ಸಿಂಗಾಪೂರ್ ಸರ್ಕಾರವು ಕೊರೊನಾ ವೈರಾಣು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ತೀರ್ಮಾನ ಕೈಗೊಂಡಿದೆ. ಏಪ್ರಿಲ್ 7ನೇ ತಾರೀಕಿನಿಂದ ಶಾಲೆ, ಉದ್ಯೋಗ ಸ್ಥಳಗಳನ್ನು ಮುಚ್ಚಲು ನಿರ್ಧರಿಸಿದೆ. ಅಗತ್ಯ ಸೇವೆಗಳು, ಮುಖ್ಯ ಆರ್ಥಿಕ ವಲಯಗಳನ್ನು ಹೊರತುಪಡಿಸಿ ಮಂಗಳವಾರದಿಂದ ಉಳಿದೆಲ್ಲವನ್ನು ಒಂದು ತಿಂಗಳು ಮುಚ್ಚಲಾಗುವುದು.
ಈ ಬಗ್ಗೆ ಶುಕ್ರವಾರ ಸಿಂಗಾಪೂರ್ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆರ್ಥಿಕತೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕೆಲವು ಕ್ರಮಗಳನ್ನು ಮುಂದಿನ ವಾರ ಘೋಷಿಸುವುದಾಗಿ ತಿಳಿಸಿದ್ದಾರೆ. ಇತ್ತೀಚಿನ ವಾರಗಳಲ್ಲಿ ಸಿಂಗಾಪೂರ್ ನಲ್ಲಿ ಕೊರೊನಾ ವೈರಾಣು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಸಿಂಗಾಪೂರ್ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬ ವಿವರ ಇಲ್ಲಿದೆ:
* ಮುಂದಿನ ವಾರದಿಂದ ಕ್ಯಾಸಿನೋಗಳು, ಥೀಮ್ ಪಾರ್ಕ್ ಗಳು ಮುಚ್ಚಲಾಗುವುದು
* ಆಹಾರ ಮಳಿಗೆ, ಮಾರ್ಕೆಟ್, ಸೂಪರ್ ಮಾರ್ಕೆಟ್, ಕ್ಲಿನಿಕ್, ಆಸ್ಪತ್ರೆ, ಸಂಚಾರ ವ್ಯವಸ್ಥೆ, ಬ್ಯಾಂಕಿಂಗ್ ಮತ್ತಿತರ ಅಗತ್ಯ ಸೇವೆಗಳು ಲಭ್ಯವಿರುತ್ತವೆ.
* ಏಪ್ರಿಲ್ 7ರಿಂದ ಎಲ್ಲ ರೆಸ್ಟೋರೆಂಟ್ ಗಳು, ಕಾಫೀ ಶಾಪ್ ಗಳು, ಫುಡ್ ಕೋರ್ಟ್ ಗಳು, ಇತರ ಆಹಾರ- ಪಾನೀಯ ಮಳಿಗೆಗಳಿಂದ ಡೆಲಿವರಿ ಅಥವಾ ತೆಗೆದುಕೊಂಡು ಹೋಗುವ ಸೇವೆ ಮಾತ್ರ ಇರಲಿದೆ.
* ಜಾಗತಿಕ ಸರಬರಾಜು ಜಾಲಗಳು ಮುಚ್ಚುವುದಿಲ್ಲ.
* ಪ್ರೀ ಸ್ಕೂಲ್ ಮತ್ತು ವಿದ್ಯಾರ್ಥಿಗಳ ಕಾಳಜಿ ಮಾಡೂವ ಕೇಂದ್ರಗಳು ಮುಚ್ಚಲಾಗುತ್ತವೆ. ಆದರೆ ಉದ್ಯೋಗ ಮಾಡುವ ಪೋಷಕರು, ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವಿಲ್ಲದವರ ಸಲುವಾಗಿ ನಿಯಮಿತವಾಗಿ ಸೇವೆ ಒದಗಿಸುತ್ತವೆ.
* ಏಪ್ರಿಲ್ 5ನೇ ತಾರೀಕಿನಿಂದ ಮರುಬಳಕೆ ಮಾಡಬಹುದಾದ ಮಾಸ್ಕ್ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುವುದು.
ಅಂದ ಹಾಗೆ, ಸಿಂಗಾಪೂರ್ ಸರ್ಕಾರವು ವ್ಯಾಪಾರ- ವ್ಯವಹಾರ, ಕುಟುಂಬಗಳನ್ನು ಬೆಂಬಲಿಸುವ ಉದ್ದೇಶದಿಂದ ಯೋಜನೆ ಘೋಷಿಸುವ ನಿರೀಕ್ಷೆ ಇದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications