ಸೌದಿ ಅರೇಬಿಯಾದಲ್ಲಿ ಮೂರು ತಿಂಗಳಿಂದ ಇದ್ದ ಲಾಕ್ ಡೌನ್ ಅನ್ನು ಭಾನುವಾರದಂದು (ಜೂನ್ 21, 2020) ತೆರವುಗೊಳಿಸಿದೆ. ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆಯಿಂದ ನಿರ್ಬಂಧ ತೆರವುಗೊಂಡಿದೆ. ಆದರೆ ಧಾರ್ಮಿಕ ಉದ್ದೇಶಗಳಿಗಾಗಿ ಪ್ರವಾಸ ಬರುವವರು, ಅಂತರರಾಷ್ಟ್ರೀಯ ಪ್ರವಾಸಿಗರು ಮತ್ತು ಸಾಮಾಜಿಕ ಕಾರ್ಯಕ್ರಮಗಳಿಗೆ 50ಕ್ಕೂ ಹೆಚ್ಚು ಜನರು ಒಂದೆಡೆ ಸೇರುವಂತಿಲ್ಲ ಎಂಬ ನಿಯಮ ಮುಂದುವರಿದಿದೆ.
ಕೊರೊನಾ ಹರಡುವುದನ್ನು ತಡೆಯುವ ಉದ್ದೇಶದಿಂದ ಮಾರ್ಚ್ ನಲ್ಲಿ ಸೌದಿ ಅರೇಬಿಯಾ ಕಠಿಣ ನಿರ್ಬಂಧಗಳನ್ನು ಹೇರಿತ್ತು. ಕೆಲವು ಪಟ್ಟಣ ಹಾಗೂ ನಗರಗಳಲ್ಲಿ ಇಪ್ಪತ್ನಾಲ್ಕು ಗಂಟೆಗಳ ಕರ್ಫ್ಯೂ ಹೇರಿತ್ತು. ಕಳೆದ ಮೇ ತಿಂಗಳಲ್ಲಿ ಘೋಷಣೆ ಮಾಡಿದ್ದಂತೆ ಮೂರು ಹಂತಗಳಲ್ಲಿ ಸಂಚಾರ ಮತ್ತಿತರ ವಿಚಾರಕ್ಕೆ ವಿನಾಯಿತಿ ನೀಡಲಾಗಿದೆ.
ಆದರೆ, ಮೇ 28ರಂದು ಸಂಚಾರಕ್ಕೆ ವಿನಾಯಿತಿ ನೀಡಿದ ಮೇಲೆ ಕೊರೊನಾ ಸೋಂಕಿತ ಪ್ರಕರಣದಲ್ಲಿ ಗಮನಾರ್ಹವಾದ ಹೆಚ್ಚಳವಾಗಿದೆ. ಈ ತನಕ ಒಟ್ಟು 1,54,223 ಪ್ರಕರಣಗಳು ದಾಖಲಾಗಿದ್ದರೆ, 1230 ಸಾವಿನ ಪ್ರಕರಣಗಳು ವರದಿಯಾಗಿವೆ. ಆರು ರಾಷ್ಟ್ರಗಳ ಗಲ್ಫ್ ಕೋ ಆಪರೇಷನ್ ಕೌನ್ಸಿಲ್ ಪೈಕಿ ಸೌದಿ ಅರೇಬಿಯಾದಲ್ಲೇ ಕೊರೊನಾ ಪ್ರಕರಣ ಹೆಚ್ಚು ದಾಖಲಾಗಿದೆ.

ವಾರ್ಷಿಕ ಹಜ್ ಯಾತ್ರೆಗೆ ಭೇಟಿ ನೀಡುವವರ ಸಂಖ್ಯೆಯನ್ನು ಮಿತಿಗೊಳಿಸಲು ಸೌದಿ ಅರೇಬಿಯಾ ಯೋಜನೆ ಮಾಡಿದೆ. ವಾರಗಳ ಕಾಲ ನಡೆಯುವ ಮೆಕ್ಕಾ ಮದೀನ ಯಾತ್ರೆಗೆ ಇಪ್ಪತ್ತೈದು ಲಕ್ಷ ಮಂದಿ ಭೇಟಿ ನೀಡುತ್ತಿದ್ದರು. ಮುಸ್ಲಿಮರಲ್ಲಿ ಯಾರಿಗೆಲ್ಲ ಸಾಧ್ಯವಿದೆಯೋ ಅಂಥವರು ಜೀವಮಾನದಲ್ಲಿ ಒಮ್ಮೆಯಾದರೂ ಕೈಗೊಳ್ಳಬೇಕಾದ ಪವಿತ್ರ ಯಾತ್ರೆ ಇದು.
ಸೌದಿ ಅರೇಬಿಯಾವು ಮಾರ್ಚ್ ನಲ್ಲಿ ಮನವಿ ಮಾಡಿ, ಹಜ್ ಯಾತ್ರೆಯನ್ನು ತಡೆಯುವ ಬಗ್ಗೆ ಕೇಳಿಕೊಂಡಿತ್ತು. ಜತೆಗೆ ಮುಂದಿನ ಆದೇಶದ ತನಕ ಉಮ್ರಾ ಯಾತ್ರೆಯನ್ನು ಅಮಾನತು ಮಾಡಲು ಸಹ ಹೇಳಿತ್ತು
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications