ದೇಶಾದ್ಯಂತ ಲಾಕ್ಡೌನ್ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಆದಾಗ್ಯೂ, ಲಾಕ್ಡೌನ್ನ ನಾಲ್ಕನೇ ಹಂತದಲ್ಲಿ ಭಾಗಶಃ ವಿಶ್ರಾಂತಿ ಇದೆ. ಆದರೆ, ಜಿಎಸ್ಟಿ ಸಂಗ್ರಹದ ಮೇಲೆ ಅದರ ಪರಿಣಾಮ ಕಂಡುಬಂದಿಲ್ಲ. ದೇಶದ ಪ್ರತಿಯೊಂದು ವ್ಯವಹಾರದ ಮೇಲೆ ಪ್ರಭಾವ ಬೀರಿರುವಂತೆ ಕೊರೊನಾವೈರಸ್ ಸರ್ಕಾರದ ಆದಾಯಕ್ಕೂ ಅಡ್ಡಗಾಲಿಟ್ಟಿದೆ.
ಲಾಕ್ಡೌನ್ ಹಿನ್ನಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹ ಈ ವರ್ಷದ ಏಪ್ರಿಲ್ನಲ್ಲಿ ಕುಸಿದಿದೆ. ಸಿಜಿಎ ಬಿಡುಗಡೆ ಮಾಡಿದ ಅಂಕಿ ಅಂಶಗಳು ಜಿಎಸ್ಟಿ ಸಂಗ್ರಹವು ಏಪ್ರಿಲ್ನಲ್ಲಿ 70 ಪರ್ಸೆಂಟ್ರಷ್ಟು ಕುಸಿದಿದೆ ಎಂದು ತೋರಿಸಿದೆ.

ಏಪ್ರಿಲ್ 2020 ಕ್ಕೆ ಬಿಡುಗಡೆಯಾದ ಈ ಮಾಹಿತಿಯು ಈ ತಿಂಗಳಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರದ ಪಾಲು 16,707 ಕೋಟಿ ರುಪಾಯಿಗಳಾಗಿದ್ದು, ಇದು ಹಿಂದಿನ ವರ್ಷದ 55,329 ಕೋಟಿ ರುಪಾಯಿಗಳಿಗಿಂತ 70% ಕಡಿಮೆಯಾಗಿದೆ ಎಂದು ತೋರಿಸುತ್ತದೆ. ಸಾಮಾನ್ಯವಾಗಿ ಸರ್ಕಾರ ಘೋಷಿಸುವ ಜಿಎಸ್ಟಿ ಕೇಂದ್ರ ಮತ್ತು ರಾಜ್ಯಗಳ ಸಂಗ್ರಹವನ್ನು ಒಳಗೊಂಡಿದೆ. ಆದಾಗ್ಯೂ, ಸಿಜಿಎ ದತ್ತಾಂಶವು ಜಿಎಸ್ಟಿ ಸಂಗ್ರಹದ ಕೇಂದ್ರದ ಪಾಲನ್ನು ಮಾತ್ರ ತೋರಿಸಿದೆ. ಇದಕ್ಕೂ ಮೊದಲು 2019 ರ ಏಪ್ರಿಲ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರ ಮತ್ತು ರಾಜ್ಯಗಳ ಪಾಲು 1,13,865 ಕೋಟಿ ರುಪಾಯಿ.
2020 ರ ಏಪ್ರಿಲ್ನಲ್ಲಿ ಕೇಂದ್ರದ ಜಿಎಸ್ಟಿ ಸಂಖ್ಯೆಯನ್ನು (16,707 ಕೋಟಿ ರು.) ಅಂದಾಜು ಮಾಡಿದರೆ, ಒಟ್ಟು ಜಿಎಸ್ಟಿ ಸಂಗ್ರಹ (ಕೇಂದ್ರ ಮತ್ತು ರಾಜ್ಯ) ಸುಮಾರು 34,300 ಕೋಟಿ ರುಪಾಯಿ. ಏಪ್ರಿಲ್ 2020 ರಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಇಷ್ಟು ದೊಡ್ಡ ಕುಸಿತವು ಕೊರೊನಾವೈರಸ್ ಸಾಂಕ್ರಾಮಿಕದಿಂದಾಗಿ ಹೇರಿದ ಲಾಕ್ ಡೌನ್ ಕಾರಣ ಎಂದು ಊಹಿಸಲಾಗಿದೆ.
ಕೊರೊನಾವೈರಸ್ ಹರಡುವಿಕೆಯ ದೃಷ್ಟಿಯಿಂದ ತೆರಿಗೆದಾರರ ಮೇಲಿನ ಹೊರೆ ಕಡಿಮೆ ಮಾಡಲು ಮಾರ್ಚ್ 24 ರಂದು ಸರ್ಕಾರ ಹಲವಾರು ಘೋಷಣೆಗಳನ್ನು ಮಾಡಿತು. ಐದು ಕೋಟಿ ರುಪಾಯಿಗಳಿಗಿಂತ ಕಡಿಮೆ ವಹಿವಾಟು ನಡೆಸುವ ಕಂಪನಿಗಳು, ಜಿಎಸ್ಟಿ ತಡವಾಗಿ ಸಲ್ಲಿಸಲು ಸಹ ಯಾವುದೇ ವಿಳಂಬ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ಪ್ರಕಟಣೆಗಳಲ್ಲಿ ತಿಳಿಸಲಾಗಿದೆ. ಅಲ್ಲದೆ, ಅವರ ಮೇಲೆ ಯಾವುದೇ ದಂಡ ವಿಧಿಸಲಾಗುವುದಿಲ್ಲ. ಐದು ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ವಹಿವಾಟು ನಡೆಸುವವರು ಜೂನ್ ಕೊನೆಯ ವಾರದವರೆಗೆ ರಿಟರ್ನ್ಸ್ ಸಲ್ಲಿಸಬಹುದು. ಆದಾಗ್ಯೂ 9% ಬಡ್ಡಿದರವನ್ನು ಪಾವತಿಸಬೇಕಾಗುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications