ಭಾರತದಲ್ಲಿ ಕ್ರಿಪ್ಟೋಕರೆನ್ಸಿಯ ಸಂಪೂರ್ಣ ನಿಷೇಧದ ಬದಲು ನಿಯಂತ್ರಣ

ನವದೆಹಲಿ, ನವೆಂಬರ್ 18: ಭಾರತದಲ್ಲಿ ಬಿಟ್‌ಕಾಯಿನ್ ಸೇರಿದಂತೆ ಕ್ರಿಪ್ಟೋಕರೆನ್ಸಿ ವಿಚಾರ ಇತ್ತೀಚೆಗೆ ತೀವ್ರ ಚರ್ಚೆ ಕಾರಣವಾಗಿದೆ. ಜಾಗತಿಕ ಮಟ್ಟದಲ್ಲಿ ನಿಷೇಧಿಸಲ್ಪಟ್ಟಿರುವ ಕ್ರಿಪ್ಟೋಕರೆನ್ಸಿಗಳನ್ನು ಬಾಂಡ್, ಷೇರು ಮತ್ತು ಚಿನ್ನದ ರೀತಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರತದಲ್ಲಿ ಕ್ರಿಪ್ಟೋಕರೆನ್ಸಿಯ ಸಂಗ್ರಹಕ್ಕೆ ಅನುಮತಿ ನೀಡಲಾಗುತ್ತದೆಯೇ ವಿನಃ ಕ್ರಿಪ್ಟೋ ಕರೆನ್ಸಿ ವಹಿವಾಟನ್ನು ನಿಷೇಧಿಸಲು ಕೇಂದ್ರ ಸರ್ಕಾರ ಬಯಸಿದೆ. ಅವುಗಳ ವಹಿವಾಟಿನ ಬದಲಿಗೆ ಅದನ್ನು ಸಂಪತ್ತಿನ ಮಾದರಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಅನುಮತಿ ಸಿಗಲಿದೆ.

ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕ್ರಿಪ್ಟೋಕರೆನ್ಸಿಯನ್ನು ಸಂಪೂರ್ಣವಾಗಿ ನಿಷೇಧಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ. ಆದರೆ ಈ-ಮಾದರಿ ವಹಿವಾಟು ನಡೆಸುವಂತೆ ಹೂಡಿಕೆದಾರರನ್ನು ಆಕರ್ಷಿಸುತ್ತಿರುವ ವಿನಿಮಯ ಕೇಂದ್ರಗಳು ಮತ್ತು ವೇದಿಕೆ ಹಾಗೂ ಮಧ್ಯವರ್ತಿಗಳ ಮೇಲೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಿದ್ಧಪಡಿಸಲಾದ ಮಸೂದೆಯನ್ನು ಮುಂದಿನ ಎರಡು ಮೂರು ವಾರಗಳಲ್ಲಿ ಸಂಪುಟ ಪರಿಶೀಲನೆ ನಡೆಸಲಿದೆ.

ದೇಶದಲ್ಲಿ ಕ್ರಿಪ್ಟೋ ಎಂಬುದು ಕರೆನ್ಸಿ ಅಲ್ಲ; ಸಂಪತ್ತಿನಂತೆ ಸಂಗ್ರಹಿಸಿ

ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡನೆ:

ನವೆಂಬರ್ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಕೇಂದ್ರ ಚಳಿಗಾಲ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಿದ್ಧಪಡಿಸಿದ ಮಸೂದೆಯು ಚರ್ಚೆಗೆ ಬರುವ ಸಾಧ್ಯತೆಯಿದೆ. ಕ್ರಿಪ್ಟೋಕರೆನ್ಸಿ ವಹಿವಾಟಿನ ಮೇಲೆ ಯಾವ ರೀತಿ ನಿಯಂತ್ರಣವನ್ನು ವಿಧಿಸಬೇಕು. ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯನ್ನು ಹೇಗೆ ಹಿಡಿತವನ್ನು ಹೊಂದಿರಬೇಕು ಎಂಬ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚಿಸುವ ನಿರೀಕ್ಷೆಗಳಿವೆ.

ಸೆಬಿ ನಿಯಂತ್ರಣಕ್ಕೆ ಕ್ರಿಪ್ಟೋಕರೆನ್ಸಿ ಮಾರುಕಟ್ಟೆ:

ಭಾರತದ ಷೇರು ಮಾರುಕಟ್ಟೆ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ನಿಯಂತ್ರಣವನ್ನು ಹೊಂದಿದೆ. ಅದೇ ಸೆಬಿಗೆ ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯನ್ನು ನಿಯಂತ್ರಿಸುವ ಅಧಿಕಾರ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ ಇದರ ಬಗ್ಗೆ ಯುವುದೇ ರೀತಿ ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕ್ರಿಪ್ಟೋ ಎಂಬುದು ಕರೆನ್ಸಿ ಎನ್ನುವುದಕ್ಕಿಂತ ಅದು ಸಂಪತ್ತು:

ಭಾರತದಲ್ಲಿ ಡಿಜಿಟಲ್ ಮಾದರಿಯ ಕ್ರಿಪ್ಟೋವನ್ನು ಕರೆನ್ಸಿ ಎಂದು ಪರಿಗಣಿಸುವುದಕ್ಕಿಂತ ಅದನ್ನು ಸಂಪತ್ತು ಎಂದು ಗುರುತಿಸಬೇಕು ಎಂದು ಈ ಮಾದರಿ ವಹಿವಾಟು ನಡೆಸುವ ಹೂಡಿಕೆದಾರರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಿಕೊಂಡಿದ್ದಾರೆ. ಮೇ ತಿಂಗಳ ಮಾಹಿತಿ ಪ್ರಕಾರ, ಭಾರತದಲ್ಲಿ ಡಿಜಿಟಲ್ ಕರೆನ್ಸಿ ಮಾರುಕಟ್ಟೆಯಲ್ಲಿ ಒಟ್ಟಾರೆ ಸಂಪತ್ತು 49,000 ಕೋಟಿ ರೂಪಾಯಿ ಇದೆ. 2020ರ ಏಪ್ರಿಲ್ ತಿಂಗಳಿನಲ್ಲಿ 6854 ಕೋಟಿ ಇತ್ತು ಎಂದು ಬ್ಲ್ಯಾಕ್ ಚೈನ್ ಡೇಟಾ ವೇದಿಕೆ ಚೈನಾಲಿಸಿಸ್ ಹೇಳಿದೆ.

ಕರ್ನಾಟಕದಿಂದ ದೇಶಕ್ಕೆ ವ್ಯಾಪಿಸಿದ ಕ್ರಿಪ್ಟೋಕರೆನ್ಸಿ ಸುದ್ದಿ:

ಕರ್ನಾಟಕದಲ್ಲಿ ಹ್ಯಾಕರ್ ಶ್ರೀಕಿ ಬಂಧನದ ನಂತರದಲ್ಲಿ ಬಿಟ್‌ಕಾಯಿನ್ ಸೇರಿದಂತೆ ಕ್ರಿಪ್ಟೋಕರೆನ್ಸಿಗಳ ಸುದ್ದಿ ಇಡೀ ದೇಶಕ್ಕೆ ವ್ಯಾಪಿಸಿದೆ. ಭಾರತದಾದ್ಯಂತ ಭಾರಿ ಸದ್ದು ಮಾಡಿರುವ ಕ್ರಿಪ್ಟೋಕರೆನ್ಸಿ ಎಲ್ಲ ಮಾದರಿಗಳ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಶನಿವಾರ ಸಭೆ ನಡೆಸಿದ್ದರು. ಅನಿಯಂತ್ರಿತ ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯು ಅಕ್ರಮ ಹಣ ವರ್ಗಾವಣೆ, ಭಯೋತ್ಪಾದನೆಗೆ ಹಣ ಒದಗಿಸುವುದರ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿತ್ತು.

ಕ್ರಿಪ್ಟೋಕರೆನ್ಸಿ ಸಂಪೂರ್ಣ ನಿಷೇಧಕ್ಕಿಲ್ಲ ಒಲವು:

ಭಾರತದಲ್ಲಿ ಕ್ರಿಪ್ಟೋಕರೆನ್ಸಿಯನ್ನು ಸಂಪೂರ್ಣವಾಗಿ ನಿಷೇಧಿಸುವುದಕ್ಕೆ ಜಯಂತ್ ಸಿನ್ಹಾ ನೇತೃತ್ವದ ಸಂಸದೀಯ ಹಣಕಾಸು ಸ್ಥಾಯಿ ಸಮಿತಿ ಕೂಡಾ ಒಲವು ತೋರಿಸಿಲ್ಲ. ಅದರ ಬದಲಿಗೆ ಮಾರುಕಟ್ಟೆ ನಿಯಂತ್ರಿಸಲು ಕಠಿಣ ಕಾನೂನಿನ ಅಗತ್ಯತೆ ಬಗ್ಗೆ ಚರ್ಚಿಸಲಾಗಿತ್ತು. ಅಲ್ಲದೇ ಈ ರೀತಿ ಡಿಜಿಟಲ್ ಕರೆನ್ಸಿ ಜಾರಿಗೆ ಬಂದರೆ ಅದರ ಮೇಲೆ ಯಾವ ರೀತಿ ತೆರಿಗೆ ವಿಧಿಸಬಹುದು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿತ್ತು. ಕ್ರಿಪ್ಟೋ ಕರೆನ್ಸಿಯಿಂದಾಗಿ ದೇಶದ ಆರ್ಥಿಕ ಸ್ಥಿರತೆಗೆ ಧಕ್ಕೆ ಉಂಟಾಗುತ್ತದೆ. ಕಿರು ಹಣಕಾಸು ಸೇವಾ ವಲಯವು ಅಪಾಯಕ್ಕೆ ಸಿಲುಕುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಕಳವಳ ವ್ಯಕ್ತಪಡಿಸಿದ್ದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+