿರೀಕ್ಷೆಗಳನ್ನು ಮರು ಮೌಲ್ಯಮಾಪನ ಮಾಡಿದ್ದೇವೆ. ನಾವು 2009 ಕ್ಕೆ ಹೋಲಿಸಿದರೆ ಈ ಬಾರಿ ಇನ್ನೂ ಕೆಟ್ಟ ಆರ್ಥಿಕ ಹಿಂಜರಿತವನ್ನು ಪ್ರವೇಶಿಸಿದ್ದೇವೆ ಎಂಬುದು ಈಗ ಸ್ಪಷ್ಟವಾಗಿದೆ. ನಾವು 2021 ರಲ್ಲಿ ಯೋಜನಾ ಚೇತರಿಕೆ ಕಾರ್ಯಕ್ರಮಗಳನ್ನು ಮಾಡುತ್ತೇವೆ" ಎಂದು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಐಎಂಎಫ್, ಅಂತರರಾಷ್ಟ್ರೀಯ ಹಣಕಾಸು ಮತ್ತು ಹಣಕಾಸು ಸಮಿತಿಯ ಆಡಳಿತ ಮಂಡಳಿಯ ಸಭೆಯ ನಂತರ ಜಾರ್ಜೀವಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . 189 ಸದಸ್ಯರನ್ನು ಪ್ರತಿನಿಧಿಸುವ ಈ ಕಮಿಟಿಯು COVID-19 ನಿಂದ ಜಗತ್ತಿಗೆ ಎದುರಾದ ಅಭೂತಪೂರ್ವ ಸವಾಲನ್ನು ಚರ್ಚಿಸಲು ನಡೆಸಲಾಯಿತು.
ಜಾಗತಿಕವಾಗಿ ತೀವ್ರವಾದ ಆರ್ಥೀಕ ಹಾನಿಯಿಂದಾಗಿ ಇದು 2009 ಕ್ಕಿಂತಲೂ ಹೆಚ್ಚು ವೆಚ್ಚದಾಯಕವಾಗಬಹುದು ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. ಆದರೆ ಅಂತರರಾಷ್ಟ್ರೀಯ ಸಮುದಾಯವು ಎಲ್ಲೆಡೆ ವೈರಸ್ ಅನ್ನು ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾದರೆ ಮತ್ತು ದ್ರವ್ಯತೆ ಸಮಸ್ಯೆಗಳನ್ನು ಪರಿಹರಿಸಿಕೊಂಡರೆ, 2021 ರಲ್ಲಿ ಚೇತರಿಕೆಯ ಕಾಣುವ ಲಕ್ಷಣಗಳಿವೆ ಎಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications