ಚೀನಾದಲ್ಲಿ ತಲೆದೂರಿರುವ ಕೊರೊನಾವೈರಸ್ ಜನರಲ್ಲಿ ಸಾವಿನ ಆತಂಕ ಮೂಡಿಸಿರುವುದಷ್ಟೇ ಅಲ್ಲದೆ ಚೀನಾದ ಆರ್ಥಿಕತೆಯ ಮೇಲೂ ಪರಿಣಾಮ ಬೀರಬಹುದು ಎಂದು ಮೂಡಿಸ್ ಅಂದಾಜಿಸಿದೆ.
ಅಮೆರಿಕಾ ಮೂಲದ ಹಣಕಾಸು ಮತ್ತು ಸಾಲದ ಬದ್ಧತೆ ಈಡೇರಿಸುವ ಸಾಮರ್ಥ್ಯ ಮೌಲ್ಯಮಾಪನ ಸಂಸ್ಥೆಯಾದ ಮೂಡಿಸ್, ಕೊರೊನಾವೈರಸ್ನಿಂದಾಗಿ ಆಗಿರುವ ಅಡ್ಡಿ ಆತಂಕವು ಸುಲಭವಾಗಿ ಸಾರಿಗೆ, ಸಗಟು ಮತ್ತು ಚಿಲ್ಲರೆ ವ್ಯಾಪಾರ, ಉತ್ಪಾದನೆ, ರಿಯಲ್ ಎಸ್ಟೇಟ್ ಮತ್ತು ಮನರಂಜನೆ, ಹಣಕಾಸು ವಲಯದಂತಹ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ.

ಇದರಿಂದ ಚೀನಾದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) 1 ಪರ್ಸೆಂಟ್ ನಷ್ಟು ತ್ರೈಮಾಸಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಮೂಡಿಸ್ ವಿಶ್ಲೇಷಣೆ ಬುಧವಾರ ವ್ಯಾಖ್ಯಾನದಲ್ಲಿ ಹೇಳಿದೆ. ಚೀನಾದ 2018ರ ಜಿಡಿಪಿ ಅಂಕಿ-ಅಂಶಗಳ ಪ್ರಕಾರ ಅಂದಾಜು 40 ಲಕ್ಷ ಕೋಟಿಯಷ್ಟು ಆರ್ಥಿಕತೆಯನ್ನು ನುಂಗಿಹಾಕಬಹುದು ಎಂದು ಮೂಡಿಸ್ ಅಂದಾಜಸಿದೆ.
ಮೂಡಿಸ್ ಅನಾಲಿಟಿಕ್ಸ್ನ ಏಷ್ಯಾದ ಮುಖ್ಯ ಪೆಸಿಫಿಕ್ ಅರ್ಥಶಾಸ್ತ್ರಜ್ಞ ಸ್ಟೀವ್ ಕೊಕ್ರೇನ್ ಪ್ರಕಾರ '' ಐದು ಕೈಗಾರಿಕಾ ವಲಯಗಳು ಕೊರೊನವೈರಸ್ನಿಂದ ಉಂಟಾಗುವ ಅಪಾಯಕ್ಕೆ ಹೆಚ್ಚು ಗುರಿಯಾಗುತ್ತವೆ ಮತ್ತು ಚೀನಾದಲ್ಲಿ ಉಂಟಾಗುವ ಸಂಪರ್ಕ ತಡೆಯು ಆರ್ಥಿಕತೆಯ ಮೇಲೆ ಪರಿಣಾಮವನ್ನು ಉಂಟುಮಾಡಬಹುದು'' ಎಂದು ಹೇಳಿದರು.

2019ರಲ್ಲಿ ಚೀನಾದ ಆರ್ಥಿಕ ಬೆಳವಣೀಗೆ ದರವು 6.1 ಪರ್ಸೆಂಟ್ನಷ್ಟು ದಾಖಲಾಗಿದ್ದು, ಇದು ಕಳೆದ 24 ವರ್ಷಗಳಲ್ಲಿ ಅತ್ಯಂತ ಕಡಿಮೆ ಎಂದು ಕಳೆದ ತಿಂಗಳು ಬೀಜಿಂಗ್ನಲ್ಲಿ ಬಿಡುಗಡೆಯಾದ ಅಂಕಿ-ಅಂಶಗಳು ತಿಳಿಸಿವೆ.
ಬುಧವಾರ ವೇಳೆಗೆ ಜಾಗತಿಕವಾಗಿ ಸುಮಾರು 24,505 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಚೀನಾದಲ್ಲಿ ಸಾವಿನ ಸಂಖ್ಯೆ 493ಕ್ಕೆ ತಲುಪಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications