ಕಾಂಗ್ರೆಸ್ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಆ ಯೋಜನೆಗಳಲ್ಲಿ ಈಗ ಒಟ್ಟಾಗಿ ನಾಲ್ಕು ಯೋಜನೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ಜಾರಿ ಮಾಡಿದೆ. ಆ ಪೈಕಿ ಗೃಹ ಲಕ್ಷ್ಮೀ ಯೋಜನೆ ಕೂಡಾ ಒಂದಾಗಿದ್ದು, ಈ ಯೋಜನೆ ಫಲಾನುಭವಿಗಳಿಗೆ ದಸರಾದ ಭರ್ಜರಿ ಉಡುಗೊರೆ ಲಭ್ಯವಾಗಲಿದೆ.
ಪ್ರತಿ ತಿಂಗಳ 2 ಸಾವಿರ ರೂಪಾಯಿಯಂತೆ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಒಟ್ಟು 4 ಸಾವಿರ ರೂಪಾಯಿಯನ್ನು ಜಮೆ ಮಾಡಲಾಗುತ್ತದೆ ಎಂದು ವರದಿಯು ಉಲ್ಲೇಖ ಮಾಡಿದೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

4 ಸಾವಿರ ರೂಪಾಯಿ ಜಮೆಯಾಗುತ್ತಾ?
ಈಗಾಗಲೇ ಕೆಲವು ಮಹಿಳೆಯರಿಗೆ ಆಗಸ್ಟ್ ತಿಂಗಳ 2 ಸಾವಿರ ರೂಪಾಯಿ ಮೊತ್ತವನ್ನು ಜಮೆ ಮಾಡಲಾಗಿದೆ. ಆದರೆ ಇನ್ನೂ ಕೆಲವು ಮಂದಿಗೆ 2000 ರೂಪಾಯಿಯನ್ನು ಜಮೆ ಮಾಡಲಾಗಿಲ್ಲ. ಈ ಫಲಾನುಭವಿಗಳಿಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ದಸರಾ ಉಡುಗೊರೆಯಾಗಿ ಒಂದೇ ಬಾರಿಗೆ 4 ಸಾವಿರ ರೂಪಾಯಿ ಜಮೆ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. "ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಧನಸಹಾಯ ನೀಡಲಾಗುತ್ತಿದೆ," ಎಂದು ತಿಳಿಸಿದ್ದಾರೆ.
"ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು 4,449 ಕೋಟಿ ರೂಪಾಯಿ ಅನುದಾನ ಬಳಕೆ ಮಾಡಿದೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ," ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಉಲ್ಲೇಖಿಸಿದ್ದಾರೆ.
ಹಣ ಜಮೆಯಾಗಿಲ್ಲವೇ? ಕಾರಣ ತಿಳಿಯಿರಿ
ಈ ಯೋಜನೆಯಲ್ಲಿ 9,44,155 ಅರ್ಜಿದಾರರಿಗೆ ಹಣ ಜಮೆಯಾಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಣವನ್ನು ತಿಳಿಸಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದಾರೆ. ಆದ್ದರಿಂದಾಗಿ ಅನರ್ಹರಾಗಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಇನ್ನು 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಿರುವ ಕಾರಣದಿಂದಾಗಿಯೂ ಹಣ ಜಮೆಯಾಗಿಲ್ಲ. ಈ ಖಾತೆಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. ಇನ್ನು 5,96,268 ಫಲಾನುಭವಿಗಳ ಖಾತೆಗೆ ಆಧಾರ್ ಲಿಂಕ್ ಆಗಿಲ್ಲ ಎಂದು ಹೇಳಿದರು.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications