ದಿನೇ ದಿನೆ ಹೆಚ್ಚುತ್ತಿವೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕೇವಲ 9 ತಿಂಗಳಲ್ಲಿ ಬರೋಬ್ಬರಿ 107.21 ಕೋಟಿ ರೂ. ಸೈಬರ್ ವಂಚನೆಯಾಗಿದೆ. ಪೊಲೀಸರು ಕಳ್ಳರನ್ನು ಬಲೆಗೆ ಬೀಳಿಸುವ ವಿಧಾನ ಇದು!
ಹೌದು,ವರದಿಯ ಪ್ರಕಾರ, ಈ ಸೈಬರ್ ವಂಚನೆಯು ವಿಶೇಷವಾಗಿ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ಗಳು, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ವಂಚನೆ ನಡೆಯುತ್ತಿದೆ. ಪ್ರತಿ ವರ್ಷ 1 ಲಕ್ಷ ಸೈಬರ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸೈಬರ್ ವಂಚನೆಯನ್ನು ತಡೆಯಲು ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಂಡಿದೆ? ಎಂಬ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ ಬನ್ನಿ...

ಭಾರತದಲ್ಲಿ ದೇಶದಲ್ಲಿ ಡಿಜಿಟಲ್ ಪಾವತಿಗಳ ಪ್ರವೃತ್ತಿ ವೇಗವಾಗಿ ಬೆಳೆಯುತ್ತಿದೆ. ಇದರಿಂದ ಸೈಬರ್ ವಂಚನೆ ಪ್ರಕರಣಗಳು ಸಹ ಹೆಚ್ಚುತ್ತಿವೆ. ಸೈಬರ್ ವಂಚನೆ ಪ್ರಕರಣಗಳು ಮತ್ತು ಅದರಿಂದ ಉಂಟಾದ ನಷ್ಟಗಳ ಕುರಿತು ಲೋಕಸಭೆಯಲ್ಲಿ ವರದಿಯನ್ನು ಬಹಿರಂಗಪಡಿಸಲಾಗಿದೆ. ಲೋಕಸಭೆಯಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದ (FY25) ಮೊದಲ ಮೂರು ತ್ರೈಮಾಸಿಕಗಳಲ್ಲಿ 13,384 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಿಂದ ಜನರು ಸುಮಾರು 107.21 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ.
1 ಲಕ್ಷ ಸೈಬರ್ ವಂಚನೆ ಪ್ರಕರಣಗಳ ವಿವರ
ಪ್ರಸ್ತುತ ಆರ್ಬಿಐ (ಭಾರತೀಯ ರಿಸರ್ವ್ ಬ್ಯಾಂಕ್) ಸೈಬರ್ ವಂಚನೆಗೆ ಸಂಬಂಧಿಸಿದ ಎಲ್ಲಾ ಡೇಟಾವನ್ನು ಹೊಂದಿಲ್ಲ. ಆದರೂ, ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳ ಅಂಕಿಅಂಶಗಳು ಸುಮಾರು 1 ಲಕ್ಷಕ್ಕೂ ಹೆಚ್ಚು ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ, ಈ ಸೈಬರ್ ವಂಚನೆಯು ವಿಶೇಷವಾಗಿ ಡೆಬಿಟ್, ಕ್ರೆಡಿಟ್ ಕಾರ್ಡ್ಗಳು, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ನಡೆಯುತ್ತಿವೆ. ಈ ಸಂಬಂಧಿಸಿದ ವಂಚನೆ ಪ್ರಕರಣಗಳು ಹೆಚ್ಚುತ್ತಲೇ ಇವೆ.
ಬರೋಬ್ಬರಿ 18.46 ಕೋಟಿ ರೂ. ವಂಚನೆ
ವರದಿಯ ಪ್ರಕಾರ, KYC ಇಲ್ಲದ ಖಾತೆಗಳು, ವಂಚನೆಗೆ ಬಳಸುವ ಬ್ಯಾಂಕ್ ಖಾತೆಗಳು (ಹಣದ ಮ್ಯೂಲ್ಸ್) ಮತ್ತು ಫಿಶಿಂಗ್ ದಾಳಿಗಳು ವೇಗವಾಗಿ ಹೆಚ್ಚಿವೆ. ಇದರಿಂದಾಗಿ, 2024 ರ ಆರ್ಥಿಕ ವರ್ಷದಲ್ಲಿ ಸೈಬರ್ ವಂಚನೆಯಿಂದ ಉಂಟಾದ ನಷ್ಟವು 177.05 ಕೋಟಿ ರೂ.ಗಳನ್ನು ತಲುಪಿದೆ. ಆದರೆ, 2015 ರಲ್ಲಿ ಕೇವಲ 845 ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಒಟ್ಟು 18.46 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಹೇಳಲಾಗಿದೆ.
ಸೈಬರ್ ವಂಚನೆ ತಡೆಗೆ ಸರ್ಕಾರ ತೆಗೆದುಕೊಂಡ ಕ್ರಮಗಳು ಯಾವುವು?
- ಸೈಬರ್ ವಂಚನೆಯನ್ನು ನಿಗ್ರಹಿಸಲು ಆರ್ಬಿಐ (RBI) 2024ರ ಜುಲೈ ತಿಂಗಳಲ್ಲಿ 'ವಂಚನೆ ಅಪಾಯ ನಿರ್ವಹಣೆ' ಮಾರ್ಗಸೂಚಿಯನ್ನು ಜಾರಿಗೆ ತಂದಿತು. ಅದಕ್ಕೆ ಹಲವು ಕಠಿಣ ನಿಯಮಗಳಿವೆ.
- ಅನುಮಾನಾಸ್ಪದ ವಹಿವಾಟುಗಳನ್ನು ಮೇಲ್ವಿಚಾರಣೆ ಮಾಡಲು 'EWS' (ಮುಂಚಿನ ಎಚ್ಚರಿಕೆ ವ್ಯವಸ್ಥೆ) ಅನ್ನು ಪರಿಚಯಿಸಲಾಗಿದೆ.
- ಕೆವೈಸಿ (KYC) ನಿಯಮಗಳನ್ನು ಪಾಲಿಸದ ಹೆಚ್ಚಿನ ಅಪಾಯದ ಖಾತೆಗಳ ಕಟ್ಟುನಿಟ್ಟಿನ ಪರಿಶೀಲನೆ.
- ವಂಚನೆ ಮಾದರಿಗಳನ್ನು ವಿಶ್ಲೇಷಿಸಲು Market Intelligence Unit (ಮಾರುಕಟ್ಟೆ ಗುಪ್ತಚರ ಘಟಕ) ಸ್ಥಾಪನೆ ಮಾಡಲಾಗಿದೆ.
ಆನ್ಲೈನ್ ವಂಚನೆಗಳಿಂದ ರಕ್ಷಿಸಿಕೊಳ್ಳುವುದಕ್ಕೆ ಏನು ಮಾಡಬೇಕು?
ಆನ್ಲೈನ್ ವಂಚನೆಗಳನ್ನು ತಪ್ಪಿಸಲು ಜಾಗರೂಕರಾಗಿರುವುದು ಮುಖ್ಯ. ಈ ಘಟನೆಗಳನ್ನು ತಪ್ಪಿಸಲು, ನಿಮ್ಮ ಮೊಬೈಲ್ ಮತ್ತು ಕಂಪ್ಯೂಟರ್ ಅನ್ನು ಯಾವಾಗಲೂ ಅಪ್ಡೇಟ್ ಮಾಡಿ.
ಸೋಶಿಯಲ್ ಮೀಡಿಯಾದಿಂದ ಬ್ಯಾಂಕ್ ಖಾತೆಗಳವರೆಗೆ, ಯಾವಾಗಲೂ ಸ್ಟ್ರಾಂಗ್ ಪಾಸ್ವರ್ಡ್ಗಳನ್ನು ಬಳಸಸಬೇಕು. ಸುಲಭವಾದ ಪಾಸ್ವರ್ಡ್ಗಳನ್ನು ಎಂದಿಗೂ ಇಡಬೇಡಿ. ಬ್ರೌಸರ್ನಲ್ಲಿ ಪಾಸ್ವರ್ಡ್ಗಳನ್ನು ಸೇವ್ ಮಾಡುವುದನ್ನು ಆದಷ್ಟು ಕಡಿಮೆ ಮಾಡಿ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications