ಪದಾರ್ಥಗಳ ಹಣದುಬ್ಬರ ಏರಿಕೆ ಆಗುತ್ತಲೇ ಇದೆ ಮತ್ತು ಗ್ರಾಹಕ ಬಳಕೆ ವಸ್ತುಗಳು ಮೂರರಿಂದ ಐದು ಪರ್ಸೆಂಟ್ ಏರಿಕೆ ಕಾಣುವ ಸಾಧ್ಯತೆ ಇದೆ. ಇದರ ಜತೆಗೆ ಆಮದು ಪ್ರಮಾಣ ಕಡಿಮೆ ಮಾಡಲಾಗಿದೆ ಮತ್ತು ಉಕ್ಕು, ತಾಮ್ರ ಸೇರಿದಂತೆ ಇತರ ಲೋಹಗಳು ಐದರಿಂದ ಹನ್ನೊಂದು ಪರ್ಸೆಂಟ್ ಗಳಿಕೆ ಕಂಡಿವೆ.
ಮುಂದಿನ ತಿಂಗಳಿಂದ, ಅಂದರೆ ಡಿಸೆಂಬರ್ ನಿಂದ ಗೃಹೋಪಯೋಗಿ ವಸ್ತುಗಳಾದ ವಾಷಿಂಗ್ ಮಷೀನ್, ರೆಫ್ರಿಜರೇಟರ್, ಟೆಲಿವಿಷನ್ ಸೆಟ್ ಗಳು ಮತ್ತು ಏರ್ ಕಂಡೀಷನರ್ ಗಳ ಬೆಲೆಯಲ್ಲಿ ಮೂರರಿಂದ ಐದು ಪರ್ಸೆಂಟ್ ತುಟ್ಟಿ ಆಗುತ್ತದೆ. ಅದಕ್ಕೆ ಕಾರಣ ಏನೆಂದರೆ, ಪದಾರ್ಥಗಳ ಬೆಲೆಯಲ್ಲಿ ಏರಿಕೆ ಆಗಿದೆ. ಆದ್ದರಿಂದ ಕಂಪೆನಿಗಳು ಬೆಲೆ ಏರಿಕೆಗೆ ಮುಂದಾಗಿವೆ.
ಇದೇ ಸಂಗತಿ ಗೃಹ ನಿರ್ಮಾಣ ವಲಯಕ್ಕೂ ಅನ್ವಯಿಸುತ್ತದೆ. ಎಲ್ಲ ವಲಯಗಳಲ್ಲೂ ಸಿಮೆಂಟ್ ಒಂದು ಬ್ಯಾಗ್ ಗೆ ಐದು ರುಪಾಯಿಯಿಂದ ಹದಿನೈದು ರುಪಾಯಿ ಹೆಚ್ಚಳವಾಗಿದೆ. "ಹಣದುಬ್ಬರವು ಎರಡು ಹಂತದಲ್ಲಿ ರಿಯಲ್ ಎಸ್ಟೇಟ್ ವಲಯಕ್ಕೆ ಪೆಟ್ಟು ನೀಡಿದೆ. ಒಂದು, ಬಾಡಿಗೆ ಹೆಚ್ಚಲು ಕಾರಣವಾಗಿದೆ ಮತ್ತು ಆಸ್ತಿಗಳ ಮಾಲೀಕತ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಲು ಕಾರಣವಾಗಿದೆ. ಆದಾಯ ಇಳಿಕೆ ಆಗುತ್ತಿದೆ ಎಂಬ ಒತ್ತಡವಿದೆ. ಇದರ ಜತೆಗೆ ನಗದು ಸಮಸ್ಯೆ ಇದೆ," ಎನ್ನುತ್ತಾರೆ ಆರ್ ಎಂಜೆಡ್ ಮ್ಯಾನೇಜಿಂಗ್ ಡೈರೆಕ್ಟರ್.

ಹಬ್ಬದ ಸೀಸನ್ ನಲ್ಲಿ ಪದಾರ್ಥಗಳ ಬೆಲೆ ಏರಿಕೆ ಮಧ್ಯೆಯೂ ಉತ್ಪಾದಕರು ಬೆಲೆ ಏರಿಕೆ ಮಾಡಿಲ್ಲ. ಆದರೆ ಡಿಸೆಂಬರ್ ನಿಂದ ಪದಾರ್ಥಗಳಾ ಬೆಲೆ ಸ್ಥಿರವಾಗಿ ಏರಿಕೆ ಆಗುವ ಸಾಧ್ಯತೆ ಇದೆ. ಜತೆಗೆ ಆಮದು ಕಡೆಯಿಂದ ಸವಾಲಿದ್ದು, ಪೂರೈಕೆ ಕೊರತೆ ಎದುರಾಗಿದೆ. ಇದರಿಂದ ವಸ್ತುಗಳ ಬೆಲೆ ಮೇಲೆ ಪರಿಣಾಮ ಆಗುತ್ತದೆ ಎಂದು ಅವರು ಹೇಳುತ್ತಾರೆ.
ಇನ್ನು ಚೀನಾದಿಂದ ಆಮದು ಮಾಡಿಕೊಳ್ಳುವುದರ ಮೇಲೆ ನಿರ್ಬಂಧ ಹಾಕಿರುವುದು ಸಹ ಮುಖ್ಯವಾಗಿ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಬಿಕ್ಕಟ್ಟಿನ ಮಧ್ಯೆ ವಾಷಿಂಗ್ ಮಶೀನ್, ಮೈಕ್ರೋವೇವ್, ಅಡುಗೆ ಮನೆಯ ವಸ್ತುಗಳು ಮುಂತಾದವಕ್ಕೆ ಬೇಡಿಕೆ ಹೆಚ್ಚಿದೆ. ಅದೇ ರೀತಿ ಟಿವಿಎಸ್ ಮೋಟಾರ್ಸ್, ಅಶೋಕ್ ಲೇಲ್ಯಾಂಡ್ ಸಹ ಬೆಲೆ ಏರಿಕೆಗೆ ಸಿದ್ಧವಾಗಿವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications