ಡಿಬಿಎಸ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಲಕ್ಷ್ಮೀ ವಿಲಾಸ್ ಬ್ಯಾಂಕ್ ವಿಲೀನ ಆಗುವುದನ್ನು ಸರ್ಕಾರ ತಡೆಯಬೇಕು ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಯ ನಿರ್ವಹಣೆ ಬಗ್ಗೆ ಸಿಬಿಐ ವಿಚಾರಣೆ ಆಗಬೇಕು ಎಂದು ರಾಜ್ಯ ಸಭಾ ಸಂಸದ ಹಾಗೂ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೇಳಿದ್ದಾರೆ.
ಪ್ರಧಾನ ಮಂತ್ರಿಗೆ ಪತ್ರ ಬರೆದಿರುವ ಅವರು, ಆರ್ ಬಿಐ ಕಾರ್ಯ ನಿರ್ವಹಣೆ ಬಗ್ಗೆ ಸಿಬಿಐ ತನಿಖೆಗೆ ಮನವಿ ಮಾಡುತ್ತೇನೆ, ಅದರಲ್ಲೂ ವಿಶೇಷವಾಗಿ ಯಾವುದೇ ಹೈ ಪ್ರೊಫೈಲ್ ಹಗರಣದಲ್ಲೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಯಾವ ಅಧಿಕಾರಿ, ಹುದ್ದೆಗೆ ಸಂಬಂಧಿಸಿದವರನ್ನು ವಿಚಾರಣೆ ನಡೆಸುವುದು ಅಗತ್ಯ ಎಂದು ಯಾವತ್ತೂ ಪರಿಗಣಿಸದಿರುವುದನ್ನು ಗಮನಿಸಬೇಕು ಎಂದಿದ್ದಾರೆ.
ಆರ್ ಬಿಐ ಕಾರ್ಯ ನಿರ್ವಹಣೆಯು ಸರ್ಕಾರದ ಆದ್ಯತೆ ಆಗಬೇಕು ಮತ್ತು ಈ ತನಿಖೆ ಪೂರ್ತಿ ಆಗುವ ತನಕ ಆರ್ ಬಿಐ ಗವರ್ನರ್ ಅನ್ನು ಅನಿರ್ದಿಷ್ಟಾವಧಿ ರಜೆ ಮೇಲೆ ಕಳುಹಿಸಬೇಕು. ಜತೆಗೆ ಆರ್ ಬಿಐ ಮಂಡಳಿ ಹಾಗೂ ಸಲಹಾ ಸಮಿತಿ ಪುನಾರಚನೆ ಆಗಬೇಕು ಎಂದು ಸ್ವಾಮಿ ಕೇಳಿದ್ದಾರೆ.

ಲಕ್ಷ್ಮೀವಿಲಾಸ್ ಬ್ಯಾಂಕ್ ಆಸ್ತಿಯನ್ನು ಸುಪರ್ದಿಗೆ ಪಡೆದ ಡಿಬಿಎಸ್ ಬಗ್ಗೆ ಫೊರೆನ್ಸಿಕ್ ಆಡಿಟ್ ಆಗಬೇಕು ಎಂಬ ಕಾರಣಕ್ಕೆ ಡಿಬಿಎಸ್ ನಲ್ಲಿ ಎಲ್ ವಿಬಿ ವಿಲೀನ ಆಗುವುದಕ್ಕೆ ತಡೆ ಹಾಕಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಡಿಬಿಎಸ್ ವಿರುದ್ಧ ಮಾಡಿರುವ ಆರೋಪದ ತನಿಖೆ ಆಗಬೇಕು. ಇನ್ನು ಅದರ ತಾಯ್ನಾಡಾದ ಸಿಂಗಾಪೂರದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಆರೋಪಗಳಿವೆ ಎಂದಿದ್ದಾರೆ.
ಅಚ್ಚರಿ ಏನೆಂದರೆ, ಷೇರುದಾರರಿಗೆ ಆಕ್ಷೇಪಣೆ ಸಲ್ಲಿಸಲು ನವೆಂಬರ್ 20, 2020ರ ಕಾರ್ಯ ನಿರ್ವಹಣೆ ಅವಧಿಯೊಳಗೆ ಸಲ್ಲಿಸಲು ಕೇಳಲಾಗುತ್ತದೆ. ಆದರೆ ಪ್ರತಿಕ್ರಿಯೆ ದಾಖಲಿಸಲು 72 ಗಂಟೆಗಿಂತ ಕಡಿಮೆ ಸಮಯ ನೀಡಲಾಗಿದೆ ಎಂದು ಪತ್ರದಲ್ಲಿ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications