ಬೆಂಗಳೂರು, ಏಪ್ರಿಲ್ 17: ಕರ್ನಾಟಕದಾದ್ಯಂತ ಅಧಿಕ ತಾಪಮಾನದ ನಡುವೆ ಬಿಯರ್ ಮಾರಾಟವು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದೆ. ಗಮನಾರ್ಹವಾಗಿ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.
ವರದಿಯ ಪ್ರಕಾರ, ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನ ಮದ್ಯ ಮಾರಾಟದ ಏರಿಕೆಗೆ ಕಾರಣ. ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ 23.5 ಲಕ್ಷ ಕಾರ್ಟನ್ ಬಾಕ್ಸ್ ಬಿಯರ್ ಮಾರಾಟವಾಗಿದೆ ಎಂದು ಹೇಳಿದೆ.

ಈ ತಿಂಗಳ ಮೊದಲ ವಾರದಲ್ಲಿ ಭಾರತೀಯ ಹವಾಮಾನ ಇಲಾಖೆಯು ಈ ಬೇಸಿಗೆಯಲ್ಲಿ ಮಧ್ಯ, ಉತ್ತರ ಬಯಲು ಪ್ರದೇಶಗಳು ಮತ್ತು ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಶಾಖದ ಅಲೆಗಳ ದಿನಗಳು ಮುಂದುವರೆಯುತ್ತದೆ ಎಂದು ಮುನ್ಸೂಚನೆ ನೀಡಿದೆ. ಅಬಕಾರಿ ಇಲಾಖೆಯಿಂದ ಪಡೆದ ಅಂಕಿಅಂಶದ ಪ್ರಕಾರ ಏಪ್ರಿಲ್ 2023 ರ ಸಂಪೂರ್ಣ ತಿಂಗಳಿಗೆ ದಾಖಲಾದ ಒಟ್ಟು ಮಾರಾಟದಲ್ಲಿ ಕರ್ನಾಟಕವು ಈಗಾಗಲೇ 61% ಅನ್ನು ಸಾಧಿಸಿದೆ ಎಂದು ತಿಳಿಸಿದೆ.
ಕಳೆದ ಏಪ್ರಿಲ್ನಲ್ಲಿ 38.6 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದರೆ, ಈ ವರ್ಷ ತಿಂಗಳ ಮೊದಲ ಎರಡು ವಾರಗಳಲ್ಲಿ 23.5 ಲಕ್ಷ ಬಾಕ್ಸ್ಗಳು ಮಾರಾಟವಾಗಿವೆ ಎಂದು ಅಬಕಾರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಡೇಟಾವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ 2024 ರ ಆರಂಭದಿಂದಲೂ ಬಿಯರ್ ಮಾರಾಟವು ಗಗನಕ್ಕೇರುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿದು ಬಂದಿದೆ.
ಫೆಬ್ರವರಿ ಮತ್ತು ಮಾರ್ಚ್ನಲ್ಲಿ ಮಾರಾಟವು ಹಿಂದಿನ ವರ್ಷದ ದಾಖಲೆಗಳನ್ನು ಮೀರಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬೇಸಿಗೆಯಲ್ಲಿ ಅಬಕಾರಿ ಇಲಾಖೆಯು ಮಾರಾಟದಲ್ಲಿ 30% ಹೆಚ್ಚಳ ಕಂಡು ಬಂದಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ದಾಸ್ತಾನು ಹೊಂದಿದೆ ಎಂದು ಅಬಕಾರಿ ಇಲಾಖೆ ದೃಢಪಡಿಸಿದೆ.
ಲೋಕಸಭೆ ಚುನಾವಣೆ ಪರಿಣಾಮ
ಬೇಸಿಗೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬಿಯರ್ ಅನೇಕರಿಗೆ ಆಯ್ಕೆಯ ಪಾನೀಯವಾಗಿದೆ. ತಾಪಮಾನ ಹೆಚ್ಚಾದಂತೆ ಬಿಯರ್ ಸೇವನೆಯೂ ಹೆಚ್ಚಾಗುತ್ತದೆ. ಇದಲ್ಲದೆ ಲೋಕಸಭಾ ಚುನಾವಣೆಯ ಪರಿಣಾಮ ಬಿಯರ್ ಮಾರಾಟವನ್ನು ಮತ್ತಷ್ಟು ಹೆಚ್ಚಿಸಿವೆ. ಚಿಲ್ಡ್ ಬಿಯರ್ ಆದ್ಯತೆಯ ಆಯ್ಕೆಯಾಗಿದೆ. ಇದು ಏರುವ ಶಾಖದಿಂದ ಪಾರಾಗಲು ಸಹಕಾರಿ ಎಂದು ಜನ ನಂಬುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
More From GoodReturns

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru: ಬೆಂಗಳೂರು ಮೂಲಸೌಕರ್ಯ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳಿಗೆ 7000 ಕೋಟಿ ರೂ. ಹೂಡಿಕೆ!

BMTC Bus: ಬೆಂಗಳೂರು-ರಾಮನಗರ ಮತ್ತು ಕನಕಪುರಕ್ಕೆ ಬಿಎಂಟಿಸಿ ಬಸ್… ಬಸ್ ನಿಲ್ದಾಣಗಳ ಬಗ್ಗೆ ತಿಳಿಯಿರಿ

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!



Click it and Unblock the Notifications