ಕಾಂಗ್ರೆಸ್ ಯುವ ಘಟಕವು ನಿರುದ್ಯೋಗ ಸಮಸ್ಯೆ ವಿರುದ್ಧ "ರೈಸ್ ದ ವಾಯ್ಸ್" ಅಭಿಯಾನವನ್ನು ಭಾನುವಾರ ಆರಂಭಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, ಅಪನಗದೀಕರಣದ ತೀರ್ಮಾನ ಹಾಗೂ ದೋಷಪೂರಿತ ಜಿಎಸ್ ಟಿ ಜಾರಿ ಹಾಗೂ ಲಾಕ್ ಡೌನ್ ಈ ದೇಶದ ಆರ್ಥಿಕ ರಚನೆಯನ್ನೇ ನಾಶ ಮಾಡಿದವು ಎಂದಿದ್ದಾರೆ.
ನರೇಂದ್ರ ಮೋದಿ ಪ್ರಧಾನಿ ಆಗುವಾಗ ಈ ದೇಶದ ಯುವಜನರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಒದಗಿಸುವ ಮಾತು ನೀಡಿದ್ದರು. ಅವರು ಕನಸುಗಳನ್ನು ಮಾರಿದರು. ಆದರೆ ವಾಸ್ತವದಲ್ಲಿ ನರೇಂದ್ರ ಮೋದಿ ರಾಜಕಾರಣದಿಂದ 14 ಕೋಟಿ ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ ರಾಹುಲ್.
ಇದು ಯಾಕೆ ಆಯಿತು? ತಪ್ಪಾದ ನೀತಿಗಳಿಂದ. ಅಪನಗದೀಕರಣ, ದೋಷಪೂರಿತ ಜಿಎಸ್ ಟಿ ಜಾರಿ ಹಾಗೂ ಲಾಕ್ ಡೌನ್- ಈ ಮೂರು ಹೆಜ್ಜೆಗಳು ದೇಶದ ಆರ್ಥಿಕತೆ ರಚನೆಯನ್ನೇ ನಾಶ ಮಾಡಿದವು. ಈಗ ಸತ್ಯ ಏನೆಂದರೆ, ಯುವಜನರಿಗೆ ಉದ್ಯೋಗ ನೀಡುವ ಸ್ಥಿತಿಯಲ್ಲಿ ಭಾರತ ಇಲ್ಲ. ಆ ಕಾರಣಕ್ಕೆ ಯುವ ಕಾಂಗ್ರೆಸ್ ರಸ್ತೆಗೆ ಇಳಿದು ಈ ವಿಚಾರದ ವಿರುದ್ಧ ಧ್ವನಿ ಎತ್ತುತ್ತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಯುವಜನ ವಿರೋಧಿ ನೀತಿಗಳ ಬಗ್ಗೆ ಯುವಕ- ಯುವತಿಯರಲ್ಲಿ ಸಾಮಾಜಿಕ ಮಾಧ್ಯಮಗಳು ಮತ್ತು ಇತರ ಮಾಧ್ಯಮಗಳ ಮೂಲಕ ಗಮನ ಸೆಳೆಯಲಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇನ್ನು ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾಗಿ 2014ರಲ್ಲಿ ಅಧಿಕಾರ ಸ್ವೀಕರಿಸಿದಾಗ ನಿರುದ್ಯೋಗ ದರ 4.9 ಪರ್ಸೆಂಟ್ ಇತ್ತು. 2020ರಲ್ಲಿ ಅದು 29 ಪರ್ಸೆಂಟ್ ಆಗಿದೆ. ಇನ್ನು ಜಿಡಿಪಿ ಅಂದಾಜು -4ರಿಂದ -7.5 ಪರ್ಸೆಂಟ್ ಆಗಬಹುದು ಎಂಬ ಅಂದಾಜಿದೆ. ತೆರಿಗೆ ಸಂಗ್ರಹದಲ್ಲಿ 46 ಪರ್ಸೆಂಟ್ ಇಳಿಕೆ ಆಗಿದೆ ಹಾಗೂ 12 ಕೋಟಿ ಮಂದಿ ತಮ್ಮ ಉದ್ಯೋಗ ಕಳೆದುಕೊಳ್ಳಬಹುದು ಎಂದು ಹೇಳಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications