ಕೊರೊನಾವೈರಸ್ ಭಾರತವಷ್ಟೇ ಅಲ್ಲದೆ ವಿಶ್ವದ ಆರ್ಥಿಕತೆ ಭಾರೀ ಪರಿಣಾಮ ಬೀರಲಿದ್ದು, ಜಾಗತಿಕ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ತನ್ನ ಇತ್ತೀಚಿನ ಹಣಕಾಸು ನೀತಿ ವರದಿಯಲ್ಲಿ ಹೇಳಿದೆ. ಕೊರೊನಾವೈರಸ್ನಿಂದಾಗಿ ಭವಿಷ್ಯದಲ್ಲಿ ವಿಶ್ವದ ಆರ್ಥಿಕತೆ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ. ಲಾಕ್ಡೌನ್ನಿಂದಾಗಿ ದೇಶದ ಆರ್ಥಿಕ ಚಟುವಟಿಕೆ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ.
2019-20ನೇ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ದರ 5.0 ಪರ್ಸೆಂಟ್ರಷ್ಟು ಇರುತ್ತದೆ ಎಂದು ಆರ್ಬಿಐ ಅಂದಾಜು ಮಾಡಿತ್ತು. ಆದರೆ 2020-21ರ ಪ್ರಸಕ್ತ ಆರ್ಥಿಕ ವರ್ಷದ ಜಿಡಿಪಿ ಬೆಳವಣಿಗೆ ದರ 5.5 ಪರ್ಸೆಂಟ್ರಷ್ಟು ಇರುತ್ತದೆ ಎಂಬ ಅಂದಾಜನ್ನು ಆರ್ಬಿಐ ಮಾಡಿದೆ.

ಕೊರೊನಾ ವೈರಸ್ನಿಂದ ಏಕಾಏಕಿ ದೇಶದ ಆರ್ಥಿಕ ಸ್ಥಿತಿಯ ಚಿತ್ರಣವನ್ನೇ ಬದಲಾಯಿಸಿದೆ. ವೈರಸ್ ಹರಡುವುದಕ್ಕಿಂತ ಮೊದಲು 2020-21ರ ಆರ್ಥಿಕ ಬೆಳವಣಿಗೆಯ ದೃಷ್ಟಿಕೋನ ಅಭಿವೃದ್ಧಿಯ ಕಡೆ ಹೆಜ್ಜೆ ಹಾಕುತ್ತಿತ್ತು. ಆದರೆ, ಕೊರೊನಾ ಈ ಆರ್ಥಿಕ ದೃಷ್ಟಿಕೋನವನ್ನು ತೀವ್ರ ಬದಲಿಸಿದ್ದು, ಕುಸಿತದ ಹಾದಿಯನ್ನು ತೋರಿಸಿದೆ. ಲಾಕ್ಡೌನ್ ಪರಿಣಾಮ ಜಾಗತಿಕ ಪೂರೈಕೆ ಸರಪಳಿಗಳು, ಪ್ರಯಾಣ ಮತ್ತು ಪ್ರವಾಸೋದ್ಯಮ ಹಾಗೂ ಅನೇಕ ಕ್ಷೇತ್ರಗಳ ಮೇಲೆ ಆಗುತ್ತಿದೆ. ಇದರಿಂದ ಜಾಗತಿಕ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ರಿಸರ್ವ್ ಬ್ಯಾಂಕ್ ವರದಿಯಲ್ಲಿ ವಿವರಿಸಿದೆ.
ಮಾರ್ಚ್ 25ರಿಂದ ಭಾರತ ರಾಷ್ಟ್ರವ್ಯಾಪಿ ಲಾಕ್ಡೌನ್ನಲ್ಲಿದ್ದು, ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆ ಬಹಳಷ್ಟಿದೆ. ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶವ್ಯಾಪಿ ಲಾಕ್ಡೌನ್ ಘೋಷಿಸಿರುವುದರಿಂದ ನೇರವಾಗಿ ಭಾರತದ ಆರ್ಥಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರುತ್ತದೆ. ಲಾಕ್ಡೌನ್ನಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಒಟ್ಟಾರೆ ಬೇಡಿಕೆ ಕಡಿಮೆಯಾಗುತ್ತದೆ ಎಂದು ಆರ್ಬಿಐ ವರದಿ ಹೇಳಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications