ರಾಜ್ಯದಲ್ಲಿ ದಿನೇ ದಿನೇ ವಿಪರೀತ ಚಳಿಯಾಗುತ್ತಿದೆ. ಅಲ್ಲದೇ ಈ ಮಧ್ಯೆ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಇದೀಗ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಚಂಡಮಾರುತ (Cyclone) ಸೃಷ್ಟಿಯಾಗಿದೆ. ದಿತ್ವಾ ಚಂಡಮಾರುತದ ಪರಿಣಾಮ ಇದೀಗ ಗಾಳಿಯ ವೇಗ ಕೂಡಾ ಹೆಚ್ಚಾಗಿದ್ದು, ಈ ಪರಿಣಾಮ ಕರ್ನಾಟಕಕ್ಕೂ (Karnataka) ತಟ್ಟುವ ನಿರೀಕ್ಷೆಯಿದೆ. ಈ ಹಿನ್ನೆಲೆ ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯದಲ್ಲೂ ಭಾರೀ ಮಳೆಯಾಗಬಹುದು (Heavy Rain) ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ನವೆಂಬರ್ 29 ರಿಂದ ಡಿಸೆಂಬರ್ 2 ರವರೆಗೂ ಚಳಿ, ಮಳೆ ವಾತಾವರಣ ಇರಲಿದೆ ಎಂದು ಸೂಚನೆ ನೀಡಲಾಗಿದೆ.
ಹೌದು, ರಾಜ್ಯದಲ್ಲಿ ಈಗಾಗಲೇ ಚಳಿ ಜೋರಾಗಿದೆ. ಈ ಮಧ್ಯೆ ಇಂದಿನಿಂದ ಮಳೆಯಾಗಬಹುದು ಎಂದು ಸೂಚನೆ ನೀಡಲಾಗಿದೆ. ಮಧ್ಯ ಕರ್ನಾಟಕ, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಮಳೆ?
ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಹಾವೇರಿ, ಬಳ್ಳಾರಿ, ತುಮಕೂರು, ಕಲಬುರಗಿ, ಕೊಪ್ಪಳ, ಗದಗ ಜಿಲ್ಲೆಯಲ್ಲಿ ಇಂದು (ನ.29) ಗುಡುಗು ಸಹಿತ ಭಾರೀ ಮಳೆಯಾಗಬಹುದು ಎಂದು ಹೇಳಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚಳಿ ವಾತಾವರಣ ಹೆಚ್ಚಾಗಿದ್ದು, ಮೋಡಕವಿದ ವಾತಾವರಣದ ಜೊತೆಗೆ ಅಲ್ಲಲ್ಲಿ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಎಲ್ಲೆಲ್ಲಿ ಒಣ ಹವೆ?
ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್, ವಿಜಯಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ವಿಜಯನಗರ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
ಬೆಂಗಳೂರಿನ ಹವಾಮಾನ:
ಇನ್ನು ಬೆಂಗಳೂರಿನಲ್ಲಿ ಚಳಿ ಜೊತೆಗೆ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿಯಾಗಿದೆ. ಅಲ್ಲದೇ ತಾಪಮಾನ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ತಮಿಳುನಾಡಿನಲ್ಲೂ ಭಾರೀ ಮಳೆ!
ಇನ್ನು ಬಂಗಾಳಕೊಲ್ಲಿಯಲ್ಲಿ 'ದಿತ್ವಾ' ಚಂಡಮಾರುತವು ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಭಾಗದತ್ತ ಚಲಿಸುತ್ತಿರುವುದರಿಂದ ತಮಿಳುನಾಡಿನ ವಿವಿಧ ಜಿಲ್ಲೆಗಳಿಗೆ ನವೆಂಬರ್ 29, 2025 ರ ಶನಿವಾರದಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ (RMC) ರೆಡ್ ಅಲರ್ಟ್ ನೀಡಿದೆ.
ಚಂಡಮಾರುತವು ಶನಿವಾರ 7 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು, ಪುದುಚೇರಿಯಿಂದ 380 ಕಿ.ಮೀ ದಕ್ಷಿಣ-ಆಗ್ನೇಯಕ್ಕೆ ಹಾಗೂ ಚೆನ್ನೈನಿಂದ 490 ಕಿ.ಮೀ ದಕ್ಷಿಣಕ್ಕೆ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯಲ್ಲಿತ್ತು. ಇದೀಗ ಈ ಚಂಡಮಾರುತ ಶ್ರೀಲಂಕಾದ ಕರಾವಳಿ ಮತ್ತು ನೈರುತ್ಯ ಬಂಗಾಳಕೊಲ್ಲಿಯ ಮೂಲಕ ಸಾಗಿ, ಭಾನುವಾರ ಬೆಳಿಗ್ಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆಯ ಸೂಚನೆ ಪ್ರಕಾರ, ತಮಿಳುನಾಡಿನಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕಡಲೂರು, ಮೈಲಾಡುತುರೈ, ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಜೊತೆಗೆ ಪುದುಚೇರಿಗೆ ರೆಡ್ ಅಲರ್ಟ್ ನೀಡಲಾಗಿದೆ.
ಅಲ್ಲದೇ ಚೆನ್ನೈ, ಸೇಲಂ, ತಂಜಾವೂರು ಮತ್ತು ರಾಣಿಪೇಟ್ ಸೇರಿದಂತೆ 14 ಡೆಲ್ಟಾ ಮತ್ತು ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಬಹುದು ಎನ್ನಲಾಗಿದೆ. ವೆಲ್ಲೂರು ಸೇರಿದಂತೆ ಆರು ಇತರ ಜಿಲ್ಲೆಗಳಲ್ಲಿ ಶನಿವಾರದಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ಕರ್ನಾಟಕದಲ್ಲಿ ಮಾರ್ಚ್ನಲ್ಲಿ ಹೆಚ್ಚಾಗಲಿದೆ ಬಿಸಿಲು! ಎಲ್ಲೆಲ್ಲಿ ಗೊತ್ತಾ?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!



Click it and Unblock the Notifications