ಜಾರಿ ನಿರ್ದೇಶನಾಲಯವು (ಇ.ಡಿ.) ಗುರುವಾರದಂದು ಡಿಎಚ್ ಎಫ್ ಎಲ್ ಪ್ರವರ್ತಕರಾದ (ಪ್ರಮೋಟರ್ಸ್) ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರನ್ನು ಬಂಧಿಸಿದೆ. ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಪಿಲ್- ಧೀರಜ್ ಸೋದರರನ್ನು ಮುಂಬೈನಲ್ಲಿ ಇರುವ ವಿಶೇಷ ಕೋರ್ಟ್ ಹತ್ತು ದಿನಗಳ ಕಾಲ ಇ.ಡಿ. ವಶಕ್ಕೆ ನೀಡಿದೆ. ಇದೇ ಪ್ರಕರಣಕ್ಕೆ ವಾಧ್ವಾನ್ ಸೋದರರನ್ನು ಸಿಬಿಐ ಬಂಧಿಸಿದ್ದು, ಸದ್ಯಕ್ಕೆ ಜೈಲಿನಲ್ಲಿ ಇದ್ದಾರೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (PMLA) ಅಡಿಯಲ್ಲಿ ಇವರಿಬ್ಬರನ್ನು ಬಂಧಿಸಲಾಗಿದೆ.
ಕೊರೊನಾ ಕಾರಣ ನೀಡಿ ವಿಚಾರಣೆಗೆ ತಪ್ಪಿಸಿದ್ದರು
ಗ್ಯಾಂಗ್ ಸ್ಟರ್ ಇಕ್ಬಾಲ್ ಮಿರ್ಚಿಗೆ ಸಂಬಂಧಿಸಿದ ಮತ್ತೊಂದು ಅಕ್ರಮ ಹಣ ವರ್ಗಾವಣೆಯಲ್ಲಿ ಕೂಡ ವಾಧ್ವಾನ್ ಸೋದರರು ಇ.ಡಿ. ವಿಚಾರಣೆ ಎದುರಿಸುತ್ತಿದ್ದಾರೆ. ಯೆಸ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದರೂ ಕೊರೊನಾದ ಪ್ರಯಾಣ ನಿರ್ಬಂಧದ ಕಾರಣ ನೀಡಿ ತಪ್ಪಿಸಿದ್ದರು.
ವಾಧ್ವಾನ್ ಸೋದರರ ಕಾರು ವಶಕ್ಕೆ
ದೇಶದಾದ್ಯಂತ ಲಾಕ್ ಡೌನ್ ಇರುವ ವೇಳೆಯಲ್ಲಿ, ಕಳೆದ ಏಪ್ರಿಲ್ ನಲ್ಲಿ ವಾಧ್ವಾನ್ ಕುಟುಂಬ ಸದಸ್ಯರು ಅನಧಿಕೃತವಾಗಿ ಮಹಾರಾಷ್ಟ್ರದ ಲೋನಾವಾಲದಿಂದ ಮಹಾಬಲೇಶ್ವರಕ್ಕೆ ತೆರಳಿದ್ದರು ಎಂದು ವರದಿ ಆಗಿತ್ತು. ಆ ನಂತರ ವಾಧ್ವಾನ್ ಸೋದರರಿಗೆ ಸೇರಿದ ಐದು ಕಾರುಗಳನ್ನು ಇ.ಡಿ. ವಶಕ್ಕೆ ಪಡೆದಿತ್ತು.
34 ಸಾವಿರ ಕೋಟಿ ರುಪಾಯಿ ಬ್ಯಾಡ್ ಲೋನ್
ಹತ್ತು ದೊಡ್ಡ ಗ್ರೂಪ್ ಗಳ 44 ಕಂಪೆನಿಗಳಿಂದ ಯೆಸ್ ಬ್ಯಾಂಕ್ ನಲ್ಲಿ 34 ಸಾವಿರ ಕೋಟಿ ರುಪಾಯಿ ಬ್ಯಾಡ್ ಲೋನ್ ಇದೆ. ಅನಿಲ್ ಅಂಬಾನಿ ಗ್ರೂಪ್, ಎಸ್ಸೆಲ್ ಗ್ರೂಪ್, ಐಎಲ್ ಅಂಡ್ ಎಫ್ ಎಸ್, ದಿವಾನ್ ಹೌಸಿಂಗ್ ಫೈನಾನ್ಸ್ ಕಾರ್ಪೊರೇಷನ್, ಕಾಕ್ಸ್ ಅಂಡ್ ಕಿಂಗ್ಸ್ ಮತ್ತು ಭಾರತ್ ಇನ್ಫ್ರಾದಿಂದ ಇಷ್ಟು ದೊಡ್ಡ ಮೊತ್ತ ಬ್ಯಾಡ್ ಲೋನ್ ಆಗಿದೆ.
4300 ಕೋಟಿ ರುಪಾಯಿ ಕಿಕ್ ಬ್ಯಾಕ್
ಜಾರಿ ನಿರ್ದೇಶನಾಲಯ ಆರೋಪ ಮಾಡುವಂತೆ, ರಾಣಾ ಕಪೂರ್ ಮತ್ತು ಆತನ ಕುಟುಂಬ ಸದಸ್ಯರು, ಇತರರು ದೊಡ್ಡ ಮೊತ್ತದ ಸಾಲವನ್ನು ಯೆಸ್ ಬ್ಯಾಂಕ್ ನಿಂದ ಮಂಜೂರು ಮಾಡುವುದಕ್ಕೆ 4300 ಕೋಟಿ ರುಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಆ ನಂತರ ಸಾಲದ ಮೊತ್ತವು ನಾನ್ ಪರ್ಫಾರ್ಮಿಂಗ್ ಅಸೆಟ್ ಗಳಾಗಿವೆ (NPA). ಸದ್ಯಕ್ಕೆ ರಾಣಾ ಕಪೂರ್ ಕೂಡ ಜೈಲಿನಲ್ಲಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications