ಕರೋನವೈರಸ್ ಸಾಂಕ್ರಾಮಿಕ ರೋಗದಿಂದ ಹೆಚ್ಚಿನ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅಲ್ಲದೇ ವೇತನ ಕಡಿತವನ್ನು ಎದುರಿಸಿದ್ದಾರೆ.
ಈ ಸಮಯದಲ್ಲಿ ಇತರ ಖರ್ಚು ಏರಿಕೆಯನ್ನು ಕಂಡಿರುವುದರಿಂದ ಅನೇಕ ಜನರು ತಮ್ಮ ಉಳಿತಾಯವನ್ನು ಹಿಂತೆಗೆಯಲು ಆರಂಭಿಸಿದ್ದಾರೆ. ಈ ಹಲವಾರು ಅಂಶಗಳು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಯಿಂದ ದೊಡ್ಡ ಪ್ರಮಾಣದಲ್ಲಿ ಉಳಿಯತಾಯ ಹಿಂಪಡೆಯಲು ಕಾರಣವಾಗಿವೆ.
ದಿ ಎಕನಾಮಿಕ್ ಟೈಮ್ಸ್ ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಸಾಂಕ್ರಾಮಿಕ ರೋಗದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ - ಏಪ್ರಿಲ್ ನಿಂದ ಜುಲೈ ವರೆಗೆ ಸುಮಾರು 8 ಮಿಲಿಯನ್ ಇಪಿಎಫ್ಒ ಚಂದಾದಾರರು 30,000 ಕೋಟಿ ರೂ ಹಿಂತೆಗೆದಿದ್ದಾರೆ.
ನಿಧಿಯ ಗಳಿಕೆಯ ಮೇಲೆ ತೀವ್ರ ಪರಿಣಾಮ
ಕಳೆದ ನಾಲ್ಕು ತಿಂಗಳುಗಳಲ್ಲಿ ಭಾರಿ ಪ್ರಮಾಣದ ಉಳಿತಾಯ ಹೊರಹೋಗುವಿಕೆಯು ನಿಧಿಯ ಗಳಿಕೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗ ನಷ್ಟ, ಸಂಬಳ ಕಡಿತ ಮತ್ತು ಇತರ ವೆಚ್ಚಗಳಿಂದಾಗಿ ವಾಪಸಾತಿ ಪ್ರಮಾಣ ಹೆಚ್ಚಾಗಿದೆ.
ಕೋವಿಡ್ ವಿಂಡೋ ಅಡಿಯಲ್ಲಿ
ಕೋವಿಡ್ ವಿಂಡೋ ಅಡಿಯಲ್ಲಿ ಸುಮಾರು ಮೂರು ಮಿಲಿಯನ್ ಫಲಾನುಭವಿಗಳು 8,000 ಕೋಟಿ ರೂ.ಗಳನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಉಳಿದ 22,000 ಕೋಟಿ ರೂಗಳನ್ನು 5 ಮಿಲಿಯನ್ ಇಪಿಎಫ್ಒ ಚಂದಾದಾರರು ಸಾಮಾನ್ಯ ವಿಂಡೋ ಅಡಿಯಲ್ಲಿ ಹಿಂತೆಗೆದುಕೊಂಡಿದ್ದಾರೆ.
ನಿವೃತ್ತಿ ನಿಧಿ ಸಂಸ್ಥೆಗಳ ದಕ್ಷತೆಯ ಮೇಲೆ ತೀವ್ರ ಪರಿಣಾಮ
ಭಾರತದಲ್ಲಿ ರಾಷ್ಟ್ರವ್ಯಾಪಿ ಲಾಕ್ಡೌನ್ ಘೋಷಣೆಯಾದ ಕೂಡಲೇ ಹಣ ಹಿಂಪಡೆಯಲು ವಿಶೇಷ ಕೋವಿಡ್ ವಿಂಡೋವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಆದಾಗ್ಯೂ, ನಿಧಿಯಿಂದ ಹೊರಹೋಗುವಿಕೆಯ ತೀವ್ರ ಏರಿಕೆ ನಿವೃತ್ತಿ ನಿಧಿ ಸಂಸ್ಥೆಗಳ ದಕ್ಷತೆಯ ಮೇಲೆ ತೀವ್ರ ಪರಿಣಾಮ ಬೀರಬಹುದು ಎನ್ನಲಾಗಿದೆ.
ಹಿಂಪಡೆಯುವಿಕೆ ವೇಗವಾಗಿ ಹೆಚ್ಚುತ್ತಿದೆ.
ದೇಶದಲ್ಲಿ ಕರೋನವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುವುದರೊಂದಿಗೆ ಇಪಿಎಫ್ಒ ಹಿಂಪಡೆಯುವಿಕೆ ವೇಗವಾಗಿ ಹೆಚ್ಚುತ್ತಿದೆ. ಆರ್ಬಿಐ ನೀತಿ ದರಗಳನ್ನು ಕಡಿತಗೊಳಿಸುತ್ತಿರುವ ಸಮಯದಲ್ಲಿ ಇಪಿಎಫ್ಒ ದರಗಳು ಈ ವರ್ಷ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ ಎಂದು ಹಲವಾರು ವರದಿಗಳು ತಿಳಿಸಿವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications