ಕೊರೊನಾವೈರಸ್ ಪರಿಣಾಮ ದೇಶಾದ್ಯಂತ ಲಾಕ್ಡೌನ್ ಆಗಿದೆ. ಏಪ್ರಿಲ್ 15ರವರೆಗೆ ಯಾರು ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ಎಲ್ಲಾ ಕಂಪನಿಗಳು, ಕೈಗಾರಿಕೆಗಳು ಈಗಾಗಲೇ ಉದ್ಯೋಗಿಗಳಿಗೆ, ಕಾರ್ಮಿಕರಿಗೆ ರಜೆ ನೀಡಿದೆ. ಬಹುತೇಕ ಕಂಪನಿಗಳು ವೇತನ ಕಡಿತಕ್ಕೆ ಯೋಜಿಸುತ್ತಿದೆ. ಈ ವೇಳೆ ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಉದ್ಯೋಗಿಗಳಿಗೆ ಎರಡು ಬಾರಿ ವೇತನ ನೀಡಲಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಕೊರೊನಾವೈರಸ್ ವಿರುದ್ಧ ಹೋರಾಡುವ ಕ್ರಮಗಳನ್ನು ಘೋಷಿಸಿದೆ. ತನ್ನ ಉದ್ಯೋಗಿಗಳು ಯಾರು 30,000 ಕ್ಕಿಂತ ಕಡಿಮೆ ಗಳಿಸುವವರಿಗೆ ತಿಂಗಳಿಗೆ ಎರಡು ಬಾರಿ ಸಂಬಳ ನೀಡಲಿದೆ. ಇದರಿಂದ ಉದ್ಯೋಗಿಗಳು ತಿಂಗಳ ಕೊನೆಯಲ್ಲಿ ಸಂಬಳ ಪಡೆಯುವುದಕ್ಕೆ ಮೊದಲೇ ಅದರ ಅರ್ಧ ಸಂಬಳವನ್ನು ಮೊದಲೇ ಪಡೆಯಲಿದ್ದಾರೆ.

"ತಿಂಗಳಿಗೆ 30,000 ರುಪಾಯಿಗಿಂತ ಕಡಿಮೆ ಆದಾಯ ಗಳಿಸುವವರಿಗೆ, ಅವರ ಹಣದ ಹರಿವನ್ನು ರಕ್ಷಿಸಲು ಮತ್ತು ಯಾವುದೇ ಹೆಚ್ಚಿನ ಆರ್ಥಿಕ ಹೊರೆ ತಗ್ಗಿಸಲು ತಿಂಗಳಿಗೆ ಎರಡು ಬಾರಿ ಸಂಬಳ ನೀಡಲಾಗುವುದು" ಎಂದು ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಹೇಳಿಕೆಯಲ್ಲಿ ತಿಳಿಸಿದೆ.
ಚೀನಾದ ವುಹಾನ್ ನಗರದಲ್ಲಿ ಹುಟ್ಟಿದ ಈ ಮಾರಕ ವೈರಸ್ ವಿಶ್ವಾದ್ಯಂತ 10,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತು. ಭಾರತ ಇದುವರೆಗೆ ಸುಮಾರು 500ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕು ಪ್ರಕರಣಗಳನ್ನು ವರದಿ ಮಾಡಿದೆ.
ಕೋವಿಡ್ -19 ವಿರುದ್ಧದ ಈ ಯೋಜನೆಯಲ್ಲಿ ರಿಲಯನ್ಸ್ ಫೌಂಡೇಶನ್, ರಿಲಯನ್ಸ್ ರಿಟೇಲ್, ಜಿಯೋ, ರಿಲಯನ್ಸ್ ಲೈಫ್ ಸೈನ್ಸಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ರಿಲಯನ್ಸ್ ಫ್ಯಾಮಿಲಿಯ ಎಲ್ಲಾ 6,00,000 ಉದ್ಯೋಗಿಗಳನ್ನು ಒಟ್ಟುಗೂಡಿಸಿ ಒಟ್ಟು ಸಾಮರ್ಥ್ಯಗಳನ್ನು ಆಧರಿಸಿ ರಿಲಯನ್ಸ್ ಈ ಯೋಜನೆಯನ್ನು ರೂಪಿಸಿದೆ ಎಂದು ಕಂಪನಿ ತಿಳಿಸಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications