ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದಾಗಿ ಇಂಡಿಗೋ ತನ್ನ ಹಿರಿಯ ಉದ್ಯೋಗಿಗಳಿಗೆ ಸೆಪ್ಟೆಂಬರ್ವರೆಗೆ ತಿಂಗಳಿಗೆ ನಾಲ್ಕು ದಿನಗಳವರೆಗೆ ವೇತನವಿಲ್ಲದೆ ಕಡ್ಡಾಯ ರಜೆ (ಎಲ್ಡಬ್ಲ್ಯೂಪಿ) ಗೆ ಹೋಗಬೇಕಾಗುತ್ತದೆ ಎಂದು ತಿಳಿಸಿದೆ.
ಕೊರೊನಾ ಕಾರಣದಿಂದ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಿರುವುದರಿಂದ ವಿಮಾನಯಾನ ಸಂಸ್ಥೆಗಳು ಮತ್ತೆ ನಷ್ಟದ ಹಾದಿ ತುಳಿದಿವೆ.
"ಎರಡನೇ ಅಲೆಯು ನಮ್ಮೆಲ್ಲರಿಗೂ ಕಷ್ಟಕರವಾಗಿದೆ ಮತ್ತು ಪ್ರಯಾಣಿಕರ ಹೊರೆ ಕಡಿಮೆಯಾಗಲು ಸಹ ಕಾರಣವಾಗಿದೆ. ಇದರ ಪರಿಣಾಮವಾಗಿ ನಮ್ಮ ವಾಣಿಜ್ಯ ವೇಳಾಪಟ್ಟಿಯನ್ನು ಮೊಟಕುಗೊಳಿಸಬೇಕಾಯಿತು" ಎಂದು ಇಂಡಿಗೊದ ಫ್ಲೈಟ್ ಆಪರೇಶನ್ಸ್ ಹಿರಿಯ ಉಪಾಧ್ಯಕ್ಷ ಅಶೀಮ್ ಮಿತ್ರ ಪೈಲೆಟ್ಗಳಿಗೆ ಇಮೇಲ್ನಲ್ಲಿ ತಿಳಿಸಿದ್ದಾರೆ.

ವಿಮಾನ ಕಾರ್ಯಾಚರಣೆಯು ಕಡಿಮೆಯಾಗಿರುವುದರಿಂದ ಎಲ್ಲಾ ಉದ್ಯೋಗಿಗಳಿಗೆ ಎಲ್ಡಬ್ಲ್ಯೂಪಿ ಕಾರ್ಯಕ್ರಮವನ್ನು ಅನುಸರಿಸಬೇಕಾಗುತ್ತದೆ. ಇದರ ಅಡಿಯಲ್ಲಿ ಹಿರಿಯ ಉದ್ಯೋಗಿಗಳು ಕಡ್ಡಾಯ ವೇತನರಹಿತ ರಜೆಗೆ ತೆರಳಬೇಕು. ಆದರೆ ಈ ಎಲ್ಡಬ್ಲ್ಯೂಪಿ ಕಾರ್ಯಕ್ರಮದಡಿಯಲ್ಲಿ ಬ್ಯಾಂಡ್ ಬಿ ಮತ್ತು ಬ್ಯಾಂಡ್ ಎ ಉದ್ಯೋಗಿಗಳನ್ನು ಒಳಗೊಂಡಿಲ್ಲ.
ಏಕೆಂದರೆ ವಿಮಾನಯಾನದ ಬಹುಪಾಲು ಉದ್ಯೋಗಿಗಳು ಬ್ಯಾಂಡ್ ಬಿ ಮತ್ತು ಬ್ಯಾಂಡ್ ಎ ನಲ್ಲಿದ್ದಾರೆ, ಅವುಗಳು ಕೆಳಮಟ್ಟದ ಬ್ಯಾಂಡ್ಗಳಾಗಿವೆ. ಹೀಗಾಗಿ 2021ರ ಜೂನ್ 1 ರಿಂದ ಮುಂದಿನ 3 ತಿಂಗಳವರೆಗೆ 3 ದಿನಗಳ ಎಲ್ಡಬ್ಲ್ಯೂಪಿ ಯನ್ನು ಕೈಗೊಳ್ಳಲಾಗುತ್ತದೆ ಎಂದು ಮಿತ್ರ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಲ್ಲಿ ದೇಶದಲ್ಲಿ ದೇಶೀಯ ವಿಮಾನ ಪ್ರಯಾಣ ಗಮನಾರ್ಹವಾಗಿ ಕಡಿಮೆಯಾಗಿದೆ. ಫೆಬ್ರವರಿ 28 ರಂದು ಸುಮಾರು 3 ಲಕ್ಷ ದೇಶೀಯ ವಾಯು ಪ್ರಯಾಣಿಕರು ಭಾರತದಲ್ಲಿ ಪ್ರಯಾಣಿಸಿದರು. ಮೇ 30 ರಂದು, ದೇಶದಲ್ಲಿ ಸುಮಾರು 70,000 ಪ್ರಯಾಣಿಕರೊಂದಿಗೆ ದೇಶೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿದ್ದವು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications