ಚುನಾವಣೆಗಳ ಸಂದರ್ಭದಲ್ಲಿ ಕಾರ್ಪೊರೇಟ್ ಫಂಡಿಂಗ್ ಮಾಡುವುದರ ಮೇಲೆ ಸಂಪೂರ್ಣ ನಿಷೇಧ ಹೇರಬೇಕು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್ಸೆಂ ಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ರಾಜಕೀಯ ಭ್ರಷ್ಟಾಚಾರ ಕೊನೆ ಮಾಡಬೇಕಿದೆ ಹಾಗೂ ದೇಶದ ಚುನಾವಣೆ ವ್ಯವಸ್ಥೆಯನ್ನು ಸ್ವಚ್ಛಗೊಳಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ತಾಯಿಬೇರು ರಾಜಕೀಯದ ಭ್ರಷ್ಟಾಚಾರದಲ್ಲಿ ಇದೆ. ಇನ್ನು ರಾಜಕೀಯ ಭ್ರಷ್ತಾಚಾರದ ಬೇರು ಚುನಾವಣೆ ಭ್ರಷ್ಟಾಚಾರದಲ್ಲಿದೆ ಎಂದು ಹಿರಿಯ ರಾಜಕಾರಣಿಯಾದ ಎಸ್ಸೆಂ ಕೃಷ್ಣ ಹೇಳಿದ್ದಾರೆ. "ನಾವು ಮೊದಲಿಗೆ ಚುನಾವಣೆ ವ್ಯವಸ್ಥೆಯನ್ನು ಸ್ವಚ್ಛಗೊಳಿಸಬೇಕು. ಈ ಪ್ರಕ್ರಿಯೆ ಅಲ್ಲಿ ಇಲ್ಲಿ ನಡೆಯುತ್ತಿದೆ. ಆರಂಭಿಕ ಹಂತದಲ್ಲಿ ಕೆಲವು ಸುಧಾರಣೆಗಳು ಆದವು" ಎಂದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪಗಳೇ ಇಲ್ಲ
ಕೇಂದ್ರದ ಉನ್ನತ ಮಟ್ಟದಲ್ಲಿ ರಾಜಕೀಯ ಭ್ರಷ್ಟಾಚಾರ ಇಲ್ಲ ಎಂಬ ಕಾರಣಕ್ಕೆ ನಾನು ಸಂತೋಷವಾಗಿದ್ದೇನೆ. ಸ್ವಜನಪಕ್ಷಪಾತ ಅಥವಾ ಭ್ರಷ್ಟಾಚಾರ ಎಂದು ಒಂದೇ ಒಂದು ಆರೋಪ ಕೂಡ ಇಲ್ಲ. ಸ್ವತಃ ಪ್ರಧಾನಮಂತ್ರಿಗಳು (ನರೇಂದ್ರ ಮೋದಿ) ಸಂಪುರ್ಣವಾಗಿ ಹಾಗೂ ನಿರ್ವಿವಾದವಾಗಿ ಸ್ವಚ್ಛವಾಗಿದ್ದಾರೆ ಹಾಗೂ ಪ್ರಾಮಾಣಿಕರಾಗಿದ್ದಾರೆ. ಇದು ಅತಿ ದೊಡ್ಡ ಸಕಾರಾತ್ಮಕ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.
ಹಣದ ಶಕ್ತಿ ತೊಡೆದುಹಾಕಬೇಕು
ಹಣದ ಶಕ್ತಿಯನ್ನು ತೊಡೆದು ಹಾಕದಿದ್ದಲ್ಲಿ ಸ್ವಚ್ಛ ರಾಜಕಾರಣ ಸಾಧ್ಯವಿಲ್ಲ. ಮುಖ್ಯವಾಗಿ ಹಣದ ಶಕ್ತಿಯ ಬಗ್ಗೆ ಹೇಳುತ್ತಿದ್ದೇನೆ. ಅದು ನಾವಿಡಬೇಕಾದ ಮೊದಲ ಹೆಜ್ಜೆ. ಚುನಾವಣೆಗೆ ಸಾರ್ವಜನಿಕ ಹಣಕಾಸು ನೆರವನ್ನು ತರಬೇಕು. ಖಾಸಗಿ ಫಂಡಿಂಗ್ ಗೆ ಸಂಪೂರ್ಣ ಹಾಗೂ ಒಟ್ಟಾರೆ ನಿಷೇಧ ಹೇರಬೇಕು. ನಾನು ಹೇಳುತ್ತಿರುವುದು ಕಾರ್ಪೊರೇಟ್ ಕಂಪೆನಿಗಳ ಬಗ್ಗೆ ಎಂದು ಅವರು ಹೇಳಿದ್ದಾರೆ.
ಧರ್ಮ, ಜಾತಿ ಆಧಾರದಲ್ಲಿ ಮತ ಕೇಳಿದರೆ ಶಿಕ್ಷೆಯಾಗಬೇಕು
ಧರ್ಮ ಹಾಗೂ ಜಾತಿ ಆಧಾರದಲ್ಲಿ ಮತ ಕೇಳುವುದನ್ನು ಶಿಕ್ಷಾರ್ಹ ಅಪರಾಧ ಎಂದು ಮಾಡಬೇಕು ಎಂದು ಹೇಳಿರುವ ಅವರು, ರಾಜಕಾರಣವು ಸರ್ಕಾರಿ ಉದ್ಯೋಗ ಅಲ್ಲ. ಆದ್ದರಿಂದ ಅದಕ್ಕೆ ನಿವೃತ್ತಿ ವಯಸ್ಸಿನ ಅಗತ್ಯ ಇಲ್ಲ. ಮೊರಾರ್ಜಿ ದೇಸಾಯಿ ಅವರು ಈ ದೇಶದ ಪ್ರಧಾನಿ ಆದಾಗ ವಯಸ್ಸು 81. ಪ್ರಧಾನಿಯಾಗಿ ಅದ್ಭುತವಾಗಿಯೇ ಕೆಲಸ ಮಾಡಿದರು ಎಂದು 88 ವರ್ಷದ ಕೃಷ್ಣ ರಾಜಕೀಯ ನಿವೃತ್ತಿ ಬಗ್ಗೆ ಉತ್ತರಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications