ಮಹಾಮಾರಿ ಕೊರೊನಾಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ವಿಮಾನದಲ್ಲಿ ಮೂರು ಸೀಟ್ಗಳಲ್ಲಿ ಇಬ್ಬರು ಮಾತ್ರ ಕುಳಿತುಕೊಂಡು ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ನಾಗರೀಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) ಆದೇಶಿಸಿದೆ.
ದೇಶೀಯ ಸರ್ಕ್ಯೂಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ವಿಮಾನದೊಳಗಿನ ಪ್ರಯಾಣಿಕರು ಮೂರು ಆಸನವಿರುವ ಜಾಗದಲ್ಲಿ ಒಬ್ಬರಿಗೊಬ್ಬರು ಹತ್ತಿರ ಕುಳಿತುಕೊಳ್ಳದಂತೆ ನೋಡಿಕೊಳ್ಳುವಂತೆ ಆದೇಶಿಸಿದೆ.
"ಚೆಕ್-ಇನ್ ಸಮಯದಲ್ಲಿ ಆಸನ ಹಂಚಿಕೆ ಮಾಡುವಾಗ ಇಬ್ಬರು ಪ್ರಯಾಣಿಕರ ನಡುವಿನ ಆಸನವನ್ನು ಖಾಲಿ ಇಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು" ಎಂದು ಡಿಜಿಸಿಎ ಸುತ್ತೋಲೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ನಡುವೆ ಇರಬೇಕು 1 ಮೀಟರ್ ಅಂತರ
ಚೆಕ್-ಇನ್ ಮತ್ತು ಬೋರ್ಡಿಂಗ್ ಸಮಯದಲ್ಲಿ ಇಬ್ಬರು ಪ್ರಯಾಣಿಕರ ನಡುವೆ ಸಾಮಾಜಿಕ ದೂರವನ್ನು ಖಚಿತಪಡಿಸಿಕೊಳ್ಳಲು ವಾಯುಯಾನ ನಿಯಂತ್ರಕದ ಪ್ರಯತ್ನವಾಗಿದೆ. ಎರಡು ಚೆಕ್-ಇನ್ ಕೌಂಟರ್ಗಳ ನಡುವೆ 1 ಮೀಟರ್ ಅಂತರವನ್ನು ಕಾಯ್ದುಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಇದನ್ನ ತಪ್ಪಿಸಿದ್ದಲ್ಲಿ ಭಾರೀ ದಂಡ ತೆರಬೇಕಾಗುತ್ತದೆ.
ಕ್ಯಾಬಿನ್ ಸಿಬ್ಬಂದಿಗೂ ಅಂತರ ಕಾಯ್ದುಕೊಳ್ಳಲು ಆದೇಶ
ಪ್ರಯಾಣಿಕರು ಕುಳಿತುಕೊಳ್ಳುವ ಸೀಟಿನ ನಡುವೆ ಅಂತರವಿರಬೇಕು ಎಂಬ ಆದೇಶದ ಜೊತೆಗೆ, ಕ್ಯಾಬಿನ್ ಸಿಬ್ಬಂದಿಯು ಸೇವೆ ಒದಗಿಸುವಾಗ ಪ್ರಯಾಣಿಕರೊಂದಿಗೆ ಸುರಕ್ಷಿತ ದೂರವನ್ನು ಕಾಯ್ದುಕೊಳ್ಳಬೇಕು ಎಂದು ಡಿಜಿಸಿಎ ಆದೇಶಿಸಿದೆ.
ವಿಮಾನಗಳಿಗೆ ಕಾಯುತ್ತಿರುವಾಗಲು ಹತ್ತಿರ ಕೂರುವಂತಿಲ್ಲ
ವಿಮಾನದಲ್ಲಿ ಪ್ರಯಾಣ ಮಾಡುವಾಗ ಮೂರು ಸೀಟಿನಲ್ಲಿ ಇಬ್ಬರು ಕುಳಿತಕೊಳ್ಳಬೇಕು. ಎರಡು ಸೀಟುಗಳ ನಡುವೆ ಅಂತರವಿರಬೇಕು ಎಂಬ ಆದೇಶದ ಜೊತೆಗೆ ಪ್ರಯಾಣಿಕರು ತಮ್ಮ ವಿಮಾನಗಳಿಗಾಗಿ ಕಾಯುತ್ತಿರುವಾಗ ಪರಸ್ಪರ ಹತ್ತಿರ ಕುಳಿತುಕೊಳ್ಳದಂತೆ ನೋಡಿಕೊಳ್ಳುವಂತೆ ಸಹ ಆದೇಶಿಸಲಾಗಿದೆ. ಜೊತೆಗೆ ಪ್ರಯಾಣಿಕರು ಸ್ಯಾನಿಟೈಸರ್ ಬಳಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿಮಾನ ನಿಲ್ದಾಣ ನಿರ್ವಾಹಕರಿಗೆ ಸೂಚಿಸಿದೆ.
ವಿಮಾನಗಳ ಹಾರಾಟದಲ್ಲಿ ಅರ್ಧದಷ್ಟು ಇಳಿಕೆ
ದೇಶದಲ್ಲಿ ಕೊರೊನಾವೈರಸ್ ಭೀತಿ ಹಾಗೂ ಪ್ರಯಾಣಿಕರು ಕಮ್ಮಿ ಆಗಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ, ಮೂರನೇ ಎರಡರಷ್ಟು ವಿಮಾನಗಳನ್ನು ರದ್ದುಗೊಳಿಸಿದೆ. ಗೋ ಏರ್ ವಿಮಾನಯಾನ ಸಂಸ್ಥೆಯು ತನ್ನ 60 ಪರ್ಸೆಂಟ್ ವಿಮಾನವನ್ನು ಹಾರಾಟ ನಡೆಸುತ್ತಿಲ್ಲ. ಇನ್ನು ವಿಸ್ತಾರ ಕೂಡ ಅರ್ಧದಷ್ಟು ವಿಮಾನಗಳ ಹಾರಾಟ ಸ್ಥಗಿತಗೊಳಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications