ಆನ್ ಲೈನ್ ವ್ಯವಹಾರಗಳು ವಿಫಲವಾಗುತ್ತಿವೆ ಎಂದು ಸಾರ್ವಜನಿಕ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ಬುಧವಾರ ದೂರು ನೀಡಿದ್ದಾರೆ. ಕೆಲವು ಗ್ರಾಹಕರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದು, ಎಸ್ ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಲಾಗ್ ಇನ್ ಆಗಲು ಸಾಧ್ಯವಾಗುತ್ತಿಲ್ಲ. ಇದರಲ್ಲಿ "ಏನೋ ತಪ್ಪಾಗಿದೆ" ಎಂಬ ಸಂದೇಶ ಬರುತ್ತಿದೆ ಎಂದು ತಿಳಿಸಿದ್ದಾರೆ.
ಮಂಗಳವಾರದಿಂದಲೇ ಬ್ಯಾಂಕ್ ನ ಗ್ರಾಹಕರು ಈ ತಾಂತ್ರಿಕ ಸಮಸ್ಯೆ ಬಗ್ಗೆ ದೂರು ನೀಡುತ್ತಾ ಬಂದಿದ್ದರು. ಆದರೆ ಈಗಲೂ ಸಮಸ್ಯೆ ಎದುರಿಸುತ್ತಿದ್ದಾರೆ. ನಾಲ್ಕರಿಂದ ಐದು ಬಾರಿ ಪ್ರಯತ್ನ ಮಾಡಿದರೂ ಆನ್ ಲೈನ್ ಮೂಲಕ ಹಣ ಕಳುಹಿಸುವುದಕ್ಕೆ ಸಾಧ್ಯ ಆಗುತ್ತಿಲ್ಲ ಎಂದು ಗ್ರಾಹಕರೊಬ್ಬರು ದೂರು ಹೇಳಿಕೊಂಡಿದ್ದಾರೆ.
ಅದೇ ರೀತಿ ಇತರ ಬ್ಯಾಂಕ್ ಗಳ ಗ್ರಾಹಕರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಹಣವನ್ನು ಆನ್ ಲೈನ್ ಮೂಲಕ ಕಳುಹಿಸುವುದು ಸಾಧ್ಯವಾಗುತ್ತಿಲ್ಲ. ಆನ್ ಲೈನ್ ಸೇವೆಯಲ್ಲಿ ಏನಾದರೂ ಸಮಸ್ಯೆ ಆಗಿದೆಯಾ ಎಂಬ ಬಗ್ಗೆ ಎಸ್ ಬಿಐನಿಂದಲೇ ಸ್ಪಷ್ಟತೆ ನೀಡಬೇಕಿದೆ.

ಎಸ್ ಬಿಐನ ಹಲವು ಗ್ರಾಹಕರು ಹೇಳುವ ಪ್ರಕಾರ, ಬ್ಯಾಂಕ್ ಮೊಬೈಲ್ ಅಪ್ಲಿಕೇಷನ್ ಯೋನೋದಲ್ಲಿ "M005" ಎಂಬ ಸಂದೇಶ ಬರುತ್ತಿದ್ದು, ಆನ್ ಲೈನ್ ವ್ಯವಹಾರ ಮಾಡಲು ಕಷ್ಟವಾಗುತ್ತಿದೆ. ಗ್ರಾಹಕರೊಬ್ಬರು, ನಾನು ನೋಡಿದ್ದರಲ್ಲೇ ಯೋನೋ ಅತ್ಯಂತ ಕೆಟ್ಟ ಅಪ್ಲಿಕೇಷನ್. ನೀವೇಕೆ ಈ ಸಮಸ್ಯೆಯನ್ನು ಪರಿಹರಿಸುವುದಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಪ್ರಶ್ನೆ ಮಾಡಿದ್ದಾರೆ.
ಒಂದು ವಾರದ ಹಿಂದೆ, ನವೆಂಬರ್ 22ರಂದು ಬ್ಯಾಂಕ್ ತಾಂತ್ರಿಕ ಸಮಸ್ಯೆ ಎದುರಿಸಿ, ಆನ್ ಲೈನ್ ವ್ಯವಹಾರಕ್ಕೆ ತೊಂದರೆ ಆಗಿತ್ತು. "ಅಡಚಣೆಗಾಗಿ ನಾವು ವಿಷಾದಿಸುತ್ತೇವೆ. ನಮ್ಮ ಸರ್ವರ್ ಸಮಸ್ಯೆಯಿಂದ ಹೀಗಾಗಿದೆ. ದಯವಿಟ್ಟು ನಮ್ಮ ಜತೆ ಸಹಕರಿಸಿ. ನಮ್ಮ ತಂಡವು ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವ ಕೆಲಸದಲ್ಲಿದೆ. ಈ ಮಧ್ಯೆ, ನಮ್ಮ ಇತರ ಡಿಜಿಟಲ್ ಚಾನೆಲ್ ಗಳನ್ನು ಬಳಸುವಂತೆ ಸಲಹೆ ಮಾಡುತ್ತೇವೆ," ಎಂದು ಎಸ್ ಬಿಐ ಹೇಳಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications