ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಎದುರಾಗಿರುವ ಕೊರೊನಾ ವೈರಸ್ ಭೀತಿಯು ಸೂರತ್ನ ವಜ್ರ ಉದ್ಯಮಕ್ಕೂ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ತಿಂಗಳು ಹಾಂಕಾಂಗ್ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಆಭರಣ ಪ್ರದರ್ಶನವು ರದ್ದುಗೊಳಿಸುವ ಸಾಧ್ಯತೆಯಿದ್ದು, ಹಾಗೇನಾದ್ರು ಆಗಿದ್ದಲ್ಲಿ ಸೂರತ್ನ ವಜ್ರ ಉದ್ಯಮಕ್ಕೆ ಸುಮಾರು 8,000 ಕೋಟಿಯಷ್ಟು ನಷ್ಟವಾಗುವ ಭೀತಿ ಎದುರಾಗಿದೆ.
ಸೂರತ್ ವಜ್ರ ಉದ್ಯಮಕ್ಕೆ ಹಾಂಕಾಂಗ್ ಒಂದು ಪ್ರಮುಖ ವ್ಯಾಪಾರ ಕೇಂದ್ರವಾಗಿದೆ. ಆದರೆ ಏಕಾಏಕಿ ಕೊರೊನಾವೈರಸ್ ಭೀತಿ ಎಲ್ಲೆಡೆ ಹರಡಿದ್ದು ಮಾರ್ಚ್ ಮೊದಲ ವಾರದವರೆಗೆ ಶಾಲಾ-ಕಾಲೇಜುಗಳನ್ನು ಅಲ್ಲಿ ಮುಚ್ಚಲಾಗಿದೆ. ಜೊತೆಗೆ ಕೊರೊನಾವೈರಸ್ ಭೀತಿಯು ವ್ಯಾಪಾರ-ವಹಿವಾಟು ಮೇಲೂ ಪರಿಣಾಮ ಬೀರಿದೆ.

ಜೆಮ್ಸ್ ಮತ್ತು ಜ್ಯುವೆಲ್ಲರಿ ರಫ್ತು ಉತ್ತೇಜನ ಮಂಡಳಿಯ (ಜಿಜೆಇಪಿಸಿ) ಪ್ರಾದೇಶಿಕ ಅಧ್ಯಕ್ಷ ದಿನೇಶ್ ನವಡಿಯಾ ಅವರ ಪ್ರಕಾರ ಸುಮಾರು 50,000 ಕೋಟಿ ರುಪಾಯಿ ಮೌಲ್ಯದ ವಜ್ರಗಳನ್ನು ಪ್ರತಿ ವರ್ಷ ಹಾಂಕಾಂಗ್ ರಫ್ತು ಮಾಡಲಾಗುತ್ತದೆ.
"ಸೂರತ್ನಿಂದ ರಫ್ತು ಆಗುವ ವಜ್ರದ ಒಟ್ಟು ರಫ್ತಿನಲ್ಲಿ 37 ಪರ್ಸೆಂಟ್ರಷ್ಟಿದೆ. ಈಗ, ಕೊರೊನಾವೈರಸ್ ಹೆದರಿಕೆಯಿಂದಾಗಿ, ಹಾಂಗ್ ಕಾಂಗ್ ಒಂದು ತಿಂಗಳ ರಜೆಯನ್ನು ಘೋಷಿಸಿದೆ. ಅಲ್ಲಿ ಕಚೇರಿಗಳನ್ನು ಹೊಂದಿರುವ ಗುಜರಾತಿ ವ್ಯಾಪಾರಿಗಳು ಭಾರತಕ್ಕೆ ಹಿಂತಿರುಗುತ್ತಿದ್ದಾರೆ" ಎಂದು ದಿನೇಶ್ ನವಡಿಯಾ ಹೇಳಿದ್ದಾರೆ.
ಇದರ ಜೊತೆಗೆ ಸೂರತ್ ವಜ್ರ ಉದ್ಯಮವು ಫೆಬ್ರವರಿ ಮತ್ತು ಮಾರ್ಚ್ ತಿಂಗಳಿಗೆ ಸುಮಾರು 8,000 ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸುತ್ತಿದೆ ಎಂದು ಅವರು ಹೇಳಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications