ನಾಗ್ಪುರ್, ಜೂನ್ 11: ಕೋವಿಡ್ ಪಿಡಗಿನಿಂದಾಗಿ ಭಾರತದ ಆರ್ಥಿಕತೆಗೆ ದೊಡ್ಡ ನಷ್ಟವುಂಟಾಗಿದೆ. ಇದರಿಂದ ಹೊರ ಬರುವುದು ಹೇಗೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಲೆ ಕೆಡಿಸಿಕೊಳ್ಳುತ್ತಿವೆ. ಆದರೆ, ಉಂಟಾದ ನಷ್ಟ ನೋಡಿ ಸರ್ಕಾರಗಳು ತಲೆ ಮೇಲೆ ಕೈ ಹೊತ್ತು ಕುಳಿತುಕೊಂಡಿವೆ.
ಕೋವಿಡ್ ನಿಂದಾಗಿ ಭಾರತವು ಆದಾಯದಲ್ಲಿ 10 ಲಕ್ಷ ಕೋಟಿ ರುಪಾಯಿಗಳಷ್ಟು ನಷ್ಟವನ್ನು ಎದುರಿಸುತ್ತಿದೆ ಎಂದು ಸ್ವತಃ ಕೇಂದ್ರ ಕೈಗಾರಿಕಾ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪರಿಸ್ಥಿತಿ ಎಷ್ಟು ಭೀಕರವಾಗಿದೆ ಎಂದರೆ ಮುಂದಿನ ತಿಂಗಳು ಸಂಬಳ ನೀಡಲು ಕೆಲವು ರಾಜ್ಯಗಳಿಗೆ ಹಣವಿಲ್ಲ ಎಂದು ಅವರು ಹೇಳಿದ್ದಾರೆ.
ಕೊರೊನಾವೈರಸ್ ಬಿಕ್ಕಟ್ಟಿನಿಂದ ದೇಶವು 10 ಲಕ್ಷ ಕೋಟಿ ರೂ ಅಥವಾ ಭಾರತದ ಜಿಡಿಪಿಯ ಶೇಕಡಾ 5 ರಷ್ಟು ಆದಾಯವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ನಾಗ್ಪುರದಲ್ಲಿ ಬಿಜೆಪಿಯ ಜನ ಸಂವಾದ ವಿಡಿಯೋ ಕಾನ್ಪರೆನ್ಸ್ ಉದ್ದೇಶಿಸಿ ಮಾತನಾಡಿದ್ದಾರೆ.
ಪರಿಸ್ಥಿತಿಯನ್ನು ಸಕಾರಾತ್ಮಕತೆಯೊಂದಿಗೆ ಎದುರಿಸಬೇಕಾಗುತ್ತದೆ
''ನಾವು ಪರಿಸ್ಥಿತಿಯನ್ನು ಸಕಾರಾತ್ಮಕತೆಯೊಂದಿಗೆ ಎದುರಿಸಬೇಕಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ. ನಾವೆಲ್ಲರೂ ಕಠಿಣ ಸಮಯವನ್ನು ಎದುರಿಸುತ್ತಿದ್ದೇವೆ. ನಾವು ದೊಡ್ಡ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ನಕಾರಾತ್ಮಕತೆ, ಹತಾಶೆ ಮತ್ತು ಭಯದಿಂದ ನಾವು ಅದನ್ನು ಎದುರಿಸಲು ಸಾಧ್ಯವಿಲ್ಲ. ನಾವು ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯೊಂದಿಗೆ ಹೋರಾಡಿ, ಬಿಕ್ಕಟ್ಟನ್ನು ಮೆಟ್ಟಿ ನಿಲ್ಲಬೇಕಿದೆ'' ಎಂದಿದ್ದಾರೆ.
ಶೇಕಡಾ 5 ರಷ್ಟು ಕುಗ್ಗುತ್ತದೆ
ಏತನ್ಮಧ್ಯೆ, ಎಸ್ & ಪಿ ಗ್ಲೋಬಲ್ ರೇಟಿಂಗ್ಸ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 5 ರಷ್ಟು ಕುಗ್ಗುತ್ತದೆ ಎಂದು ಮುನ್ಸೂಚನೆ ನೀಡಿದೆ. ಆದಾಗ್ಯೂ, ಜಿಡಿಪಿ ಬೆಳವಣಿಗೆಯನ್ನು 2021-22ರಲ್ಲಿ ಶೇ 8.5 ಮತ್ತು 2022-23ರಲ್ಲಿ ಶೇ 6.5 ರಷ್ಟು ಇರಲಿದೆ ಎಂದು ಅದು ಅಂದಾಜಿಸಿದೆ.
ಜಿಡಿಪಿ ದರ ಏರಿಕೆ ಕಾಣಲಿದೆ
ಒಟ್ಟಿನಲ್ಲಿ ಕೆಲ ಆರ್ಥಿಕ ತಜ್ಞರು ಲಾಕ್ಡೌನ್ ಪರಿಣಾಮವನ್ನು ಭಾರತ ಎದುರಿಸುವಲ್ಲಿ ಧೀರ್ಘಾವಧಿ ಬೇಕು ಎನ್ನುತ್ತಿದ್ದರೆ, ಕೆಲ ರೇಟಿಂಗ್ ಏಜನ್ಸಿಗಳು 20 ಲಕ್ಷ ಕೋಟಿ ರು ಪ್ಯಾಕೇಜ್ ನ್ನೇ ಆಧಾರವಾಗಿಟ್ಟುಕೊಂಡು ಜಿಡಿಪಿ ದರ ಭಾರೀ ಏರಿಕೆ ಕಾಣಲಿದೆ ಎಂದು ಹೇಳಿರುವುದು ಆಶ್ಚರ್ಯ ಮೂಡಿಸಿದೆ
ಮತ್ತೆ ಲಾಕ್ಡೌನ್ ಮಾಡಬೇಕಾಗುತ್ತದೆ
ಇನ್ನೊಂದೆಡೆ ಜನರು ನಿಯಮಗಳನ್ನು ಪಾಲಿಸಲು ವಿಫಲವಾದರೆ, ಮತ್ತೆ ಲಾಕ್ ಡೌನ್ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ. ಹೀಗಾಗಿ ಆರ್ಥಿಕತೆಯ ಮೇಲೆ ಬಿದ್ದಿರುವ ಕರಿನೆರಳು ಹಿಂದೆ ಸರಿಯುವಂತೆ ಕಾಣುತ್ತಿಲ್ಲ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications