ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸುದ್ದಿ ಹರಿದಾಡುತ್ತಿದ್ದು ಈ ಬಗ್ಗೆ ಸರ್ಕಾರ ಸ್ಪಷ್ಟಣೆಯನ್ನು ನೀಡಿದೆ. ಈ ಬಗ್ಗೆ ಫಾಕ್ಟ್ ಚೆಕ್ ಮಾಡಲಾಗಿದ್ದು ಸುದ್ದಿ ಸುಳ್ಳು ಎಂಬುವುದು ತಿಳಿದು ಬಂದಿದೆ.
ಕೇಂದ್ರದ ನೋಡಲ್ ಏಜೆನ್ಸಿಯಾದ ಸಾರ್ವಜನಿಕ ಮಾಹಿತಿ ಬ್ಯೂರೋದ (ಪಿಐಬಿ) ಸತ್ಯ ಪರಿಶೀಲನಾ ವಿಭಾಗವು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) 34 ರಿಂದ 38 ರಷ್ಟು ಹೆಚ್ಚಳ ಮಾಡಲಾಗಿದೆ ಎಂಬ ಪತ್ರದ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಪತ್ರವನ್ನು ವಾಟ್ಸಾಪ್ನಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದು ಕೂಡಾ ಪಿಬಿಐ ಹೇಳಿದೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಸ್ಪಷ್ಟಣೆ ನೀಡಲಾಗಿದೆ. ಟ್ವಿಟರ್ನಲ್ಲಿ "ನಕಲಿ ಆದೇಶ" ದ ಚಿತ್ರವನ್ನು ಹಂಚಿಕೊಂಡಿರುವ ಪಿಐಬಿ ಫ್ಯಾಕ್ಟ್ ಚೆಕ್ ತಂಡವು ಈ ಬಗ್ಗೆ ಮಾಹಿತಿ ನೀಡಿದೆ. ವಾಟ್ಸಾಪ್ನಲ್ಲಿ ಹರಡುತ್ತಿರುವ ನಕಲಿ ಆದೇಶದಲ್ಲಿ ಜುಲೈ 1, 2022 ರಿಂದ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ.

ನಕಲಿ ಪತ್ರದಲ್ಲಿ ಏನು ಬರೆಯಲಾಗಿದೆ?
ಇಲಾಖೆಯು ಈ ರೀತಿ ಯಾವುದೇ ಆದೇಶವನ್ನು ಹೊರಡಿಸಿಲ್ಲ. ಈ ಚಿತ್ರವು ನಕಲಿ. ಇಂತಹ ಪತ್ರವನ್ನು ಹಣಕಾಸು ಸಚಿವಾಲಯವು ನೀಡಿಲ್ಲ ಎಂದು ಬರೆಯಲಾಗಿದೆ. "ನಕಲಿ ಸುತ್ತೋಲೆ"ಯಲ್ಲಿ "ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅನುದಾನ- ಪರಿಷ್ಕೃತ ದರಗಳು 01.07.2022 ರಿಂದ ಜಾರಿಗೆ ಬರುತ್ತವೆ," ಎಂದು ಉಲ್ಲೇಖಿಸಲಾಗಿದೆ.
"ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿಭತ್ಯೆಯು ಜುಲೈ 1 2022 ರಿಂದ ಜಾರಿಗೆ ಬರುತ್ತದೆ. ವೇತನವು ಶೇಕಡ 34ರಿಂದ ಶೇಕಡ 38ಕ್ಕೆ ಹೆಚ್ಚಳ ಮಾಡಲು ನಿರ್ಧರಿಸುವ ವಿಚಾರದಲ್ಲಿ ರಾಷ್ಟ್ರಪತಿಗಳು ಸಂತಸಪಟ್ಟಿದ್ದಾರೆ," ಎಂದು ಕೂಡಾ ಬರೆಯಲಾಗಿದೆ. ಇನ್ನು ಇದು ಅಧಿಕೃತ ಎಂದು ತೋರಿಸುವ ನಿಟ್ಟಿನಲ್ಲಿ ಮೆಮೊರಾಂಡಮ್ ಸಂಖ್ಯೆಯನ್ನು ಸಹ ಹಾಕಲಾಗಿದೆ. ಪತ್ರದಲ್ಲಿ ಭಾರತ ಸರ್ಕಾರದ ಉಪ ಕಾರ್ಯದರ್ಶಿ ನಿರ್ಮಲಾ ದೇವ್ ಅವರ ಸಹಿಯನ್ನು ಸಹ ಹೊಂದಿದೆ.
ಯಾವಾಗ ತುಟ್ಟಿಭತ್ಯೆ ಹೆಚ್ಚಳವಾಗುತ್ತದೆ?
ಸಾಮಾನ್ಯವಾಗಿ ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಜನವರಿ ಹಾಗೂ ಜುಲೈ ತಿಂಗಳಿನಲ್ಲಿ ತುಟ್ಟಿಭತ್ಯೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಜನವರಿ 2022 ರಲ್ಲಿ, ಕೇಂದ್ರ ಸರ್ಕಾರವು ಡಿಎಯನ್ನು ಶೇಕಡಾ 3 ರಷ್ಟು ಹೆಚ್ಚಿಸುವ ನಿರ್ಧಾರ ಮಾಡಿದೆ. ಇದರಿಂದಾಗಿ ತುಟ್ಟಿಭತ್ಯೆಯು ಶೇಕಡ 34ಕ್ಕೆ ಏರಿದೆ. ಮುಂದಿನ ಕಂತಿನ ಘೋಷಣೆ ಬಾಕಿಯಿದ್ದು, ಸದ್ಯಕ್ಕೆ ಸುಮಾರು 47 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರು ತುಟ್ಟಿಭತ್ಯೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications