ಮುಂಬೈ: ಕೊರೊನಾವೈರಸ್ ಪಿಡುಗಿನ ಪರಿಣಾಮವಾಗಿ ದೇಶದಲ್ಲಿ ಆರ್ಥಿಕತೆ ಮೇಲೆ ದೊಡ್ಡ ಪೆಟ್ಟು ಬಿದ್ದಿದೆ. ಎಲ್ಲ ವಲಯಗಳಲ್ಲಿ ನಿರಾಶದಾಯಕ ಬೆಳವಣಿಗೆ ಕಂಡು ಬರುತ್ತಿದೆ ಎಂದು ಹಲವು ವರದಿಗಳು ಈಗಾಗಲೇ ದೇಶದ ಅರ್ಥವ್ಯವಸ್ಥೆಯನ್ನು ತೆರದಿಟ್ಟಿದ್ದವು. ಆದರೆ, ಲಾಕ್ಡೌನ್ ಸಡಿಲಿಕೆ ನಂತರ ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವ ಕುರಿತು ಆಶಾದಾಯಕ ವರದಿಯೊಂದು ಬಂದಿದೆ.
ಭಾರತದ ನಿರುದ್ಯೋಗ ದರವು ಲಾಕ್ಡೌನ್ ಮೊದಲಿನ ಹಂತಕ್ಕೆ ಕ್ಕೆ ಇಳಿದಿದೆ ಎಂದು ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಮ್ಐಇ) ಸೋಮವಾರ ತಿಳಿಸಿದೆ.
ಲಾಕ್ಡೌನ್ ಜಾರಿಯಿದ್ದ ಮೇ 3 ಕ್ಕೆ ಕೊನೆಗೊಂಡ ವಾರದಲ್ಲಿ ನಿರುದ್ಯೋಗ ದರವು ಶೇಕಡಾ 27.1 ಕ್ಕೆ ಏರಿಕೆಯಾಗಿತ್ತು. ಲಾಕ್ಡೌನ್ ಆರಂಭವಾಗುವ ಮುಂಚೆ ಮಾರ್ಚ್ನಲ್ಲಿ ಇದು ಶೇಕಡಾ 8.75 ರಷ್ಟಿತ್ತು.
ಶೇ 11.2 ಕ್ಕೆ ಇಳಿದಿದೆ
ಜೂನ್ 21 ಕ್ಕೆ ಕೊನೆಗೊಂಡ ಇತ್ತೀಚಿನ ವಾರದಲ್ಲಿ ನಗರ ನಿರುದ್ಯೋಗವು ಶೇ 11.2 ಕ್ಕೆ ಇಳಿದಿದೆ. ಆದರೆ, ಲಾಕ್ಡೌನ್ಗೆ ಮುಂಚಿನ 13 ವಾರಗಳಲ್ಲಿ ಸರಾಸರಿ ನಿರುದ್ಯೋಗ ದರವು ಶೇ 9 ರಷ್ಟಕ್ಕಿಂತ 200 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಾಗಿದೆ.
ಗ್ರಾಮೀಣ ಭಾಗದಲ್ಲಿ
ಗ್ರಾಮೀಣ ಭಾಗದಲ್ಲಿ ಉದ್ಯೋಗದಲ್ಲಿ ದೊಡ್ಡ ಬದಲಾವಣೆ ಕಂಡು ಬಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾರ್ಯದಲ್ಲಿ ಭಾರಿ ಏರಿಕೆ ಇದಕ್ಕೆ ಕಾರಣ ಮತ್ತು ಈ ವರ್ಷ ಮುಂಗಾರು ಬಿತ್ತನೆಯ ತೀವ್ರ ಏರಿಕೆ ಕಾರಣ. ಜೂನ್ 21 ಕ್ಕೆ ಕೊನೆಗೊಂಡ ವಾರದಲ್ಲಿ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ದರವು ಶೇ 7.26 ಕ್ಕೆ ಇಳಿದಿದೆ. ಇದು ಮಾರ್ಚ್ 22 ಕ್ಕೆ ಲಾಕ್ಡೌನ್ ಮೊದಲು ಶೇ 8.3 ಕ್ಕೆ ಇತ್ತು ಎಂದು ಸಿಎಂಐಇ ತಿಳಿಸಿದೆ.
ಗ್ರಾಮೀಣ ಕ್ಷೇತ್ರದತ್ತ ಗಮನ
ಸರ್ಕಾರವು ಗ್ರಾಮೀಣ ಕ್ಷೇತ್ರದತ್ತ ಗಮನ ಹರಿಸುವುದನ್ನು ಮುಂದುವರೆಸಿದೆ. ವಲಸೆ ಕಾರ್ಮಿಕರ ಸಮಸ್ಯೆಯನ್ನು ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಗರಿಬ್ ಕಲ್ಯಾಣ್ ಯೋಜನೆ ಪ್ರಾರಂಭಿಸಿದ್ದರಿಂದ ಜನ ತಮ್ಮ ಹಳ್ಳಿಗಳಿಗೆ ಮರಳಿಯೂ ಉದ್ಯೋಗಗಳನ್ನು ಪಡೆಯುತ್ತಿದ್ದಾರೆ ಎಂದು ಸಿಎಂಐಇ ತಿಳಿಸಿದೆ. ಭಾರತಕ್ಕೆ ಕೊರೊನಾವೈರಸ್ ಮಾರಿ ಆಕ್ರಮಣಕ್ಕೆ ಮುಂಚೆಯೇ ಆರ್ಥಿಕ ಬೆಳವಣಿಗೆಯು 11 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ಬೆಳವಣಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇನ್ನೂ ಮಾರಕವಾಗಿದೆ ಎಂದು ಸಿಎಂಐಇ ತಿಳಿಸಿದೆ.
ಸಿಎಮ್ಐಇ ವ್ಯವಸ್ಥಾಪಕ ನಿರ್ದೇಶಕ ಸಿಇಓ ಮಹೇಶ್ ವ್ಯಾಸ್
ಸಡಿಲಿಕೆ ನಂತರ ಅನೇಕ ನಗರಗಳ ಆರ್ಥಿಕತೆ ತೆರೆಯಲು ಪ್ರಾರಂಭಿಸಿವೆ. ಕೆಲವು ದೊಡ್ಡದಾದ ನಗರ ಪ್ರದೇಶಗಳ ಹೊರತುಪಡಿಸಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಇದರಿಂದ ಉದ್ಯೋಗ ಪ್ರಮಾಣವೂ ನಿಧಾನವಾಗಿ ಹೆಚ್ಚಾಗುತ್ತಿದೆ ಎಂದು ಮುಂಬೈ ಮೂಲದ ಸಿಎಮ್ಐಇ ವ್ಯವಸ್ಥಾಪಕ ನಿರ್ದೇಶಕ ಸಿಇಓ ಮಹೇಶ್ ವ್ಯಾಸ್ ಹೇಳುತ್ತಾರೆ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications