ಕೊರೊನಾವೈರಸ್ ಲಾಕ್ಡೌನ್ ಪರಿಣಾಮ ಆನ್ಲೈನ್ ಫುಡ್ ಡೆಲಿವರಿ ಸಂಸ್ಥೆ ಜೊಮಾಟೊ ತನ್ನ 13 ಪರ್ಸೆಂಟ್ರಷ್ಟು ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿದೆ.
ಕಂಪನಿಯಲ್ಲಿ ಸುಮಾರು 4,000 ಉದ್ಯೋಗಿಗಳು ವಿವಿಧ ಹುದ್ದೆಗಳಲ್ಲಿದ್ದು ಅದರಲ್ಲಿ 520 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಜೊಮಾಟೊ ತೀರ್ಮಾನಿಸಿದೆ. ಈ ಕುರಿತಂತೆ ಜೊಮಾಟೊ ಸ್ಥಾಪಕ ಮತ್ತು ಸಿಇಒ ದೀಪಿಂದರ್ ಗೋಯಲ್ ಅವರು ಕಂಪನಿಯ ವ್ಯವಹಾರದ ಹಲವು ಅಂಶಗಳು ಕಳೆದ ಎರಡು ತಿಂಗಳುಗಳಲ್ಲಿ ಗಮನಾರ್ಹವಾಗಿ ಬದಲಾಗಿವೆ ಮತ್ತು ಈ ಹಲವು ಬದಲಾವಣೆಗಳು ಶಾಶ್ವತವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಬ್ಲಾಗ್ ಪೋಸ್ಟ್ನಲ್ಲಿ ಬರೆದಿದ್ದಾರೆ.

"ನಾವು ಜೊಮಾಟೋವನ್ನು ಕೇಂದ್ರೀಕೃತ ಕಂಪನಿಯಾಗಿ ನಿರ್ಮಿಸುವುದನ್ನು ಮುಂದುವರಿಸುತ್ತಿದ್ದರೂ, ನಮ್ಮ ಎಲ್ಲಾ ಉದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವಿದೆ ಎಂದು ಹೇಳಲು ಬರುವುದಿಲ್ಲ. ನಮ್ಮ ಎಲ್ಲ ಸಹೋದ್ಯೋಗಿಗಳಿಗೆ ಸವಾಲಿನ ವಾತಾವರಣದಲ್ಲಿ ಕೆಲಸ ನಿರ್ವಹಿಸುವುದನ್ನು ತರಬೇತಿ ನೀಡಬೇಕಿದೆ. ಆದರೆ ನಮ್ಮ ಒಟ್ತಾರೆ ಉದ್ಯೋಗಿಗಳ ಪೈಕಿ 13 ಪರ್ಸೆಂಟ್ರಷ್ಟು ಜನರಿಗೆ ಅಂತಹಾ ಸವಾಲಿನ ವಾತಾವರಣದ ಕೆಲಸ ನೀಡಲು ನಮ್ಮಿಂದ ಸಾಧ್ಯವಿಲ್ಲ. ಹಾಗಾಗಿ ಯಾರಿಗೆ ಈ ಆದೇಶದಿಂದ ಪರಿಣಾಮ ಬೀರಬಹುದೋ ಅವರಿಗೆ ಮುಂದಿನ 24 ಗಂಟೆಗಳಲ್ಲಿ ಲೀಡರ್ ಶಿಪ್ ಟೀಂ ನೊಂದಿಗೆ ಸಂಪರ್ಕಿಸಲು ಕರೆ ಬರುತ್ತದೆ."
ಕೋವಿಡ್ -19 ತನ್ನ ವ್ಯವಹಾರದ ಮೇಲೆ ತೀವ್ರ ಪರಿಣಾಮ ಬೀರಿದ್ದರಿಂದ ಜೊಮಾಟೊದಲ್ಲಿ ಇನ್ನು ಮುಂದೆ ಯಾವುದೇ ಕೆಲಸವಿಲ್ಲದ ನಮ್ಮ ಎಲ್ಲ ಉದ್ಯೋಗಿಗಳು ಮುಂದಿನ 6 ತಿಂಗಳವರೆಗೆ ಉಳಿದ ಸಂಸ್ಥೆಗೆ 50 ಪರ್ಸೆಂಟ್ ವೇತನ ಕಡಿತವನ್ನು ಕೈಗೊಳ್ಳಲಿದೆ ಎಂದು ಹೇಳಿದರು. ವಜಾಗೊಳಿಸುವಿಕೆಯಿಂದ ಬಳಲುತ್ತಿರುವ ಜನರು ಮುಂದಿನ ಆರು ತಿಂಗಳವರೆಗೆ ಆರೋಗ್ಯ ವಿಮೆಯ ಜೊತೆಗೆ ಅವರ ಅರ್ಧದಷ್ಟು ಸಂಬಳವನ್ನು ಪಡೆಯುತ್ತಾರೆ ಅಥವಾ ಅವರ ಮುಂದಿನ ಉದ್ಯೋಗವನ್ನು ಕಂಡುಕೊಳ್ಳುವವರೆಗೆ, ಯಾವುದು ಮೊದಲಿನದು ಅದು ಅನ್ವಯಿಸುತ್ತದೆ.
ಕಳೆದ ಒಂದು ವರ್ಷದಲ್ಲಿ ಜೊಮಾಟೊ ಸಿಬ್ಬಂದಿಯನ್ನು ವಜಾಗೊಳಿಸುವುದು ಇದು ಎರಡನೇ ಬಾರಿ. ಸೆಪ್ಟೆಂಬರ್ 2019 ರಲ್ಲಿ, ಕಂಪನಿಯು ತನ್ನ ಗ್ರಾಹಕ ಬೆಂಬಲ ತಂಡದಿಂದ 540 ಉದ್ಯೋಗಿಗಳನ್ನು ಅಥವಾ ಆ ಸಮಯದಲ್ಲಿ 10% ಉದ್ಯೋಗಿಗಳನ್ನು ವಜಾ ಮಾಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications